Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ಷಕ್ಕೆ ಎರಡು ಬಾರಿ ಸನ್ನಡತೆ...

ವರ್ಷಕ್ಕೆ ಎರಡು ಬಾರಿ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ26 Jan 2016 11:57 PM IST
share
ವರ್ಷಕ್ಕೆ ಎರಡು ಬಾರಿ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜ.26: ಸನ್ನಡತೆ ಆಧಾರದಲ್ಲಿ ವರ್ಷಕ್ಕೆ ಎರಡು ಬಾರಿ ಕೈದಿಗಳನ್ನು ಬಿಡುಗಡೆ ಮಾಡುವ ಕುರಿತು ಗಂಭೀರವಾಗಿ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಿಂದ ಸನ್ನಡತೆ ಆಧಾರದಲ್ಲಿ ಬಿಡುಗಡೆಯಾದ 98 ಕೈದಿಗಳ ಮುಂದಿನ ಭವಿಷ್ಯಕ್ಕೆ ಶುಭಕೋರಿ ಅವರು ಮಾತನಾಡಿದರು. ರಾಜ್ಯದ ವಿವಿಧ ಕಾರಾಗೃಹಗಳಿಂದ 375 ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಬೆಂಗಳೂರು ಕಾರಾಗೃಹದಿಂದ ಬಿಡುಗಡೆಯಾಗುತ್ತಿರುವ 98 ಕೈದಿಗಳ ಪೈಕಿ 93 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರಿದ್ದಾರೆ ಎಂದು ಅವರು ಹೇಳಿದರು.

ಸನ್ನಡತೆ ಆಧಾರದ ಕೈದಿಗಳ ಬಿಡುಗಡೆ ವಿಚಾರವು ಸೋಮವಾರ ಸಂಜೆಯವರೆಗೆ ಕಗ್ಗಂಟಾಗಿಯೆ ಇತ್ತು. ಸಚಿವ ಸಂಪುಟದಲ್ಲಿ ಕೈದಿಗಳ ಪಟ್ಟಿಗೆ ಒಪ್ಪಿಗೆ ಪಡೆಯುವುದರ ಜೊತೆಗೆ ಅಂದು ಸಂಜೆಯೆ ನಾವು ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು ನಿಮ್ಮೆಲ್ಲರ ಅದೃಷ್ಟ ಎಂದು ಪರಮೇಶ್ವರ್ ತಿಳಿಸಿದರು.

ಗೃಹ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹೊಸ ವರ್ಷ ಆಚರಿಸಲು ಈ ಕಾರಾಗೃಹಕ್ಕೆ ಭೇಟಿ ನೀಡಿದ್ದೆ. ಆಗ ಕೈದಿಗಳನ್ನು ಭೇಟಿ ಮಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದ್ದೆ. ಅಲ್ಲದೆ, ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದೆ. ಅದರಂತೆ, ನಡೆದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಮನುಷ್ಯ ಹುಟ್ಟುತ್ತಲೆ ಅಪರಾಧಿಯಾಗುವುದಿಲ್ಲ. ಸಮಯ, ಸಂದರ್ಭ ಮನುಷ್ಯನನ್ನು ಆ ರೀತಿ ಮಾಡುತ್ತದೆ. ಕಾರಾಗೃಹಗಳು ಎಂಬುದು ಅಪರಾಧಿಗಳಿಗೆ ಶಿಕ್ಷೆ ನೀಡುವುದಲ್ಲ ಅವರ ಮನಸ್ಸನ್ನು ಪರಿವರ್ತನೆ ಮಾಡುವ ಕೇಂದ್ರಗಳಾಗಿ ಮಾರ್ಪಾಡು ಆಗಬೇಕು. ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೃದ್ಧರು ಹಾಗೂ ಮಹಿಳೆಯರನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಪ್ರಯತ್ನ ಪಡುತ್ತೇವೆ ಎಂದು ಪರಮೇಶ್ವರ್ ನುಡಿದರು.
ಶಿಕ್ಷೆಯನ್ನು ಅನುಭವಿಸುತ್ತಲೆ ತಮ್ಮ ತಪ್ಪಿನ ಅರಿವಾಗಿ ಸನ್ನಡತೆಯನ್ನು ಮೈಗೂಡಿಸಿಕೊಂಡು ಇಂದು ಬಿಡುಗಡೆಯಾಗುತ್ತಿರುವ ಕೈದಿಗಳು, ಸಮಾಜದಲ್ಲಿ ಇನ್ನು ಮುಂದೆ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಅವರು ಹಾರೈಸಿದರು.

ಸಮಾರಂಭದಲ್ಲಿ ಗೃಹ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್, ಪ್ರಧಾನ ಕಾರ್ಯದರ್ಶಿ ಗಗನ್‌ದೀಪ್, ಜೈಲಿನ ಅಧೀಕ್ಷಕ ಶೇಷಮೂರ್ತಿ, ಉಪಮಹಾನಿರೀಕ್ಷಕ ಕೃಷ್ಣಕುಮಾರ್, ಬೆಂಗಳೂರು ಕಾರಾಗೃಹ ಸಲಹಾ ಸಮಿತಿ ಸದಸ್ಯ ಅಬ್ದುರ್ರಹ್ಮಾನ್‌ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X