Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ವಿದ್ಯಾರ್ಥಿಗಳ ಅಮಾನತು...

ದಲಿತ ವಿದ್ಯಾರ್ಥಿಗಳ ಅಮಾನತು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾದ ವಿವಿ

ವಾರ್ತಾಭಾರತಿವಾರ್ತಾಭಾರತಿ22 Jan 2016 12:20 AM IST
share

ಸತ್ಯಶೋಧನಾ ಸಮಿತಿ ವರದಿ
ಹೈದರಾಬಾದ್: ದಲಿತ ವಿದ್ಯಾರ್ಥಿಗಳ ಅಮಾನತಿಗೆ ಸಂಬಂಧಿಸಿ, ಉಂಟಾಗಿದ್ದ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಹೈದರಾಬಾದ್ ವಿವಿಯ ಆಡಳಿತ ಮಂಡಳಿಯು ಲೋಪವೆಸಗಿದೆಯೆಂದು ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾನ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ದ್ವಿಸದಸ್ಯ ಸತ್ಯಶೋಧನಾ ಸಮಿತಿ ಅಭಿಪ್ರಾಯಿಸಿದೆ.

ಕೇಂದ್ರ ಮಾನವಸಂಪನ್ಮೂಲ ಇಲಾಖೆ ರಚಿಸಿದ ಈ ಸಮಿತಿಯು ತನ್ನ ವರದಿಯನ್ನು ಶನಿವಾರದೊಳಗೆ ಸಲ್ಲಿಸುವ ನಿರೀಕ್ಷೆಯಿದೆ. ಈ ವರದಿಯನ್ನು ಆಧರಿಸಿ, ಸಚಿವಾಲಯವು ವಿವಿ ಕುಲಪತಿ ಪ್ರೊ. ಅಪ್ಪಾರಾವ್ ಅವರನ್ನು ಉಚ್ಚಾಟಿಸುವ ಸಾಧ್ಯತೆಯಿದೆಯೆನ್ನಲಾಗಿದೆ.

ಅಪ್ಪಾರಾವ್, 2001ರಿಂದ 2004ರ ನಡುವೆ ವಿವಿ ಕ್ಯಾಂಪಸ್‌ನ ಮುಖ್ಯವಾರ್ಡನ್ ಆಗಿದ್ದಾಗಲೇ, ಅವರ ವಿರುದ್ಧ ದಲಿತ ವಿದ್ಯಾರ್ಥಿಗಳಲ್ಲಿ ಬಲವಾದ ಅಸಮಾಧಾನವಿತ್ತು. ವಿವಿಯ ಹಾಸ್ಟೆಲ್ ಹಾಗೂ ಭೋಜನಗೃಹಗಳಲ್ಲಿ, ಅಪ್ಪಾರಾವ್ ದಲಿತ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದಿದ್ದವು.

ಕಳೆದ ಸೆಪ್ಟೆಂಬರ್‌ನಲ್ಲಿ ವಿವಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾತ್ಮಕ ಘಟನೆಗಳ ಬಳಿಕ ರೋಹಿತ್ ವೇಮುಲಾ ಸಹಿತ ಐವರು ದಲಿತ ವಿದ್ಯಾರ್ಥಿಗಳ ಅಮಾನತು ಪ್ರಕರಣವು ಅಪ್ಪಾರಾವ್ ವಿರುದ್ಧದ ಆರೋಪಗಳಿಗೆ ಪುಷ್ಟಿ ನೀಡಿದ್ದವು.

‘ಶಿಕ್ಷೆ’ಯ ಪ್ರಮಾಣ ಕಡಿತಗೊಳಿಸಿದ್ದೆ; ಉಪಕುಲಪತಿ: ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಬಳಿಕ, ವಿವಾದದ ಸುಳಿಗೆ ಸಿಲುಕಿರುವ ಅಪ್ಪಾರಾವ್ ತಾನೋರ್ವ ಬಿಜೆಪಿ ಬೆಂಬಲಿಗನೆಂಬುದನ್ನು ನಿರಾಕರಿಸಿದ್ದಾರೆ. ಸಾಮಾನ್ಯ ಆಯ್ಕೆ ಪ್ರಕ್ರಿಯೆ ಮೂಲಕ, ಅರ್ಹತೆಯ ಆಧಾರದಲ್ಲಿ ನೇಮಕಗೊಂಡಿದ್ದಾಗಿ ಹೇಳುತ್ತಾರೆ. ತಾನು ಕೇಂದ್ರ ಸಚಿವರೊಬ್ಬರು ತನ್ನನ್ನು ಉಪಕುಲಪತಿ ಹುದ್ದೆಗೆ ಶಿಫಾರಸು ಮಾಡಿದ್ದಾರೆಂಬುದನ್ನು ಅವರು ಅಲ್ಲಗಳೆದಿದ್ದಾರೆ.

ಉಪಕುಲಪತಿಯ ಆಯ್ಕೆ ಎನ್‌ಡಿಎ ಅವಧಿಯಲ್ಲಿ ನಡೆದಿರುವುದು ಕೇವಲ ಕಾಕತಾಳೀಯವಷ್ಟೇ. ವಿವಿಯ ವರಿಷ್ಠನಾಗಿರುವುದರಿಂದ, ಜನರು ನನ್ನನ್ನು ವೇಮುಲಾರ ಸಾವಿಗೆ ಹೊಣೆಗಾರನೆಂದು ತಪ್ಪಾಗಿ ಭಾವಿಸಿದ್ದಾರೆ’’ ಎಂದವರು ಹೇಳಿದ್ದಾರೆ.

ಅಮಾನತುಗೊಂಡಿದ್ದ ವಿದ್ಯಾರ್ಥಿಗಳ ಬಗ್ಗೆ ತಾನು ಉದಾರವಾಗಿ ವರ್ತಿಸಿದ್ದೆ. ಮೇಲ್ವಿಚಾರಣಾ ಸಮಿತಿಯ ಶಿಫಾರಸನ್ನು ಮೀರಿ, ತಾನು ಅವರಿಗೆ ವಿಧಿಸಲಾಗಿದ್ದ ದಂಡನೆಯ ಪ್ರಮಾಣವನ್ನು ಕಡಿತಗೊಳಿಸಿದ್ದಾಗಿ ಅಪ್ಪಾರಾವ್ ತಿಳಿಸಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಎಬಿವಿಪಿ ನಾಯಕ ಎನ್.ಸುಶೀಲ್ ಕುಮಾರ್ ಅವರ ತಾಯಿ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಯಾವ ಕ್ರಮಕೈಗೊಳ್ಳಲಾಗಿದೆಯೆಂದು ತಿಳಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ಇದರಿಂದಾಗಿ ಪರಿಸ್ಥಿತಿ ಗಂಭೀರಗೊಂಡು, ವಿವಿಯು ಅನಿವಾರ್ಯವಾಗಿ ಕ್ರಮಕ್ಕೆ ಮುಂದಾಗಬೇಕಾಯಿತೆಂದು ಅಪ್ಪಾರಾವ್ ಹೇಳಿದ್ದಾರೆ.
 

ಹೈಕೋರ್ಟ್ ಒತ್ತಡದಿಂದಾಗಿ, ವಿವಿಯು ಕಾರ್ಯಾನುಷ್ಠಾನ ವರದಿಯನ್ನು ಸಲ್ಲಿಸಬೇಕಾಯಿತು ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಐವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಬೇಕಾಯಿತೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X