Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೇತಾಜಿ ಬೋಸ್ ಕುರಿತಾದ ಗೌಪ್ಯ ಕಡತ...

ನೇತಾಜಿ ಬೋಸ್ ಕುರಿತಾದ ಗೌಪ್ಯ ಕಡತ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Jan 2016 11:55 PM IST
share
ನೇತಾಜಿ ಬೋಸ್ ಕುರಿತಾದ ಗೌಪ್ಯ ಕಡತ ಬಿಡುಗಡೆ

ಹೊಸದಿಲ್ಲಿ, ಜ.23: ನೇತಾಜಿ ಸುಭಾಶ್ಚಂದ್ರ ಬೋಸರ 119ನೆ ಜಯಂತಿಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ, ಇದುವರೆಗೆ ವರ್ಗೀಕರಿಸಲಾಗಿದ್ದ ನೇತಾಜಿಗೆ ಸಂಬಂಧಿಸಿದ 100 ಕಡತಗಳನ್ನು ಸಾರ್ವಜನಿಕ ವೀಕ್ಷಣೆಗಾಗಿ ಬಿಡುಗಡೆಗೊಳಿಸಿದ್ದಾರೆ.


ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬೋಸರ ಕುಟುಂಬಿಕರೊಂದಿಗೆ ನಡೆಸಿದ್ದ ಸಭೆಯೊಂದರಲ್ಲಿ, ಸ್ವಾತಂತ್ರ ಸೇನಾನಿಗೆ ಸಂಬಂಧಿಸಿದ ಕಡತಗಳನ್ನು ಸರಕಾರ ಅವರ್ಗೀಕರಿಸಲಿದೆಯೆಂದು ಪ್ರಧಾನಿ ಮೋದಿ ಘೋಷಿಸಿದ್ದರು. 70 ವರ್ಷಗಳ ಹಿಂದೆ ಬೋಸರು ಕಣ್ಮರೆಯಾಗಿರುವುದು ಇಂದಿಗೂ ನಿಗೂಢವಾಗಿದೆ.

ದಿಲ್ಲಿಯಲ್ಲಿರುವ ಭಾರತದ ರಾಷ್ಟ್ರೀಯ ಪತ್ರಾಗಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಸರ ಕುಟುಂಬದ 12 ಮಂದಿ ಸದಸ್ಯರು ಉಪಸ್ಥಿತರಿದ್ದರು. ಅಲ್ಲಿ ಮೋದಿ, ಕಡತಗಳ ಡಿಜಿಟಲ್ ಪ್ರತಿಗಳನ್ನು ಬಿಡುಗಡೆಗೊಳಿಸಿದರೆಂದು ಇಂದು ಮುಂಜಾನೆ ಪ್ರಧಾನಿ ಕಚೇರಿ ಟ್ವೀಟಿಸಿದೆ.

ನೇತಾಜಿ, 1945ರ ಆ.18ರಂದು ತೈಪೆಯಲ್ಲಿ ನಡೆದಿದ್ದ ವಿಮಾನ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರೆಂದು ಎರಡು ವಿಚಾರಣಾ ಆಯೋಗಗಳು ತೀರ್ಮಾನಕ್ಕೆ ಬಂದಿದ್ದವು. ಮೂರನೆ ಆಯೋಗ ಹಾಗೂ ಅವರ ಕೆಲವು ಬಂಧುಗಳು ಸೇರಿದಂತೆ ಹಲವರು ಇದಕ್ಕೆ ಸವಾಲು ಹಾಕಿದ್ದರು.


ತಾನು ವಿಮಾನಾಪಘಾತದ ಕತೆಯನ್ನು ನಂಬುವುದಿಲ್ಲ. ತಮಗೆ ಇಂದು ಎಲ್ಲ ಉತ್ತರಗಳು ದೊರೆಯದಿರಬಹುದು. ಆದರೆ, ಕೆಲವು ಸೂಚನೆಗಳು ಲಭಿಸಬಹುದೆಂಬ ಆಶಾವಾದ ತನಗಿದೆಯೆಂದು ನೇತಾಜಿಯವರ ಮರಿಮಗ ಚಂದ್ರಬೋಸ್ ಇಂದು ಮುಂಜಾನೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನೇತಾಜಿಯವರ ಕಣ್ಮರೆಯ ಕುರಿತು ಪ್ರಚಲಿತದಲ್ಲಿರುವ ಎರಡು ಸಿದ್ಧಾಂತಗಳಿವೆ. ಅವರು ಭಾರತದ ಸ್ವಾತಂತ್ರ ಹೋರಾಟವನ್ನು ಮುಂದುವರಿಸಲು ಸೋವಿಯತ್ ಒಕ್ಕೂಟಕ್ಕೆ ಪಲಾಯನ ಮಾಡಿದ್ದರು. ಆದರೆ ಅವರು ಕೊಲ್ಲಲ್ಪಟ್ಟರು ಎಂಬುದೊಂದು ನೇತಾಜಿ ಗುಮ್ನಾಮಿ ಬಾಬಾ ಹೆಸರಿನ ಸನ್ಯಾಸಿಯಂತೆ ಭಾರತಕ್ಕೆ ಮರಳಿದ್ದರು ಹಾಗೂ 1985ರ ವರೆಗೆ ಉತ್ತರಪ್ರದೇಶದ ಫೈಝಾಬಾದ್‌ನಲ್ಲಿ ಜೀವಿಸಿದ್ದರು ಎಂಬುದು ಇನ್ನೊಂದು.

ಅವರು ಸನ್ಯಾಸಿಯಾಗಿ ಬದುಕಿದ್ದರೆಂಬುದು ‘ಸಂಪೂರ್ಣ ಅಸಂಬದ್ಧ’ ಎಂದು ತಳ್ಳಿ ಹಾಕಿರುವ ನೇತಾಜಿಯವರ ಜರ್ಮನಿ ನಿವಾಸಿ ಪುತ್ರಿ ಅನಿತಾ ಬೋಸ್ ಫಫ್, ತನ್ನ ತಂದೆ ವಿಮಾನಾಪಘಾತದಲ್ಲಿ ಮಡಿದರೆಂಬುದು ತನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದಿದ್ದಾರೆ. ಅವರು ಇಂದಿನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.


ಭಾರತದ ರಾಷ್ಟ್ರೀಯ ಪತ್ರಾಗಾರವು ಪ್ರತಿ ತಿಂಗಳು ನೇತಾಜಿಯವರ 25 ಅವರ್ಗೀಕೃತ ಕಡತಗಳ ಡಿಜಿಟಲ್ ಪ್ರತಿಗಳನ್ನು ಸಾರ್ವಜನಿಕಗೊಳಿಸಲು ನಿರ್ಧರಿಸಿದೆ. ಮೊದಲ 33 ಕಡತಗಳನ್ನು ಪ್ರಧಾನಿ ಕಚೇರಿಯು ಅವರ್ಗೀಕರಿಸಿ, ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರೀಯ ಪತ್ರಾಗಾರಕ್ಕೆ ಹಸ್ತಾಂತರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X