Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಕೊಲೆಯತ್ನ ಪ್ರಕರಣದ ಆರು ಮಂದಿ...

ಉಡುಪಿ : ಕೊಲೆಯತ್ನ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ25 Jan 2016 11:29 PM IST
share

ಉಡುಪಿ, ಜ.25: ಮಲ್ಪೆಪೊಲೀಸ್ ಠಾಣಾ ವ್ಯಾಪ್ತಿಯ ಪಡುತೋನ್ಸೆ ಎಂಬಲ್ಲಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳನ್ನು ಪಡುತೋನ್ಸೆ ಹಾಗೂ ಕೋಡಿ ಬೇಂಗ್ರೆ ಗ್ರಾಮದ ಪ್ರಶಾಂತ್, ನಾಗರಾಜ ಕುಂದರ ಉದಯ ಕುಂದರ, ಶಶಿ ಕುಂದರ, ಪ್ರವೀಣ ಕುಂದರ, ರೋಶನ್ ಸುವರ್ಣ ಎಂದು ಗುರುತಿಸಲಾ ಗಿದ್ದು, ಇವರೆಲ್ಲ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಾಗಿದ್ದಾರೆ.
 ಪಡುತೋನ್ಸೆ ಗ್ರಾಮದ ಬೇಂಗ್ರೆ ನಾಗ ಸನ್ನಿಧಿ ದೇವಸ್ಥಾನದ ಬಳಿ 2013ರ ಡಿ.3ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಪುರಂದರ ಹಾಗೂ ವಾಸು ಎಂಬ ವರು ಕೆಲಸ ಮಾಡುತ್ತಿದ್ದಾಗ ಆರೋಪಿಗಳು ಬಂದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಕಾಲಿನಿಂದ ತುಳಿದು, ಮರದ ದೊಣ್ಣೆಯಿಂದ ಹೊಡೆದರು. ಕೊಲೆ ಮಾಡುವ ಉದ್ದೇಶದಿಂದ ಅಲ್ಲೇ ಇದ್ದ ಶಿಲೆ ಕಲ್ಲನ್ನು ಎತ್ತಿ ಹಾಕಿದಾಗ ಅವರಿಬ್ಬರು ತಪ್ಪಿಸಿಕೊಂಡು ಪರಾರಿಯಾದರು. ಈ ಹಲ್ಲೆಯಿಂದ ಪುರಂದರ ಸಾದಾ ಹಾಗೂ ವಾಸುವಿಗೆ ತೀವ್ರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಅಂದಿನ ಮಲ್ಪೆ ಠಾಣೆಯ ಉಪನಿರೀಕ್ಷಕ ಜಯಂತ ಆರೋಪಿಗಳ ವಿರುದ್ಧ ಬಾದಂಸಂ ಕಲಂ 143, 147, 148, 323, 324, 326, 504, 307 ಜೊತೆಗೆ 149 ಕಾಯ್ದೆ ಕಲಂಗಳಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆ ಪರವಾಗಿ ಮಹತ್ವದ ಸಾಕ್ಷಿಗಳನ್ನು ವಿಚಾರಣೆಗೊಳ ಪಡಿಸಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಶಂಕರ್ ಅಮರಣ್ಣನವರ್ ಜ.25ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.
     ಪ್ರತಿಯೊಬ್ಬ ಆರೋಪಿಗಳಿಗೂ ಕಲಂ307ರ ಅಪರಾಧಕ್ಕೆ 3 ವರ್ಷ ಶಿಕ್ಷೆ, 506ರ ಅಪರಾಧಕ್ಕೆ 1 ವರ್ಷ, 324ರ ಅಪರಾಧಕ್ಕೆ 1 ವರ್ಷ, 504ರ ಅಪ ರಾಧಕ್ಕೆ 6 ತಿಂಗಳು ಹಾಗೂ ಕಲಂ143, 148, 323ರ ಪ್ರತಿ ಅಪರಾಧಕ್ಕೆ 6 ತಿಂಗಳ ಶಿಕ್ಷೆಯನ್ನು ವಿಧಿಸಲಾಗಿದೆ. ಅದೇ ರೀತಿ ಎಲ್ಲ ಆರೋಪಿಗಳಿಗೆ ತಲಾ 4500ರೂ. ದಂಡ ವಿಧಿಸಿದ್ದು, ಇದರಿಂದ ಸಂಗ್ರಹವಾದ ಮೊತ್ತದಲ್ಲಿ 20000 ರೂ. ಗಾಯಾಳು ವಾಸು ಮೆಂಡನ್ ಹಾಗೂ 7000ರೂ.ವನ್ನು ಗಾಯಾಳು ಪುರಂದರ ಕುಂದರ್‌ಗೆ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶ ನೀಡಿದರು. ಪ್ರಾಸಿಕ್ಯೂಷನ್ ಪರವಾಗಿ ಉಡುಪಿಯ ಟಿ.ಎಸ್.ಜಿತೂರಿ ವಾದವನ್ನು ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X