Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳಾ ದೌರ್ಜನ್ಯವನ್ನು ಸಮಗ್ರವಾಗಿ...

ಮಹಿಳಾ ದೌರ್ಜನ್ಯವನ್ನು ಸಮಗ್ರವಾಗಿ ಚರ್ಚಿಸುವ ಕೃತಿ

ಕಾರುಣ್ಯಾಕಾರುಣ್ಯಾ26 Jan 2016 11:17 PM IST
share
ಮಹಿಳಾ ದೌರ್ಜನ್ಯವನ್ನು ಸಮಗ್ರವಾಗಿ ಚರ್ಚಿಸುವ ಕೃತಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಇತ್ತೀಚೆಗೆ ಸಾರ್ವಜನಿಕ ಚರ್ಚೆಯ ರೂಪವನ್ನು ಪಡೆದಿದೆ. ಈ ಚರ್ಚೆಯ ಭರದಲ್ಲಿ ಕುಟುಂಬದೊಳಗೆ ಮಹಿಳೆಯರು ಬೇರೆ ಬೇರೆ ರೂಪಗಳಲ್ಲಿ ಎದುರಿಸುತ್ತಿರುವ ದೌರ್ಜನ್ಯ, ಶೋಷಣೆಗಳು ಬದಿಗೆ ಸರಿದಿವೆ. ಮಹಿಳೆಯ ಮೇಲಿನ ದೌರ್ಜನ್ಯದ ಮೇಲ್ಮುಖ ಚರ್ಚೆಗಳು ನಡೆಯುತ್ತವೆಯೇ ಹೊರತು, ಅದರ ತಾಯಿ ಬೇರನ್ನು ಗುರುತಿಸಿ ನಿವಾರಿಸುವ ಕೆಲಸ ನಡೆಯುತ್ತಿಲ್ಲ. ನ್ಯಾ. ಎಚ್. ಎನ್. ನಾಗಮೋಹನದಾಸ್ ಅವರು ಬರೆದಿರುವ ‘ಮಹಿಳಾ ಅಸಮಾನತೆ’ ಕೃತಿ ಮಹಿಳೆಯ ಮೇಲೆ ಬೇರೆ ಬೇರೆ ಕ್ಷೇತ್ರಗಳಲ್ಲಿ, ಸಂದರ್ಭಗಳಲ್ಲಿ ನಡೆಯುವ ದೌರ್ಜನ್ಯಗಳನ್ನು ಅಧ್ಯಯನಾತ್ಮಕವಾಗಿ ವಿಶ್ಲೇಷಿಸುತ್ತದೆ. ಅಸಮಾನತೆಯ ಮೂಲವನ್ನು ಹುಡುಕಿಕೊಂಡು ಹೋಗುವ ಕೃತಿ, ಹೆಣ್ಣಿನ ಮೂಲಕ ಜೀವ ಪಡೆದ ಇತಿಹಾಸದ ಬೇರುಗಳನ್ನು ಅರಸಿಕೊಂಡು ಹೋಗುತ್ತದೆ. ಈಜಿಪ್ಟ್‌ನಿಂದ ಹಿಡಿದು, ಪಾಕಿಸ್ತಾನದ ಮಾಂಟೆಗೊಮರಿ, ಗ್ರೀಕ್ ನಾಗರಿಕತೆ, ರೋಮನ್ ನಾಗರಿಕತೆ ಹೀಗೆ ಬೇರೆ ಬೇರೆ ಪ್ರದೇಶಗಳಲ್ಲಿ ಮಹಿಳೆಯ ಅಸಮಾನತೆ ರೂಪು ಪಡೆದದ್ದು ಮತ್ತು ಅಂದು ಒಂದೇ ಧಾರೆಯಾಗಿ ಕೂಡಿಕೊಂಡ ಕತೆಯನ್ನು ಇತಿಹಾಸದ ದಾಖಲೆಗಳ ಜೊತೆಗೆ ಇಡುತ್ತದೆ ಈ ಕೃತಿ. ಮಹಿಳೆಯ ಮೇಲಿನ ದೌರ್ಜನ್ಯಗಳನ್ನು ಬೇರೆ ಬೇರೆ ಧರ್ಮಗಳು ಕಂಡ ರೀತಿ, ಬೇರೆ ಬೇರೆ ದೇಶಗಳ ಕಾನೂನುಗಳು ಕಂಡ ರೀತಿಗಳು ಇಲ್ಲಿ ಚರ್ಚೆಗೊಳಗಾಗುತ್ತವೆ. ಹಾಗೆಯೇ ಬೇರೆ ಬೇರೆ ದೇಶಗಳಲ್ಲಿ ಮಹಿಳಾ ಚಳವಳಿ ಹೇಗೆ ಬೆಳೆಯಿತು ಎನ್ನುವುದನ್ನೂ ಈ ಕೃತಿ ವಿವರಿಸುತ್ತದೆ. ಅಂತೆಯೇ ಆಧುನಿಕ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತಂತೆ ಅಂಕಿ ಸಂಖ್ಯೆಗಳ ಜೊತೆಗೆ ಈ ಕೃತಿ ಸಮಸ್ಯೆಯನ್ನು ಚರ್ಚಿಸುತ್ತದೆ. ಸುಮಾರು 130 ಪುಟಗಳ ಕೃತಿ ಇದಾಗಿದ್ದರು, ಮಹಿಳೆಯ ಮೇಲಿನ ದೌರ್ಜನ್ಯವನ್ನು ಸಮಗ್ರವಾಗಿ ಗ್ರಹಿಸುವ ಪ್ರಯತ್ನವನ್ನು ಇದು ಮಾಡುತ್ತದೆ. ಮಹಿಳೆಯರ ಕುರಿತಂತೆ ಅಧ್ಯಯನ ಮಾಡುವವರಿಗೆ ಇದೊಂದು ಪುಟ್ಟ ಕೈಪಿಡಿಯಾಗಿ ಕೆಲಸ ಮಾಡುವುದರಲ್ಲಿ ಸಂಶಯವಿಲ್ಲ.

ಚಿಂತನ ಪುಸ್ತಕ ಹೊರತಂದಿರುವ ಈ ಕೃತಿಯ ಮುಖಬೆಲೆ 100 ರೂಪಾಯಿ. ಆಸಕ್ತರು 90360 82005 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
ಕಾರುಣ್ಯಾ
ಕಾರುಣ್ಯಾ
Next Story
X