ಇಂದು ಜೆಡಿಎಸ್ ಕಾರ್ಯಕರ್ತರ ಸಭೆ
ಬಂಟ್ವಾಳ, ಜ. 26: ವಿಧಾನಸಭಾ ಕ್ಷೇತ್ರ ಜೆಡಿಎಸ್ ಕಾರ್ಯಕರ್ತರ ಸಮಾವೇಶವು ಜ.27ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಲಿದೆ. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮುಹಮ್ಮದ್ ಶಫಿ, ಪಕ್ಷದ ಪ್ರಮುಖರಾದ ಬಿ. ಮೋಹನ್, ಅಬೂಬಕರ್ ಅಮ್ಮುಂಜೆ, ಪಿ.ಎ. ರಹೀಂ, ಇಬ್ರಾಹೀಂ ಕೈಲಾರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಅಧ್ಯಕ್ಷ ಹಾರೂನ್ ರಶೀದ್ ತಿಳಿಸಿದ್ದಾರೆ.
Next Story





