Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು :ಐಎಸಿಸಿ ಸಮಾವೇಶ -...

ಬೆಂಗಳೂರು :ಐಎಸಿಸಿ ಸಮಾವೇಶ - ಭಾರತ-ಅಮೆರಿಕ 500 ಬಿಲಿಯನ್ ಡಾಲರ್ ವಹಿವಾಟು

ವಾರ್ತಾಭಾರತಿವಾರ್ತಾಭಾರತಿ27 Jan 2016 7:49 PM IST
share

ಐಎಸಿಸಿ ಬೆಂಗಳೂರು ಸಮಾವೇಶದಲ್ಲಿ ರೂಪರೇಷೆ
ಬೆಂಗಳೂರು, ಜ. 27: ಇಂಡೊ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (ಐಎಸಿಸಿ) ಅಮೆರಿಕ ಮತ್ತು ಭಾರತದ ಮಧ್ಯಮ ಗಾತ್ರದ ಕಂಪೆನಿಗಳು ಪರಸ್ಪರ ಪಾಲುದಾರಿಕೆ ಹೊಂದಬೇಕೆಂದು ಸಲಹೆ ಮಾಡಿದ್ದು, ಇದು ಎರಡು ದಿಕ್ಕಿನಲ್ಲಿ ಉದ್ಯಮ ವಹಿವಾಟು ಮತ್ತು ಹೂಡಿಕೆಗೆ ಪೂರಕವಾಗಲಿದೆ ಎಂದು ಹೇಳಿದೆ.
‘ಮುಂದಿನ ಹಂತದ ಭಾರತ-ಅಮೆರಿಕ ಆರ್ಥಿಕ ವಹಿವಾಟು ಎರಡು ರಾಷ್ಟ್ರಗಳ ಮಧ್ಯಮ, ಸಣ್ಣ ಗಾತ್ರದ ಕಂಪೆನಿಗಳ ಸಹಕಾರವನ್ನು ಆಧರಿಸಿದೆ. ಈ ಉದ್ಯಮಗಳು ವಿವಿಧ ಕ್ಷೇತ್ರಗಳಲ್ಲಿ ಒಟ್ಟಾಗಿ ಬಂದರೆ ಅತ್ಯುತ್ತಮ ಅವಕಾಶಗಳಿವೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಇದು ಸಕಾಲವಾಗಿದೆ’ ಎಂದು ಐಎಸಿಸಿ ರಾಷ್ಟ್ರೀಯ ಅಧ್ಯಕ್ಷ ಡಾ.ಲಲಿತ್ ಕನೋಡಿಯಾ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾತನಾಡಿದ ಅವರು, ಈ ಅವಕಾಶಗಳನ್ನು ಬಳಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಐಎಸಿಸಿಯು ಉಭಯ ರಾಷ್ಟ್ರಗಳ ನೀತಿ ನಿರೂಪಕರು, ಉದ್ಯಮದ ಪ್ರಮುಖರ ನಡುವೆ ಪರಸ್ಪರ ಸಂವಹನ ಕಾರ್ಯಕ್ರಮ ಆಯೋಜಿಸುತ್ತಿದೆ. ದಿಲ್ಲಿ ಮತ್ತು ಮುಂಬೈನಲ್ಲಿ ಇತ್ತೀಚಿನ ದಿನಗಳಲ್ಲಿ ಇಂಥ ಸಂವಹನ ಕಾರ್ಯಕ್ರಮಗಳನ್ನು ಆಯೋಜಿಸಿದ ಬಳಿಕ ಐಎಸಿಸಿ ಈಗ ಬೆಂಗಳೂರಿನಲ್ಲಿ ಜ.29ರಂದು ಮುಂದಿನ ಹಂತದ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಈ ಸಮಾವೇಶದ ಮುಖ್ಯ ಉದ್ದೇಶ ಉಭಯ ರಾಷ್ಟ್ರಗಳ ಉದ್ಯಮ ಪ್ರಮುಖರು, ನೀತಿ ನಿರೂಪಕರ ನಡುವೆ ಪರಸ್ಪರ ಚರ್ಚೆಗೆ ವೇದಿಕೆ ಕಲ್ಪಿಸುವುದು. ಈ ಮೂಲಕ ಭಾರತ-ಅಮೆರಿಕ ನಡುವೆ 500 ಬಿಲಿಯನ್ ಡಾಲರ್ ವಹಿವಾಟು ನಡೆಸಲು ಸಾಧ್ಯತೆಗಳನ್ನು ಗುರುತಿಸುವುದು ಎಂದರು.
ಹಿಂದಿನ ಚರ್ಚೆಯಲ್ಲಿ ಆಗಿರುವ ತೀರ್ಮಾನಗಳನ್ನು ಪರಾಮರ್ಶಿಸಿ, ಹೂಡಿಕೆಗೆ ಇರುವ ಅವಕಾಶಗಳನ್ನು ವಿಸ್ತರಿಸಲಾಗುವುದು. ಉಭಯತ್ರರಿಗೂ ಅನುಕೂಲ ಆಗುವಂತಹ ವಾತಾವರಣ ರೂಪಿಸುವ ಉದ್ದೇಶವೂ ಇದೆ. ಐಎಸಿಸಿ ಸಂಸ್ಥೆಯು ಭಾರತ ಮತ್ತು ಅಮೆರಿಕ ನಡುವಣ ವಿಶೇಷ ಉದ್ಯಮ ವೇದಿಕೆಯಾಗಿದ್ದು, ಉಭಯ ರಾಷ್ಟ್ರಗಳ ನಡುವೆ ಹೂಡಿಕೆಯ ಸಾಧ್ಯತೆಗಳನ್ನು ವಿಸ್ತರಿಸಲಿದೆ ಎಂದು ಡಾ.ಕನೋಡಿಯಾ ಹೇಳಿದರು.
ಬೆಂಗಳೂರು ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ರಾಜ್ಯದಲ್ಲಿ ಹೂಡಿಕೆಗೆ ಇರುವ ವಿವಿಧ ಸಾಧ್ಯತೆಗಳು, ಅವಕಾಶಗಳು, ಪ್ರೋತ್ಸಾಹ ಕ್ರಮಗಳ ಬಗೆಗೆ ವಿವರಿಸಲಿದ್ದಾರೆ. ಅಲ್ಲದೆ, ಫೆ.3ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ‘ಇನ್‌ವೆಸ್ಟ್-ಕರ್ನಾಟಕ’ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಮುಖ್ಯ ಭಾಷಣ ಮಾಡಲಿದ್ದು, ಆರೋಗ್ಯ, ಔಷಧ ಮತ್ತು ಜೀವ ವಿಜ್ಞಾನ ಕುರಿತ ಗೋಷ್ಟಿಯಲ್ಲಿ ಮಾತನಾಡಲಿದ್ದಾರೆ. ಈ ವಲಯದಲ್ಲಿ ಅಮೆರಿಕದ ಹೂಡಿಕೆಗೆ ಇರುವ ಅವಕಾಶಗಳನ್ನು ವಿವರಿಸಲಿದ್ದಾರೆ.
ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ರಾಜ್ಯದಲ್ಲಿ ಆರ್ಥಿಕ ಮತ್ತು ಉದ್ದಿಮೆ ಬೆಳವಣಿಗೆಗೆ ಇರುವ ಅವಕಾಶಗಳನ್ನು ವಿವರಿಸುವರು. ಇನ್ಫೋಸಿಸ್ ಟೆಕ್ನಾಲಾಜಿಸ್ ಲಿ.ನ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ
ಐಎಸಿಸಿಯ ಮುಖ್ಯ ಕಾರ್ಯಕ್ರಮವಾಗಿರುವ ಈ ಸಮಾವೇಶದಲ್ಲಿ ಮೇಕ್ ಇನ್ ಇಂಡಿಯಾ, ಆರೋಗ್ಯ ಮತ್ತು ಔಷಧ ಕ್ಷೇತ್ರ, ವಿಮಾನಯಾನ ಮತ್ತು ರಕ್ಷಣೆ, ಇ- ಕಾಮರ್ಸ್, ಸ್ಮಾರ್ಟ್ ಸಿಟಿ ಕುರಿತ ಕ್ಷೇತ್ರಗಳ ಬಗೆಗೆ ಗೋಷ್ಠಿಗಳು ನಡೆಯಲಿದ್ದು, ಉಭಯ ರಾಷ್ಟ್ರಗಳು ಹೂಡಿಕೆಯ ಬಗೆಗೆ ಇರುವ ಅವಕಾಶಗಳು ಈ ಮೂಲಕ 500 ಬಿಲಿಯನ್ ಡಾಲರ್ ವಹಿವಾಟು ವಿಸ್ತರಿಸುವುದರ ಬಗ್ಗೆೆ ಚರ್ಚಿಸಲಿದ್ದಾರೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X