Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ವಿಶ್ವಕಪ್: ಭಾರತಕ್ಕೆ ಇಂದು...

ಅಂಡರ್-19 ವಿಶ್ವಕಪ್: ಭಾರತಕ್ಕೆ ಇಂದು ಐರ್ಲೆಂಡ್ ಎದುರಾಳಿ

ವಾರ್ತಾಭಾರತಿವಾರ್ತಾಭಾರತಿ27 Jan 2016 11:35 PM IST
share
ಅಂಡರ್-19 ವಿಶ್ವಕಪ್: ಭಾರತಕ್ಕೆ ಇಂದು ಐರ್ಲೆಂಡ್ ಎದುರಾಳಿ

ಮೀರ್ಪುರ, ಜ.27: ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿರುವ ಭಾರತದ ಅಂಡರ್-19 ತಂಡ ಗುರುವಾರ ನಡೆಯಲಿರುವ ವಿಶ್ವಕಪ್‌ನ ‘ಡಿ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಶಿಶು ಐರ್ಲೆಂಡ್ ತಂಡವನ್ನು ಎದುರಿಸಲಿದೆ.

ಕಿರಿಯರ ವಿಶ್ವಕಪ್‌ನಲ್ಲಿ ಹಲವಾರು ಕ್ರಿಕೆಟ್ ಪ್ರತಿಭೆಗಳನ್ನು ಪಡೆದಿರುವ ಭಾರತ ಮೂರು ಬಾರಿ ಚಾಂಪಿಯನ್ ಆಗಿದೆ. ಈ ಟೂರ್ನಿಯ ಮೂಲಕವೇ ಯುವರಾಜ್ ಸಿಂಗ್, ಹಾಲಿ ನಂ.1 ಆಟಗಾರ ವಿರಾಟ್ ಕೊಹ್ಲಿ ಅವರಂತಹ ಪ್ರತಿಭೆಗಳು ಬೆಳಕಿಗೆ ಬಂದಿವೆ.

ವಿಶ್ವದಾದ್ಯಂತ ನೇರ ಪ್ರಸಾರವಾಗಲಿರುವ ಈ ಬಾರಿಯ ವಿಶ್ವಕಪ್‌ನಲ್ಲಿ ದ್ರಾವಿಡ್ ಮಾರ್ಗದರ್ಶನದಲ್ಲಿ ಐಶಾನ್ ಕಿಶಾನ್, ರಿಷಬ್ ಪಂತ್, ಆವೇಶ್ ಖಾನ್ ತಮ್ಮ ಪ್ರತಿಭೆ ತೋರಿಸಲು ಸಜ್ಜಾಗಿದ್ದಾರೆ.

ಬಾಂಗ್ಲಾದೇಶದಲ್ಲಿ ಭದ್ರತೆಯ ಭೀತಿಯ ಕಾರಣ ನೀಡಿ ಆಸ್ಟ್ರೇಲಿಯ ತಂಡ ಟೂರ್ನಿಯಿಂದ ಹೊರ ನಡೆದಿದೆ. ಈ ಹಿನ್ನೆಲೆಯಲ್ಲಿ ಭಾರತವೇ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿ ಹೊರಹೊಮ್ಮಿದೆ.

ಭಾರತ ತಂಡದಲ್ಲಿರುವ ಐವರು ಆಟಗಾರರು ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದರೆ, ಓರ್ವ ಆಟಗಾರ ಸೀನಿಯರ್ ರಾಜ್ಯ ತಂಡದ ಪರ ಟ್ವೆಂಟಿ-20 ಕ್ರಿಕೆಟ್ ಆಡಿದ್ದಾನೆ.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿರುವ ಸರ್ಫ್‌ರಾಝ್ ಖಾನ್ ಈಗಾಗಲೇ ಮನೆ ಮಾತಾಗಿದ್ದಾರೆ. ಖಾನ್‌ಗೆ ಇದು ಎರಡನೆ ವಿಶ್ವಕಪ್ ಟೂರ್ನಿಯಾಗಿದ್ದು, ಆತ ರಣಜಿ ಟ್ರೋಫಿಯಲ್ಲಿ ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

 ಎಡಗೈ ಆರಂಭಿಕ ದಾಂಡಿಗ ರಿಷಬ್ ಪಂತ್ ಈಗಾಗಲೇ ದಿಲ್ಲಿ ಪರ ಆಡಿದ್ದು, ಭಾರತದ ಪರ ಅಂಡರ್-19 ತಂಡದಲ್ಲಿ ಆಡಿದ್ದಾರೆ. ನಾಯಕ ಐಶಾನ್ ಕಿಶನ್ ಜಾರ್ಖಂಡ್‌ನ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದಾರೆ. ಇತ್ತೀಚೆಗೆ ವಿಜಯ ಹಝಾರೆ ಟ್ರೋಫಿಯ ವೇಳೆ ಭಾರತದ ನಾಯಕ ಎಂಎಸ್ ಧೋನಿಯೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದಾರೆ.

 ವೇಗದ ಬೌಲರ್ ಆವೇಶ್ ಖಾನ್ ಹಾಗೂ ರಿಕಿ ಭುಯ್ ಕಳೆದ ಆವೃತ್ತಿಯ ಟೂರ್ನಿಯಲ್ಲಿ ಆಡಿದ್ದಾರೆ. ಆಸ್ಟ್ರೇಲಿಯಕ್ಕೆ ಬದಲಿ ತಂಡವಾಗಿ ಆಡುತ್ತಿರುವ ಐರ್ಲೆಂಡ್‌ನಲ್ಲಿ ಅನುಭವಿ ಆಟಗಾರರಿಲ್ಲ. ಭಾರತ ಮೂಲದ ಸ್ಪಿನ್ನರ್ 15ರ ಹರೆಯದ ವರುಣ್ ಚೋಪ್ರಾ ಆ ತಂಡದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X