Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 20 ರೂ.ಗೆ 20 ಲೀಟರ್ ಶುದ್ಧ ಕುಡಿಯುವ...

20 ರೂ.ಗೆ 20 ಲೀಟರ್ ಶುದ್ಧ ಕುಡಿಯುವ ನೀರು: ಕಾಸರಗೋಡು ನಗರಸಭೆಯ ಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Jan 2016 11:55 PM IST
share
20 ರೂ.ಗೆ 20 ಲೀಟರ್ ಶುದ್ಧ ಕುಡಿಯುವ ನೀರು: ಕಾಸರಗೋಡು ನಗರಸಭೆಯ ಯೋಜನೆ

ಕಾಸರಗೋಡು, ಜ.24: ಇಪ್ಪತ್ತು ರೂ.ಗೆ 20 ಲೀಟರ್ ಶುದ್ಧ ಕುಡಿಯುವ ನೀರು ಯೋಜನೆ ಜಾರಿಗೆ ಕಾಸರಗೋಡು ನಗರಸಭೆ ಮುಂದಾಗಿದೆ. ತೀವ್ರ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ನಗರಸಭೆ ‘ಪ್ಯೂರ್ ವಾಟರ್’ ಎಂಬ ಯೋಜನೆಗೆ ಚಾಲನೆ ನೀಡಿದ್ದು, ಕುಟುಂಬಶ್ರೀ ಉಸ್ತುವಾರಿ ವಹಿಸಿಕೊಂಡಿದೆ.

ನೋಡಲ್ ಏಜೆನ್ಸಿಯಾಗಿರುವ ಮಹಿಳಾ ಅಭಿವೃದ್ಧಿ ನಿಗಮದ ಸಹಯೋಗ ದೊಂದಿಗೆ ರಾಜ್ಯ ಸರಕಾರದ ನಿರ್ದೇಶನದಂತೆ ಈ ಯೋಜನೆ ಜಾರಿಗೆ ತರ ಲಾಗಿದೆ. ವಿದ್ಯಾನಗರದ ಕೈಗಾರಿಕಾ ಪ್ರಾಂಗಣದ ಪ್ಲಾಂಟ್‌ನಲ್ಲಿ ನೀರನ್ನು ಶುದ್ಧೀಕರಿಸಲಾಗುತ್ತಿದೆ. ಪ್ರತಿದಿನ 48 ಸಾವಿರ ಲೀಟರ್ ಕುಡಿಯುವ ನೀರು ಸಂಗ್ರಹಿಸುವ ಪ್ಲಾಂಟ್ ತಯಾರಿಸಲಾಗಿದೆ. ಇದಕ್ಕಾಗಿ ಸಮೀಪ ಕೊಳವೆ ಬಾವಿ ತೋಡಲಾಗಿದೆ. ಏಳು ಹಂತಗಳಲ್ಲಿ ನೀರನ್ನು ಶುದ್ಧೀೀಕರಿಸಲಾಗುತ್ತಿದೆ. ಬಳಿಕವಷ್ಟೇ ಇದು ಗ್ರಾಹಕರಿಗೆ ತಲುಪಲಿದೆ.

ನಗರಸಭಾ ಕುಟುಂಬಶ್ರೀ, ಸಿಡಿಎಸ್‌ನ ಐವರ ತಂಡವು ಕುಡಿಯುವ ನೀರು ಸರಬರಾಜಿನ ಜವಾಬ್ದಾರಿ ಪಡೆದುಕೊಂಡಿದೆ. ಇದಕ್ಕಾಗಿ ವಿಶೇಷ ವಾಹನವನ್ನು ಖರೀದಿಸಲಾಗಿದೆ. ಮೊದಲ ಹಂತದಲ್ಲಿ ಎರಡು ಸಾವಿರದಷ್ಟು ಗ್ರಾಹಕರಿಗೆ ನೀರು ತಲುಪಿಸಲಾಗುವುದು. ನಗರದ ಬಸ್, ರೈಲು ನಿಲ್ದಾಣಗಳಲ್ಲಿ ಒಂದು ರೂ. ಕಾಯಿನ್ ಹಾಕಿದ್ದಲ್ಲಿ ಒಂದು ಬಾಟಲಿ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಶೀಘ್ರ ಜಾರಿಗೆ ತರಲು ನಗರಸಭೆ ತೀರ್ಮಾನಿಸಿದೆ.

ಮೊದಲ ಹಂತದಲ್ಲಿ 20 ಲೀಟರ್ ಕ್ಯಾನ್‌ನಲ್ಲಿ ಮಾತ್ರ ನೀರು ಸರಬರಾಜು ಮಾಡಲಾಗುವುದು. ಮುಂದಿನ ಹಂತದಲ್ಲಿ ಸಣ್ಣ ಬಾಟಲ್ಗಳಲ್ಲೂ ನೀರು ಮಾರಾಟ ಮಾಡಲಾಗುವುದು. ‘ಪ್ಯೂರ್ ಕಾಸರಗೋಡು’ ಎಂಬ ಬ್ರಾಂಡ್‌ನಲ್ಲಿ ಕುಡಿಯುವ ನೀರು ಬಾಟಲಿಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.

ಮಾರುಕಟ್ಟೆಯಲ್ಲಿ 20 ಲೀಟರ್‌ಗೆ 60 ರೂ. ಈಗ ವಸೂಲು ಮಾಡಲಾಗುತ್ತಿದೆ. ಆದರೆ ನಗರಸಭೆ 20 ಲೀಟರ್ ನೀರನ್ನು 20 ರೂ.ಗೆ ಗ್ರಾಹಕರಿಗೆ ತಲುಪಿಸುತ್ತಿದೆ. ಆದರೆ ಪ್ರಥಮ ಹಂತದಲ್ಲಿ ಮನೆಗಳಿಗೆ ಹಾಗೂ ಸಂಸ್ಥೆಗಳಿಗೆ ಮಾತ್ರ ನೀರು ಪೂರೈಕೆ ಮಾಡಲಾಗುವುದು. ಮುಂದೆ ನಗರಸಭಾ ವ್ಯಾಪ್ತಿಯ ಮಾರುಕಟ್ಟೆಯಲ್ಲೂ ಶುದ್ಧ ಕುಡಿಯುವ ನೀರು ಮಾರಾಟ ಮಾಡಲಾಗುವುದು.

-ಬೀಫಾತಿಮ ಇಬ್ರಾಹೀಂ, ಕಾಸರಗೋಡು ನಗರಸಭಾ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X