Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯಕೀಯ ಕಾಲೇಜುಗಳ ಕಾರ್ಮಿಕರಿಗೆ...

ವೈದ್ಯಕೀಯ ಕಾಲೇಜುಗಳ ಕಾರ್ಮಿಕರಿಗೆ ಕಿರುಕುಳ: ಆರೋಪ

ವಾರ್ತಾಭಾರತಿವಾರ್ತಾಭಾರತಿ28 Jan 2016 11:12 PM IST
share
ವೈದ್ಯಕೀಯ ಕಾಲೇಜುಗಳ ಕಾರ್ಮಿಕರಿಗೆ ಕಿರುಕುಳ: ಆರೋಪ

ಕೋಲಾರ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಿಐಟಿಯು ಧರಣಿ
ಕೋಲಾರ, ಜ.28: ದೇವರಾಜ ಅರಸು ವೈದ್ಯ ಕೀಯ ಕಾಲೇಜು ಮತ್ತು ಆರ್.ಎಲ್.ಜಾಲಪ್ಪ ಆಸ್ಪತ್ರೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಹಲವಾರು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದ್ದು, ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಿಐಟಿಯು ವತಿಯಿಂದ ಜಿಲ್ಲಾಧಿಕಾರಿ ಕಚೆೇರಿ ಎದುರು ಧರಣಿಯನ್ನು ಹಮ್ಮಿಕೊಳ್ಳಲಾಯಿತು.
  ಕೋಲಾರ ನಗರದ ಟಮಕದಲ್ಲಿ 1986 ರಲ್ಲಿ ಮಾಜಿ ಸಚಿವ ಆರ್.ಎಲ್.ಜಾಲಪ್ಪಅವರು ಪ್ರಾರಂಭಿಸಿದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳು ಜಿಲ್ಲೆಯ ಜನತೆಗೆ ಆರೋಗ್ಯದ ಸೇವೆಯನ್ನು ಒದಗಿಸುತ್ತಿದೆ. ಲ್ಲಿ ಪ್ರಾರಂಭದಿಂದಲೂ ಸಾವಿರಕ್ಕಿಂತಲೂ ಹೆಚ್ಚಿನ ನೌಕರರು ವಿವಿಧ ವಿಭಾಗಗಳಲ್ಲಿ ದುಡಿಯುತ್ತಿದ್ದಾರೆ. ಇವರಿಗೆ ಕನಿಷ್ಠ ವೇತನ, ಕೆಲಸದ ಭದ್ರತೆ, ರಜೆ, ಗ್ರಾಚ್ಯುಯಿಟಿ, ಆರೋಗ್ಯ ಸೇವೆ, ಕ್ಯಾಂಟೀನ್ ಸೌಲಭ್ಯ ಸೇರಿದಂತೆ ಕಾರ್ಮಿಕ ಕಾನೂನಿನ ಅನ್ವಯ ಸಿಗಬೇಕಾದ ಯಾವುದೇ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ ಎಂದು ಸಿಐಟಿಯು ಮುಖಂಡರು ಆರೋಪಿಸಿದ್ದಾರೆ.ನ್ನೂ ಕೆಲವು ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಜನಪ್ರತಿನಿಧಿಯಾಗಿ ಹಲವಾರು ವರ್ಷಗಳ ಕಾಲ ಮಂತ್ರಿಯಾಗಿದ್ದ ಜಾಲಪ್ಪಕಾನೂನನ್ನು ಗಾಳಿಗೆ ತೂರಿ ನೌಕರರನ್ನು ಶೋಷಣೆ ಮಾಡುತ್ತಿರುವುದು ಖಂಡನೀಯ. 2007 ರಲ್ಲಿ ಮೆಡಿಕಲ್ ಕಾಲೇಜು, ಡೀಮ್ಡ್ ಟುಬಿ ಯೂನಿವರ್ಸಿಟಿಯಾಗಿದೆ. ಇದರ ಅನ್ವಯ ನೌಕರರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿಲ್ಲ. ಅತ್ಯಂತ ಕಡಿಮೆ ವೇತನವನ್ನು ನೀಡುತ್ತಿದ್ದಾರೆ. ಈ ವಿಷಯವಾಗಿ ನೌಕರರು ಮಾತನಾಡಿದರೆ ಅವರನ್ನು ಬೆದರಿಸುವುದು, ವರ್ಗಾವಣೆ, ಅಮಾನತು ಮಾಡಲಾಗುತ್ತಿದೆ ಎಂದು ದೂರಿದರು.
ಮಿತಿ ಮೀರಿದ ಶೋಷಣೆಯ ಬಗ್ಗೆ ಕಾರ್ಮಿಕರು ಕಾರ್ಮಿಕ ಇಲಾಖೆಗೆ ದೂರನ್ನು ನೀಡಿ, ಕಾರ್ಮಿಕ ಸಂಘವನ್ನು ನೋಂದಾಯಿಸಿಕೊಂಡ ನಂತರ ಕಾರ್ಮಿಕರಿಗೆ ಕೊಡುತ್ತಿರುವ ಕಿರುಕುಳ ಮತ್ತಷ್ಟು ಹೆಚ್ಚಾಗಿದೆ. ಕಾರ್ಮಿಕ ಸಂಘಕ್ಕೆ ಸದಸ್ಯರಾಗಬಾರದೆಂದು ಬೆದರಿಕೆ ಹಾಕಿ ಕಾನೂನು ಬಾಹಿರವಾಗಿ ಸಹಿಗಳನ್ನು ಪಡೆಯುತ್ತಿದ್ದಾರೆ. ಸಹಿ ಹಾಕದವರಿಗೆ ವೇತನವನ್ನು ಕಡಿತಗೊಳಿಸುತ್ತಿದ್ದಾರೆ. ಕಾನೂನು ಬಾಹಿರವಾದ ನೋಟಿಸ್‌ಗಳನ್ನು ನೀಡಿ ನೌಕರರನ್ನು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದರು.
ನೌಕರರ ಮಕ್ಕಳ ಶಾಲಾ ಶುಲ್ಕದಲ್ಲಿ ನೀಡುತ್ತಿದ್ದ ಶೇ.50 ರಷ್ಟು ರಿಯಾಯಿತಿಯನ್ನು ನೀಡದೇ ಶೇ.100 ರಷ್ಟು ಶಾಲಾ ಶುಲ್ಕವನ್ನು ಕಟ್ಟಲಿಲ್ಲವೆಂದು ಶಾಲೆಯಿಂದ ಹೊರಗೆ ನಿಲ್ಲಿಸಿ ನಂತರ ಛೀಮಾರಿ ಹಾಕಿಸಿಕೊಂಡಿದ್ದಾರೆ. ಸ್ಪತ್ರೆಯಲ್ಲಿ ಕೆಲಸ ಮಾಡಿದರೂ ಒಬ್ಬರಿಗೂ ಉಚಿತ ಆರೋಗ್ಯ ಸೇವೆ ನೀಡುವುದಿಲ್ಲ. ಇನ್ನೂ ಹಲವಾರು ರೀತಿಯಲ್ಲಿ ಕಾರ್ಮಿಕ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳಾಗಲಿ, ಜಿಲ್ಲಾಧಿಕಾರಿಗಳಾಗಲಿ ಇವರ ಈ ಕಾನೂನು ಬಾಹಿರ ಕೃತ್ಯಗಳ ವಿರುದ್ದ ಕ್ರಮ ಜರಗಿಸದೇ ಇರುವುದು ಅವರಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗಿದೆ ಎಂದು ಆರೋಪಿಸಿದರು.ೂಡಲೇ ವರ್ಗಾವಣೆ, ಅಮಾನತುಗೊಂಡ ನೌಕರರನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕು ಮತ್ತು ಸಂಸ್ಥೆಯವರು ಕಾರ್ಮಿಕ ಇಲಾಖೆಗೆ ನೀಡಿರುವ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರದ ಅನ್ವಯದ 4ನೆ ವೇತನ ಆಯೋಗ ಮತ್ತು 5ನೆ ವೇತನ ಆಯೋಗ ಶಿಫಾರಸಿನಂತೆ ವೇತನದ ಹಿಂಬಾಕಿ, 6ನೆ ವೇತನ ಆಯೋಗ ಶಿಫಾರಸಿನಂತೆ ವೇತನ ನೀಡಬೇಕು ಎಂದು ಆಗ್ರಹಿಸಿದರು.ಡಿತಗೊಳಿಸಿರುವ ವೇತನವನ್ನು ಹೆಚ್ಚಿಸಿ ಕೊಡಬೇಕು, ಕಾರ್ಮಿಕ ವಿರೋಧಿ ನೀತಿಗಳನ್ನು ಕೈ ಬಿಟ್ಟು ಕಾರ್ಮಿಕರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ, ಧರಣಿ ನಿರತ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಎಚ್.ಎಂ.ಯಲ್ಲಪ್ಪ, ತಾಲೂಕು ಕಾರ್ಯದರ್ಶಿ ಮುನಿರಾಜಮ್ಮ, ವಿಜಿಯಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X