Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿನಿಂದ ಪರಿಶಿಷ್ಟ ಜನರ ಮೇಲಿನ...

ಇಂದಿನಿಂದ ಪರಿಶಿಷ್ಟ ಜನರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾಯ್ದೆ ಜಾರಿ

ವಾರ್ತಾಭಾರತಿವಾರ್ತಾಭಾರತಿ25 Jan 2016 11:54 PM IST
share
ಇಂದಿನಿಂದ ಪರಿಶಿಷ್ಟ ಜನರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾಯ್ದೆ ಜಾರಿ

ಹೊಸದಿಲ್ಲಿ, ಜ.25: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸದಸ್ಯರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಕಠಿಣ ಕಾನೂನುಕ್ರಮವನ್ನು ಕೈಗೊಳ್ಳುವುದಕ್ಕೆ ಅವಕಾಶ ನೀಡುವ ಮಹತ್ವದ ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ-2015’ ಮಂಗಳವಾರದಿಂದ ಜಾರಿಗೆ ಬರಲಿದೆ. ಪರಿಶಿಷ್ಟ ಸಮುದಾಯದ ಮೇಲೆ ಸಾಮಾಜಿಕ ಅಥವಾ ಆರ್ಥಿಕ ಬಹಿಷ್ಕಾರ ಹೇರುವುದು ಸೇರಿಂತೆ ಅವರ ಘನತೆಗೆ ಧಕ್ಕೆ ಯುಂಟು ಮಾಡುವ ಯಾವುದೇ ಕೃತ್ಯವನ್ನು ಈ ಕಾಯ್ದೆಯಡಿ ಗಂಭೀರ ಅಪರಾಧವೆಂಬುದಾಗಿ ಪರಿಗಣಿಸಲಾಗುವುದು.

ಪರಿಶಿಷ್ಟ ಜಾತಿ ಹಾಗೂ  ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಪ್ರಕಾರ, ಬಲವಂತವಾಗಿ ತಲೆಕೂದಲು ಹಾಗೂ ಮೀಸೆ ಬೋಳಿಸುವುದು ಸೇರಿದಂತೆ, ಎಸ್‌ಸಿ/ ಎಸ್‌ಟಿ ಸಮುದಾಯದ ಸದಸ್ಯರ ಘನತೆಗೆ ಹಾನಿಯುಂಟು ಮಾಡುವ ಯಾವುದೇ ಪ್ರಕರಣಗಳನ್ನು ದೌರ್ಜನ್ಯವೆಂಬುದಾಗಿ ಪರಿಗಣಿಸಲಾಗುವುದು.

ಪರಿಶಿಷ್ಟರಿಗೆ ನೀರಾವರಿ ಸೌಲಭ್ಯಗಳನ್ನು ಅಥವಾ ಅರಣ್ಯ ಹಕ್ಕುಗಳನ್ನು ನಿರಾಕರಿಸುವುದು, ಚಪ್ಪಲಿಗಳ ಹಾರ ಹಾಕುವುದು, ಪ್ರಾಣಿಗಳ ಕಳೇಬರಗಳನ್ನು ಹೊರಲು ಅಥವಾ ಅವುಗಳ ವಿಲೇವಾರಿಗೆ ಅವರನ್ನು ಬಳಸಿಕೊಳ್ಳುವುದು, ಮಲಹೊರುವಿಕೆಯ ಕೆಲಸಕ್ಕೆ ಅವರನ್ನು ಬಳಸಿಕೊಳ್ಳುವುದು, ಎಸ್‌ಸಿ/ಎಸ್‌ಟಿ ಮಹಿಳೆಯರನ್ನು ದೇವದಾಸಿ ಪದ್ಧತಿಗೆ ದೂಡುವುದು ಹಾಗೂ ಜಾತಿ ಹೆಸರಿನಲ್ಲಿ ನಿಂದಿಸುವುದು ಕೂಡಾ ಇನ್ನು ಮುಂದೆ ಶಿಕ್ಷಾರ್ಹ ಅಪರಾಧವಾಗಲಿದೆ.

ಪರಿಶಿಷ್ಟ ವರ್ಗದ ಮಹಿಳೆಯ ಉಡುಪುಗಳನ್ನು ಕಿತ್ತುಹಾಕಿ ಆಕೆಯನ್ನು ಅಪಮಾನಿಸುವುದು, ಎಸ್‌ಸಿ/ಎಸ್‌ಟಿ ಸಮುದಾಯದ ಸದಸ್ಯನು ಬಲವಂತವಾಗಿ ಮನೆಯನ್ನು ತೊರೆದುಹೋಗುವಂತೆ ಮಾಡುವುದು, ಅವರ ವಿರುದ್ಧ ಲೈಂಗಿಕ ಸ್ವರೂಪದ ಸನ್ನೆಗಳನ್ನು ಮಾಡುವುದು ಕೂಡಾ ಅಪರಾಧವಾಗಲಿದೆ.

ಮತಚಲಾಯಿಸದಂತೆ ಪರಿಶಿಷ್ಟರನ್ನು ತಡೆಯುವುದು, ನಿರ್ದಿಷ್ಟ ಅಭ್ಯರ್ಥಿಗೆ ಮತಚಲಾಯಿಸುವಂತೆ ಅಥವಾ ಚಲಾಯಿಸದಂತೆ ಒತ್ತಡ ಹೇರುವುದು ಕೂಡಾ ಈ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವೆನಿಸಲಿದೆ.

‘‘ಪ್ರಸ್ತುತ, ಭಾರತೀಯ ದಂಡಸಂಹಿತೆಯಡಿ 10 ವರ್ಷ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಕಾರಣವಾಗುವ ಅಪರಾಧಗಳನ್ನು ಪರಿಶಿಷ್ಟ ವರ್ಗದ ಸದಸ್ಯರ ಮೇಲೆ ಎಸಗಿದಲ್ಲಿ, ಅವುಗಳನ್ನು ಪರಿಶಿಷ್ಟರ ದೌರ್ಜನ್ಯ ತಡೆ ಕಾಯ್ದೆಯ ವ್ಯಾಪ್ತಿಗೆ ತರಲಾಗುತ್ತಿತ್ತು. ಆದರೆ ಕಾಯ್ದೆಗೆ ಮಾಡಲಾದ ನೂತನ ತಿದ್ದುಪಡಿಯಿಂದಾಗಿ, ಹತ್ತು ವರ್ಷಗಳಿಗೂ ಕಡಿಮೆ ಅವಧಿಯ ಶಿಕ್ಷೆಗೆ ಕಾರಣವಾಗುವ ಅಪರಾಧಗಳನ್ನೂ ಪರಿಶಿಷ್ಟ ದೌರ್ಜನ್ಯ ತಡೆ ಕಾಯ್ದೆಯಡಿಗೆ ತರಲಾಗುತ್ತದೆ.

ಈ ಕಾಯ್ದೆಯಡಿ, ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ನೇಮಿಸಲಾಗುವುದು. ಈ ವಿಶೇಷ ನ್ಯಾಯಾಲಯಗಳಿಗೆ ಅಪರಾಧ ಪ್ರಕರಣಗಳನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಅಧಿಕಾರ ನೀಡಲಾಗುವುದು.ದೋಷಾರೋಪ ಪಟ್ಟಿ ಸಲ್ಲಿಕೆಯಾದ ಎರಡು ತಿಂಗಳೊಳಗೆ ಪ್ರಕರಣಗಳ ವಿಚಾರಣೆಯನ್ನು ಪೂರ್ತಿಗೊಳಿಸಲು ಶ್ರಮಿಸಲಾಗುತ್ತದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಪ್ರಕಾರ ಪರಿಶಿಷ್ಟರಿಗೆ ನೀರಾವರಿ ಸೌಲಭ್ಯಗಳನ್ನು ಅಥವಾ ಅರಣ್ಯ ಹಕ್ಕುಗಳನ್ನು ನಿರಾಕರಿಸುವುದು, ಚಪ್ಪಲಿಗಳ ಹಾರ ಹಾಕುವುದು, ಪ್ರಾಣಿಗಳ ಕಳೇಬರಗಳನ್ನು ಹೊರಲು ಅಥವಾ ಅವುಗಳ ವಿಲೇವಾರಿಗೆ ಅವರನ್ನು ಬಳಸಿಕೊಳ್ಳುವುದು, ಮಲ ಹೊರುವಿಕೆಯ ಕೆಲಸಕ್ಕೆ ಅವರನ್ನು ಬಳಸಿಕೊಳ್ಳುವುದು ಮುಂತಾದವು ಇನ್ನು ಶಿಕ್ಷಾರ್ಹ ಅಪರಾಧವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X