Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಕ್ಕಾದಲ್ಲಿ ಪೋಲಾಗುವ ಆಹಾರ ವಿಶ್ವದ...

ಮಕ್ಕಾದಲ್ಲಿ ಪೋಲಾಗುವ ಆಹಾರ ವಿಶ್ವದ ಎಷ್ಟು ಮಂದಿಯ ಹಸಿವು ತಣಿಸಬಲ್ಲದು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ23 Jan 2016 7:44 PM IST
share
ಮಕ್ಕಾದಲ್ಲಿ ಪೋಲಾಗುವ ಆಹಾರ ವಿಶ್ವದ ಎಷ್ಟು ಮಂದಿಯ  ಹಸಿವು ತಣಿಸಬಲ್ಲದು ಗೊತ್ತೇ ?

ಮಕ್ಕಾ, ಜ. 23: ಮಕ್ಕಾದಲ್ಲಿ ಪೋಲಾಗುತ್ತಿರುವ ಆಹಾರದಿಂದ 18 ಅಭಿವೃದ್ಧಿಶೀಲ ದೇಶಗಳ 17% ಹಸಿದ ಮಕ್ಕಳ ಹೊಟ್ಟೆ ತುಂಬಿಸಬಹುದಾಗಿದೆ ಎಂದು ಮಕ್ಕಾದ ದತ್ತಿ ಆಹಾರ ಕಾರ್ಯಕ್ರಮವೊಂದರ ಮಹಾನಿರ್ದೇಶಕ ಅಹ್ಮದ್ ಅಲ್-ಮಟ್ರಾಫಿ ಹೇಳಿದ್ದಾರೆ ಎಂದು ಅರಬ್ ನ್ಯೂಸ್ ಪತ್ರಿಕೆ ವರದಿ ಮಾಡಿದೆ.

ಆಫ್ರಿಕ, ಏಶ್ಯ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಸುಮಾರು 48 ಲಕ್ಷ ಹಸಿದ ಮಕ್ಕಳಿದ್ದಾರೆ.

ಸಾಮಾನ್ಯ ಮದುವೆಯೊಂದರಲ್ಲಿ ಪೋಲಾಗುವ ಆಹಾರ ಕನಿಷ್ಠ 250 ಮಂದಿಯ ಹೊಟ್ಟೆ ತುಂಬಿಸಲು ಸಾಕಾಗುತ್ತದೆ ಎಂದು ಅಲ್-ಮಟ್ರಾಫಿ ಹೇಳುತ್ತಾರೆ.

ವರ್ಷದ ಮಧ್ಯಭಾಗದ ರಜಾ ದಿನಗಳಲ್ಲಿ, ಮದುವೆಗಳು ಮತ್ತು ಇತರ ಸಾಮಾಜಿಕ ಸಮಾರಂಭಗಳಿಂದ ಸಂಗ್ರಹಿಸಲಾದ ಆಹಾರದಿಂದ 24,000 ಮಂದಿಯ ಹಸಿವು ತಣಿಸಲಾಗಿದೆ ಎಂದು ಅವರು ಹೇಳಿದರು.

ಮಕ್ಕಾದಲ್ಲಿರುವ 120 ಸಭಾಗೃಹಗಳು ಮತ್ತು ರಿಸಾರ್ಟ್‌ಗಳ ಪೈಕಿ ರಜಾ ದಿನಗಳಲ್ಲಿ 60 ನ್ನು ಸಂಪರ್ಕಿಸಲಾಗುತ್ತದೆ ಎಂದು ಅಲ್-ಮಟ್ರಾಫಿ ತಿಳಿಸಿದರು. ಹೆಚ್ಚುವರಿ ಆಹಾರದ ಲಭ್ಯತೆಯ ಬಗ್ಗೆ ಮಕ್ಕಾದ 30 ಶೇಕಡ ಜನರು ಯಾರಿಗೂ ಮಾಹಿತಿ ನೀಡುವುದಿಲ್ಲ ಎಂದರು.

ಅಲ್-ಮಟ್ರಾಫಿಯ ಸಂಸ್ಥೆಯು ಆಹಾರವನ್ನು ಪೋಲು ಮಾಡದಂತೆ ಹಾಗೂ ಅದನ್ನು ಅಗತ್ಯವಿರುವವರಿಗೆ ನೀಡುವಂತೆ ಜನರಲ್ಲಿ ತಿಳುವಳಿಕೆ ಮೂಡಿಸಲು ಯತ್ನಿಸುತ್ತಿದೆ ಎಂದು ಅವರು ನುಡಿದರು.

ಈ ನಡುವೆ, ತಮ್ಮ ಉತ್ತಮ ಬದುಕಿಗಾಗಿ ಜನರಲ್ಲಿ ಕೃತಜ್ಞತಾ ಭಾವವಿದ್ದರೆ ಅವರಲ್ಲಿ ಹೆಚ್ಚಿನ ಜವಾಬ್ದಾರಿ ಇರುತ್ತದೆ ಎಂದು ತನ್ನ ಶುಕ್ರವಾರದ ಪ್ರವಚನದಲ್ಲಿ ಮಕ್ಕಾದ ಮಸ್ಜಿದುಲ್ ಹರಾಂನ ಇಮಾಮ್ ಹಾಗೂ ಖತೀಬ್ ಶೇಖ್ ಸಲೇಹ್ ಬಿನ್ ಹುಮೈದ್ ಹೇಳಿದ್ದಾರೆ.

‘‘ಅವರು ಹೀಗೆ ಮಾಡದಿದ್ದರೆ ಹಾಗೂ ಕೃತಘ್ನರಾದರೆ, ಅಲ್ಲಾಹನು ಈ ಅವರ ಬದುಕಿನ ಉತ್ತಮ ಅಂಶಗಳನ್ನು ಕಸಿದುಕೊಳ್ಳಬಹುದು’’ ಎಂದರು. ತಮಗೆ ಸಿಕ್ಕಿರುವ ಆಶೀರ್ವಾದವನ್ನು ಕಾಪಾಡಿಕೊಂಡು ಬರುವುದು ಒಂದು ರೀತಿಯ ಪೂಜೆಯಾಗಿದೆ ಎಂದು ಅವರು ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X