Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ವಿರುದ್ಧ ಸೇನಾ ಕಾರ್ಯಾಚರಣೆಗೆ...

ತೈವಾನ್ ವಿರುದ್ಧ ಸೇನಾ ಕಾರ್ಯಾಚರಣೆಗೆ ಚೀನಾ ಸಜ್ಜು?

ವಾರ್ತಾಭಾರತಿವಾರ್ತಾಭಾರತಿ22 Jan 2016 11:22 PM IST
share

ಬೀಜಿಂಗ್, ಜ. 22: ಚೀನಾದಲ್ಲಿ ನಡೆಯುತ್ತಿರುವ ಬೃಹತ್ ಸೇನಾ ಅಭ್ಯಾಸ ಮತ್ತು ವಿಮಾನ ಭೂಸ್ಪರ್ಶ ತಾಲೀಮುಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲು ಹೋಗಬೇಡಿ ಎಂದು ದೇಶದ ರಕ್ಷಣಾ ಸಚಿವಾಲಯ ಶುಕ್ರವಾರ ಜನರಿಗೆ ಸೂಚಿಸಿದೆ.
ತೈವಾನ್‌ನಲ್ಲಿ ಸ್ವಾತಂತ್ರ ಪರ ಒಲವುಳ್ಳ ಪ್ರತಿಪಕ್ಷವೊಂದು ಭಾರೀ ಬಹುಮತದ ಚುನಾವಣಾ ಗೆಲುವು ಸಾಧಿಸಿರುವ ದಿನಗಳ ಬಳಿಕ ಚೀನಾದ ಸಮರಾಭ್ಯಾಸ ನಡೆಯುತ್ತಿರುವುದನ್ನು ಸ್ಮರಿಸಬಹುದಾಗಿದೆ. ಈ ಅಭ್ಯಾಸಗಳನ್ನು ಚೀನಾದ ಸರಕಾರಿ ಮಾಧ್ಯಮಗಳಲ್ಲಿ ನೇರಪ್ರಸಾರ ಮಾಡಲಾಗುತ್ತಿದೆ.
ಚೀನಾದ ಮಾಧ್ಯಮಗಳಲ್ಲಿ ನೇರ ಪ್ರಸಾರಗೊಳ್ಳುತ್ತಿರುವ ಸೇನಾ ಕಸರತ್ತುಗಳ ಬಗ್ಗೆ ಸ್ವಯಂ ಆಡಳಿತದ ದ್ವೀಪ ತೈವಾನ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿರುವುದನ್ನು ಸ್ಮರಿಸಬಹುದಾಗಿದೆ.
ಚೀನಾ ಇತ್ತೀಚೆಗೆ ‘ಚಳಿಗಾಲದ ಕಸರತ್ತು’ಗಳನ್ನು ನಡೆಸಿರುವುದನ್ನು ಅದರ ರಕ್ಷಣಾ ಸಚಿವಾಲಯ ಖಚಿತಪಡಿಸಿದೆ. ಆದರೆ, ತೋರಿಸಲಾದ ಚಿತ್ರಗಳು 2015ರಲ್ಲಿ ನಡೆದ ಅಭ್ಯಾಸದ ಸಂಗ್ರಹ ಚಿತ್ರಗಳು ಎಂದು ಅದು ಹೇಳಿಕೊಂಡಿದೆ.
ತೈವಾನ್ ಒಂದು ‘ದಾರಿತಪ್ಪಿದ’ ರಾಜ್ಯ ಎಂದು ಚೀನಾ ಪರಿಗಣಿಸುತ್ತಿದೆ ಹಾಗೂ ಅಗತ್ಯ ಬಿದ್ದರೆ ಬಲ ಪ್ರಯೋಗಿಸಿ ಅದನ್ನು ತನ್ನ ತೆಕ್ಕೆಗೆ ತರಬಹುದಾಗಿದೆ ಎಂದು ಅದು ಹೇಳುತ್ತಿದೆ. ಚೀನಾದ ಆಂತರಿಕ ಯುದ್ಧದ ಬಳಿಕ, 1949ರಲ್ಲಿ ಸೋಲುಂಡ ರಾಷ್ಟ್ರೀಯವಾದಿ ಶಕ್ತಿಗಳು ತೈವಾನ್‌ಗೆ ಪಲಾಯನಗೈದಿದ್ದವು.
‘‘ಈಗ ಪ್ರಸಾರಗೊಳ್ಳುತ್ತಿರುವ ಮಾಧ್ಯಮ ವರದಿಗಳು, ಸೇನೆ ಕಳೆದ ವರ್ಷ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಚಿತ್ರಗಳಾಗಿವೆ. ಅವುಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ’’ ಎಂದು ಸುದ್ದಿಸಂಸ್ಥೆಯೊಂದಕ್ಕೆ ಕಳುಹಿಸಿದ ಎರಡು ವಾಕ್ಯಗಳ ಹೇಳಿಕೆಯಲ್ಲಿ ಚೀನಾದ ರಕ್ಷಣಾ ಸಚಿವಾಲಯ ಹೇಳಿದೆ.ತೈವಾನ್‌ಗೆ ಹೊಂದಿಕೊಂಡಿರುವ ಕ್ಸಿಯಾಮೆನ್ ನಗರದಲ್ಲಿರುವ ಸೇನೆಯ 31ನೆ ತುಕಡಿ ‘ಇತ್ತೀಚಿನ ದಿನಗಳಲ್ಲಿ’ ಯುದ್ಧಾಭ್ಯಾಸ ನಡೆಸಿದೆ ಎಂದು ಬುಧವಾರ ರಾತ್ರಿ ಚೀನಾದ ಸರಕಾರಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ವರದಿಯು ಯುದ್ಧಾಭ್ಯಾಸ ನಡೆಯುತ್ತಿರುವ ಸ್ಥಳದ ನಿಖರ ವಿವರಗಳನ್ನು ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X