Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ಆತ್ಮಹತ್ಯೆ ಪ್ರಕರಣ: ಜಾತಿ...

ರೋಹಿತ್ ಆತ್ಮಹತ್ಯೆ ಪ್ರಕರಣ: ಜಾತಿ ತಾರತಮ್ಯದ ವಿರುದ್ಧ ಚಳವಳಿಗೆ ತಿರುಗಿದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jan 2016 11:51 PM IST
share
ರೋಹಿತ್ ಆತ್ಮಹತ್ಯೆ ಪ್ರಕರಣ: ಜಾತಿ ತಾರತಮ್ಯದ ವಿರುದ್ಧ ಚಳವಳಿಗೆ ತಿರುಗಿದ ಪ್ರತಿಭಟನೆ

ಹೊಸದಿಲ್ಲಿ, ಜ.27: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರ ಆತ್ಮಹತ್ಯೆಯ ವಿರುದ್ಧದ ಪ್ರತಿಭಟನೆಯೀಗ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದ ವಿರುದ್ಧದ ಚಳವಳಿಯಾಗಿ ಪರಿವರ್ತನೆಗೊಂಡಿದೆ. ದಿಲ್ಲಿಯ ಜವಾಹರಲಾಲ್ ನೆಹರೂ ವಿವಿ ಸಹಿತ ದೇಶಾದ್ಯಂತದ ಅನೇಕ ಅಗ್ರ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಮುಷ್ಕರದ ಕಾರಣ ಬುಧವಾರ ತರಗತಿಗಳನ್ನು ಅಮಾನತುಗೊಳಿಸಿವೆ.

ರೋಹಿತ್‌ರ ಆತ್ಮಹತ್ಯೆ ಪ್ರಕರಣವೀಗ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪಿಎಚ್‌ಡಿ ಮುಂದುವರಿಸಲು ಸಮಯ ವಿಸ್ತರಣೆ ಮಾಡಲು ನಿರಾಕರಿಸಿದುದು ರೋಹಿತ್‌ರ ಆತ್ಮಹತ್ಯೆಗೆ ಕಾರಣವೆಂದು ಆರೋಪಿಸಲಾಗಿದೆ.

ಜೆಎನ್‌ಯು ಹಾಗೂ ದಿಲ್ಲಿ ವಿವಿಗಳ ವಿದ್ಯಾರ್ಥಿಗಳು ಜಂತರ್-ಮಂತರ್‌ನಲ್ಲಿ ಪ್ರದರ್ಶನ ನಡೆಸಿ, ರೋಹಿತ್‌ರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿರುವ ಮಾನವ ಸಂಪನ್ಮೂಲಾಭಿವೃಧ್ಧಿ ಸಚಿವೆ ಸ್ಮತಿ ಇರಾನಿ, ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಹೈದರಾಬಾದ್ ವಿವಿಯ ಉಪಕುಲಪತಿಯ ರಾಜೀನಾಮೆಗೆ ಆಗ್ರಹಿಸಿದರು.

ಆಮ್ ಆದ್ಮಿ ಪಕ್ಷದ ಸದಸ್ಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರೋಹಿತ್ ವೇಮುಲಾರ ದುರಂತ ಸಾವಿನ ಬಳಿಕ ಎಚ್‌ಆರ್‌ಡಿ ಸಚಿವಾಲಯವು ರೋಹಿತ್ ಹಾಗೂ ಇತರ ನಾಲ್ವರು ವಿದ್ಯಾರ್ಥಿಗಳನ್ನು ಬಲಿಪಶುಗಳ್ನಾಗಿಸಿದುದರಲ್ಲಿ ತನ್ನ ಪಾತ್ರವೇನೂ ಇಲ್ಲವೆಂದು ತನ್ನಿಂದಾದ ನಟನೆ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ರೋಹಿತ್ ಹಾಗೂ ಇತರ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿವಿಗೆ ಒತ್ತಡ ಹೇರುವಲ್ಲಿ ಅದೂ ಸಕ್ರಿಯ ಪಾತ್ರ ವಹಿಸಿದೆಯೆಂಬುದನ್ನು ಪತ್ರಗಳು ಸ್ಟಷ್ಟವಾಗಿ ತೋರಿಸುತ್ತಿವೆಯೆಂದು ದಿಲ್ಲಿಯ ಎಡಪಂಥೀಯ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿ ಆಶುತೋಷ್ ಕುಮಾರ್ ಆರೋಪಿಸಿದ್ದಾರೆ.

ಹೈದರಾಬಾದ್ ವಿವಿಯ ಆವರಣ ‘ಜಾತಿ ವಾದಿಗಳು ಹಾಗೂ ದೇಶ ವಿರೋಧಿ ಚಟುವಟಿಕೆಗಳ ಅಡ್ಡೆಯಾಗಿದೆ’ ಎಂದು ಬಂಡಾರು ದೂರು ನೀಡಿದ ಬಳಿಕ ಇರಾನಿ ನೇತೃತ್ವದ ಸಚಿವಾಲಯ ವಿವಿಗೆ ಹಲವು ಪತ್ರಗಳನ್ನು ಬರೆದಿತ್ತು.

ರಾಂಚಿಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಸೋಮವಾರ ರಾಂಚಿ ವಿವಿಯ ಬಾಗಿಲಿನೆದುರು ಬಂಡಾರು ದತ್ತಾತ್ರೇಯರ ಪ್ರತಿಕೃತಿ ದಹಿಸಿದ್ದು, ಜಮ್ಶೆದ್‌ಪುರ, ಧನಾಬಾದ್ ಹಾಗೂ ಸಂತಾಲ ಪರಗಣಗಳಲ್ಲಿ ಪ್ರತಿಭಟನಾ ರ್ಯಾಲಿಗಳು ನಡೆದಿದ್ದವು.

ಹೈದರಾಬಾದ್‌ನಲ್ಲಿ ಪ್ರತಿಭಟನಾಕಾರರು ಹಂಗಾಮಿ ಉಪಕುಲಪತಿಯ ನಿವಾಸಕ್ಕೆ ಬೆಂಕಿ ಹಚ್ಚಿದರು ಹಾಗೂ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ, ಆ ವೇಳೆ ಹಂಗಾಮಿ ಉಪಕುಲಪತಿ ವಿಪಿನ್ ಶ್ರೀವಾಸ್ತವ ಮನೆಯಲ್ಲಿರಲಿಲ್ಲ.


ಉಪವಾಸ ನಿರತರು ಆಸ್ಪತ್ರೆಗೆ ದಾಖಲು


ಹೈದರಾಬಾದ್, ಜ.27: ಹೈದರಾಬಾದ್ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರ ಆತ್ಮಹತ್ಯೆಯನ್ನು ವಿರೋಧಿಸಿ ಉಪವಾಸ ಮುಷ್ಕರ ನಡೆಸುತ್ತಿದ್ದ 7 ವಿದ್ಯಾರ್ಥಿಗಳಲ್ಲಿ 6 ಮಂದಿಯ ಆರೋಗ್ಯ ಬಿಗಡಾಯಿಸಿದೆ. ಅವರನ್ನು ಆರೋಗ್ಯ ಕೇಂದ್ರವೊಂದಕ್ಕೆ ಸ್ಥಳಾಂತರಿಸಲಾಗಿದೆ.

6 ಮಂದಿ ವಿದ್ಯಾರ್ಥಿಗಳನ್ನು ನಿನ್ನೆ ಆರೋಗ್ಯ ಕೇಂದ್ರವೊಂದಕ್ಕೆ ವರ್ಗಾಯಿಸಲಾಗಿದೆಯೆಂದು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಕುಮಾರ್ ತಿಳಿಸಿದ್ದಾರೆ.

ಉಪವಾಸ ಮುಷ್ಕರ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೊದಲ ತಂಡವನ್ನು ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಿದ ಬಳಿಕ, ಮೂರು ದಿನಗಳ ಹಿಂದೆ ಆರಂಭಿಸಿದ್ದ ನಿರಶನವನ್ನು ಒಬ್ಬ ವಿದ್ಯಾರ್ಥಿ ಮುಂದುವರಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X