Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನಾಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ...

ಸೇನಾಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ28 Jan 2016 10:09 PM IST
share

ಹೊಸದಿಲ್ಲಿ: ಅಕ್ರಮ ಸಂಪತ್ತು ಹೊಂದಿರುವ ಆರೋಪಗಳನ್ನು ಎದುರಿಸುತ್ತಿರುವ ಇಬ್ಬರು ಹಾಲಿ ಲೆಫ್ಟಿನೆಂಟ್ ಜನರಲ್‌ಗಳ ವಿರುದ್ಧ ತನಿಖೆಯನ್ನು ನಡೆಸುವಂತೆ ರಕ್ಷಣಾ ಸಚಿವಾಲಯವು ಸಿಬಿಐಯನ್ನು ಕೇಳಿಕೊಂಡಿದೆ ಎಂದು ಸರಕಾರದ ಮೂಲಗಳು ಗುರುವಾರ ತಿಳಿಸಿದವು.
ಈ ವಿಷಯದಲ್ಲಿ ಪ್ರಾಥಮಿಕ ತನಿಖೆಗೆ ಸಿಬಿಐ ಇನ್ನೂ ಆದೇಶಿಸಿಲ್ಲ.
 ಕಳೆದ ವರ್ಷ ಮೇಜರ್ ಜನರಲ್‌ಗಳಿಗೆ ಲೆಫ್ಟಿನೆಂಟ್ ಜನರಲ್‌ಗಳಾಗಿ ಬಡ್ತಿ ಸಂಬಂಧಿತ ವಿಷಯದಲ್ಲಿ ಭ್ರಷ್ಟಾಚಾರದ ಆರೋಪಗಳ ನಡುವೆ ಈ ಇಬ್ಬರ ಪೈಕಿ ಓರ್ವ ಸೇನಾಧಿಕಾರಿಯ ಹೆಸರು ಕೇಳಿಬಂದಿತ್ತು. ಆಗ ಈ ಅಧಿಕಾರಿ ಕೋಲ್ಕತಾದಲ್ಲಿ ಸೇವೆಯಲ್ಲಿದ್ದರು. ಅವ್ಯವಹಾರಗಳ ಆರೋಪಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವಾಲಯವು ಕೆಲವು ಅಧಿಕಾರಿಗಳ ಬಡ್ತಿಯನ್ನು ತಡೆಹಿಡಿದಿತ್ತು.
ಬಡ್ತಿ ಸಂಬಂಧಿತ ವಿಷಯದಲ್ಲಿ ಆಗ ಸೇವೆಯಲ್ಲಿದ್ದು,ಹಾಲಿ ನಿವೃತ್ತರಾಗಿರುವ ಲೆಫ್ಟಿನೆಂಟ್ ಜನರಲ್ ಓರ್ವರ ಪಾತ್ರದ ಕುರಿತು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಭಾರೀ ವದಂತಿಗಳು ಕೇಳಿ ಬಂದಿದ್ದವು. ಆದರೆ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ವದಂತಿಗಳನ್ನು ರಕ್ಷಣಾ ಸಚಿವಾಲಯವು ತಳ್ಳಿಹಾಕಿತ್ತು.
ಸಿಬಿಐಗೆ ಒಪ್ಪಿಸಲಾಗಿರುವ ಇನ್ನೊಂದು ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿ ಸೇನೆಯ ಕೇಂದ್ರ ಕಚೇರಿಯಲ್ಲಿ ನಿಯೋಜಿತರಾಗಿದ್ದಾರೆ. ಸಿಬಿಐಗೆ ಒಪ್ಪಿಸುವ ಮುನ್ನ ರಕ್ಷಣಾ ಸಚಿವ ಮನೋಹರ ಪಾರ್ರಿಕರ್ ಅವರೇ ಖುದ್ದು ಈ ವಿಷಯವನ್ನು ಪರಿಶೀಲಿಸಿದ್ದರೆನ್ನಲಾಗಿದೆ.
ವಿಶೇಷ ಬಡ್ತಿ ಮಂಡಳಿಯೊಂದು ಕಳೆದ ವರ್ಷ ಲೆಫ್ಟಿನೆಂಟ್ ಜನರಲ್ ದರ್ಜೆಯ ಮೂರು ಖಾಲಿ ಹುದ್ದೆಗಳಿಗೆ 33 ಮೇಜರ್ ಜನರಲ್‌ಗಳ ಹೆಸರುಗಳನ್ನು ಪರಿಗಣಿಸಿತ್ತು ಮತ್ತು ಅವುಗಳ ಪೈಕಿ ಕೆಲವು ಹೆಸರುಗಳಿಗೆ ಹಸಿರು ನಿಶಾನೆ ತೋರಿಸಿ ಅವುಗಳನ್ನು ಸಚಿವಾಲಯಕ್ಕೆ ರವಾನಿಸಿತ್ತು. ಆದರೆ ಕೆಲವು ಅಧಿಕಾರಗಳ ವಿರುದ್ಧ ದೂರುಗಳ ಸರಮಾಲೆಯೇ ಕೇಳಿ ಬಂದ ನಂತರ ಪಾರ್ರಿಕರ್ ಅವರು ಈ ವಿಷಯವನ್ನು ಪರಿಶೀಲಿಸಿದ್ದರು ಎಂದು ಮೂಲಗಳು ತಿಳಿಸಿದವು.
ಈಗ ಸಿಬಿಐಗೆ ಒಪ್ಪಿಸಲಾಗಿರುವ ಪ್ರಕರಣಗಳಲ್ಲಿಯ ಇಬ್ಬರು ಅಧಿಕಾರಿಗಳ ಪೈಕಿ ಓರ್ವರು ಕೆಲವು ವರ್ಷಗಳ ಹಿಂದೆ ಗಡಿ ರಸ್ತೆಗಳ ಸಂಸ್ಥೆಯು ಕೈಗೊಂಡಿದ್ದ ಯೋಜನೆಯೊಂದರಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ತನಿಖೆಯನ್ನು ಎದುರಿಸಿದ್ದರು ಎಂದು ಸುದ್ದಿಸಂಸ್ಥೆಯು ಗುರುವಾರ ವರದಿ ಮಾಡಿದೆ. ಆದರೆ ಅವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಸಾಕಷ್ಟು ಸಾಕ್ಷಾಧಾರಗಳು ಲಭಿಸಿರಲಿಲ್ಲ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X