Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮ, ಜಾತಿಯನ್ನು ಹೊರಗಿಟ್ಟು...

ಧರ್ಮ, ಜಾತಿಯನ್ನು ಹೊರಗಿಟ್ಟು ಕೋಮುವಾದವನ್ನು ಎದುರಿಸಲಾಗದು: ಮಟ್ಟು

ವಾರ್ತಾಭಾರತಿವಾರ್ತಾಭಾರತಿ24 Jan 2016 12:18 AM IST
share
ಧರ್ಮ, ಜಾತಿಯನ್ನು ಹೊರಗಿಟ್ಟು ಕೋಮುವಾದವನ್ನು ಎದುರಿಸಲಾಗದು: ಮಟ್ಟು

ಬೆಂಗಳೂರು: ಭಾರತದಲ್ಲಿ ಧರ್ಮ ಹಾಗೂ ಜಾತಿಯನ್ನು ದೂರವಿಟ್ಟು ಕೋಮುವಾದವನ್ನು ಎದುರಿಸಲು ಸಾಧ್ಯವಿಲ್ಲ ಎಂಬ ವಾಸ್ತವವನ್ನು ಅರಿಯುವ ಮೂಲಕ ಮೂಲಭೂತವಾದದ ವಿರುದ್ಧ ಹೊಸ ತರಹದ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ತಿಳಿಸಿದ್ದಾರೆ.

ಶನಿವಾರ ಪುಸ್ತಕ ಪ್ರೀತಿ ಪ್ರಕಾಶನ ನಗರದ ಎಸ್‌ಸಿಎಂ ಹೌಸ್‌ನಲ್ಲಿ ಆಯೋಜಿಸಿದ್ದ ಪುಸ್ತಕ ಪ್ರೀತಿ ತಿಂಗಳ ಮಾತುಕತೆ ಕಾರ್ಯಕ್ರಮದಲ್ಲಿ ‘ಸೆಕ್ಯುಲರ್‌ವಾದ-ಸವಾಲುಗಳು’ ಕುರಿತು ಮಾತನಾಡಿದ ಅವರು, ಭಾರತ ನೂರಾರು ಜಾತಿಗಳಿಂದ ಕೂಡಿದ ರಾಷ್ಟ್ರವಾಗಿದ್ದು, ಜಾತಿ ಕುರಿತು ಪ್ರಶ್ನೆ ಮಾಡದೆ ಯಾವ ಚಳವಳಿಯನ್ನು ಕಟ್ಟಲು ಬರುವುದಿಲ್ಲವೆಂದು ತಿಳಿಸಿದರು.

ದೇಶದಲ್ಲಿ ಜಾತಿ ನಡುವಿನ ತಾರತಮ್ಯವನ್ನು ಯಥಾಸ್ಥಿತಿಯಾಗಿಡುವುದೇ ಕೋಮುವಾದಿಗಳ ಹುನ್ನಾರವಾಗಿದೆ. ಜಾತಿ ಶೋಷಣೆ ಹಿಂದೂ ಧರ್ಮದ ಸಾರವಾಗಿದೆ. ಹೀಗಾಗಿ ಪ್ರಗತಿಪರರು ಜಾತಿ ಶೋಷಣೆಯ ವಿರುದ್ಧ ದೊಡ್ಡ ಮಟ್ಟದ ಚಳವಳಿಯನ್ನು ಕಟ್ಟುವ ಮೂಲಕ ಕೋಮುವಾದಿಗಳ ನಿಜವಾದ ಮುಖವಾಡವನ್ನು ಬಯಲು ಮಾಡಬಹುದೆಂದು ಅವರು ತಿಳಿಸಿದರು.

ದೇಶದಲ್ಲಿ ಹಿಂದೂ ಕೋಮುವಾದಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಲಕ್ಷಾಂತರ ಜನರ ಮೆದುಳುಗಳಿಗೆ ಕೋಮು ಧ್ವೇಷವನ್ನು ಬಿತ್ತಿ ಹಿಂಸೆಗೆ ಕಾರಣರಾಗಿದ್ದಾರೆ. ಇವರ ಈ ಪ್ರಚೋದನೆಯಿಂದಾಗಿ ಮುಸ್ಲಿಮ್ ಕೋಮುವಾದ ಬೆಳೆಯುತ್ತಿದೆ ಎಂದು ದಿನೇಶ್ ಅಮೀನ್ ಮಟ್ಟು ತಿಳಿಸಿದರು.

ಲೋಹಿಯಾರವರ ಸಮಾಜವಾದವು ಕೋಮುವಾದಿ ಸಿದ್ಧಾಂತಕ್ಕೆ ಸರಿಯಾದ ಉತ್ತರ ನೀಡಬಲ್ಲದು. ಕೋಮುವಾದಿಗಳ ಹಿಡಿತದಲ್ಲಿರುವ ಪುರಾಣಗಳನ್ನೇ ಲೋಹಿಯಾರವರು ಬಳಸಿಕೊಂಡು ಜನರಲ್ಲಿ ಮಾನವೀಯತೆಯ ಸಿದ್ಧಾಂತವನ್ನು ಬಿತ್ತಲು ಪ್ರಯತ್ನಿಸಿದ್ದರು. ಅವರ ಮಾದರಿಯಲ್ಲಿಯೇ ಹೋರಾಟವನ್ನು ಮುಂದುವರಿಸುವುದು ಅಗತ್ಯವಿದೆ ಎಂದು ಅವರು ತಿಳಿಸಿದರು.

ಮಾನವ ಹಕ್ಕು ಹೋರಾಟಗಾರ ನಗರಗೆರೆ ರಮೇಶ್, ಲೇಖಕರಾದ ಬಿ.ಶ್ರೀಪಾದ, ಪ್ರಾಧ್ಯಾಪಕ ಡಾ.ರಂಗನಾಥ ಕಂಟನಕುಂಟೆ, ಎಸ್.ಶಿವಾನಂದ ಸಾಸ್ವೆಹಳ್ಳಿ ಮತ್ತಿತರರಿದ್ದರು.


ಕೋಮುವಾದಿಗಳು ಮುಸ್ಲಿಮ್ ಸಮುದಾಯದ ವಿರುದ್ಧ ಹುಸಿ ಭಯೋತ್ಪಾದನೆಯನ್ನು ಮುನ್ನೆಲೆಗೆ ತರುವ ಮೂಲಕ ದ್ವೇಷದ ವಾತಾವರಣವನ್ನು ಬಿತ್ತ್ತುತ್ತಿದ್ದಾರೆ. ಹೀಗಾಗಿಯೇ ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ಕೆಲವು ಅಮಾಯಕ ಮುಸ್ಲಿಮ್ ಯುವಕರನ್ನು ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿಸಲಾಗುತ್ತಿದೆ.
                                                                          -ದಿನೇಶ್ ಅಮೀನ್ ಮಟ್ಟು,

                                                           ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X