Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಕೆಟ್‌ನ ಯಶಸ್ವಿ ಮರು ಬಳಕೆ: ಬಾಹ್ಯಾಕಾಶ...

ರಾಕೆಟ್‌ನ ಯಶಸ್ವಿ ಮರು ಬಳಕೆ: ಬಾಹ್ಯಾಕಾಶ ಯಾನ ಕ್ರಾಂತಿಯತ್ತ ಇಟ್ಟ ದೊಡ್ಡ ಹೆಜ್ಜೆ

ವಾರ್ತಾಭಾರತಿವಾರ್ತಾಭಾರತಿ23 Jan 2016 11:58 PM IST
share
ರಾಕೆಟ್‌ನ ಯಶಸ್ವಿ ಮರು ಬಳಕೆ: ಬಾಹ್ಯಾಕಾಶ ಯಾನ ಕ್ರಾಂತಿಯತ್ತ ಇಟ್ಟ ದೊಡ್ಡ ಹೆಜ್ಜೆ

ಕೇಪ್ ಕ್ಯಾನವರಲ್, ಜ. 23: ಅಮೆಝಾನ್ ಸ್ಥಾಪಕ ಜೆಫ್ ಬೆರೆಸ್‌ರ ಬಾಹ್ಯಾಕಾಶ ಪ್ರಯಾಣ ಕಂಪೆನಿ ‘ಬ್ಲೂ ಒರಿಜಿನ್’ ರಾಕೆಟೊಂದನ್ನು ಯಶಸ್ವಿಯಾಗಿ ಎರಡನೆ ಸಲ ಬಳಸಿದ್ದು, ಬಾಹ್ಯಾಕಾಶ ಯಾನದಲ್ಲಿ ಒಂದು ಮೈಲಿಗಲ್ಲಾಗಿದೆ.
ಇದು ಮರುಬಳಕೆಯ ಬೂಸ್ಟರ್‌ಗಳನ್ನು ಅಭಿವೃದ್ಧಿ ಪಡಿಸುವ ಗುರಿಯತ್ತ ಇಟ್ಟ ಒಂದು ಮಹತ್ವದ ಹೆಜ್ಜೆಯಾಗಿದೆ.

‘ನ್ಯೂ ಶೆಫರ್ಡ್’ ರಾಕೆಟ್ ಹಾಗೂ ಆರು ಪ್ರಯಾಣಿಕರನ್ನು ಒಯ್ಯಲು ರೂಪಿಸಲಾದ ಕ್ಯಾಪ್ಸೂಲ್ ಪಶ್ಚಿಮ ಟೆಕ್ಸಾಸ್‌ನ ಉಡಾವಣಾ ಸ್ಥಳವೊಂದರಿಂದ ಶುಕ್ರವಾರ ಬೆಳಗ್ಗೆ 11:22ಕ್ಕೆ ಆಕಾಶಕ್ಕೆ ನೆಗೆಯಿತು ಹಾಗೂ ನಿಮಿಷಗಳ ಬಳಿಕ ಅದೇ ಉಡಾವಣಾ ಸ್ಥಳದಲ್ಲಿ ಇಳಿಯಿತು ಎಂದು ಕಂಪೆನಿ ಹೇಳಿಕೆಯೊಂದರಲ್ಲಿ ತಿಳಿಸಿತು.
 
ಎರಡು ತಿಂಗಳ ಹಿಂದೆ ನಡೆದ ಯಶಸ್ವಿ ಪರೀಕ್ಷಾ ಹಾರಾಟ ಮತ್ತು ಭೂಸ್ಪರ್ಶ ನಡೆಸಿದ ಅದೇ ರಾಕೆಟ್ ಶುಕ್ರವಾರವೂ ಆಕಾಶಕ್ಕೆ ನೆಗೆಯಿತು ಹಾಗೂ ಆ ಮೂಲಕ ರಾಕೆಟ್‌ಗಳನ್ನು ಮರುಬಳಕೆ ಮಾಡಬಹುದು ಎನ್ನುವುದನ್ನು ಸಾಬೀತುಪಡಿಸಿತು ಎಂದು ಹಾರಾಟದ 10 ಗಂಟೆಗಳ ಬಳಿಕ ಬ್ಲೂ ಒರಿಜಿನ್‌ನ ವೆಬ್‌ಸೈಟ್‌ನಲ್ಲಿ ಹಾಕಿದ ಹೇಳಿಕೆಯೊಂದರಲ್ಲಿ ಬೆರೆಸ್ ತಿಳಿಸಿದರು.

ಅಮೆರಿಕ, ಕ್ಯೂಬಾ ನಡುವೆ ‘ದೂರಸಂಪರ್ಕ’ ಮಾತುಕತೆ
ಹವಾನ, ಜ. 23: ದೂರಸಂಪರ್ಕ ಮತ್ತು ಇಂಟರ್ನೆಟ್ ಬಗ್ಗೆ ಅಮೆರಿಕದ ಅಧಿಕಾರಿಗಳೊಂದಿಗೆ ಎರಡು ದಿನಗಳ ಕಾಲ ಮಾತುಕತೆ ನಡೆಸಿದ್ದೇವೆ ಎಂದು ಕ್ಯೂಬಾದ ಅಧಿಕಾರಿಗಳು ಹೇಳಿದ್ದಾರೆ.

ಇಂಟರ್ನೆಟ್ಟನ್ನು ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಬಳಸುವ ನಿಟ್ಟಿನಲ್ಲಿ ಇತ್ತಂಡಗಳು ಅಭಿಪ್ರಾಯ ವಿನಿಮಯ ಮಾಡಿಕೊಂಡವು ಎಂದು ಕ್ಯೂಬ ವಿದೇಶ ಸಚಿವಾಲಯದ ಹೇಳಿಕೆಯೊಂದು ತಿಳಿಸಿದೆ.

ಅಮೆರಿಕದ ದಿಗ್ಬಂಧನೆಯು ದ್ವೀಪ ರಾಷ್ಟ್ರದ ದೂರಸಂಪರ್ಕ ವ್ಯವಸ್ಥೆಯ ಮೇಲೆ ಹೊಂದಿರುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆಯೂ ಕ್ಯೂಬಾದ ಅಧಿಕಾರಿಗಳು ದೂರಿದರು ಎಂದು ಸಚಿವಾಲಯ ಶುಕ್ರವಾರ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X