Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಪಾಲರ ಶಿಫಾರಸಿಗೆ ಗೋಹತ್ಯೆ-ಭೀತಿವಾದ...

ರಾಜ್ಯಪಾಲರ ಶಿಫಾರಸಿಗೆ ಗೋಹತ್ಯೆ-ಭೀತಿವಾದ ಕಾರಣ!

ವಾರ್ತಾಭಾರತಿವಾರ್ತಾಭಾರತಿ28 Jan 2016 11:48 PM IST
share

ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ ಹೊಸದಿಲ್ಲಿ, ಜ.28: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಲು ಗೋಹತ್ಯೆ ಮತ್ತು ಭೀತಿವಾದವನ್ನು ಕಾರಣಗಳನ್ನಾಗಿ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಖೋವಾ ಅವರು ಉಲ್ಲೇಖಿಸಿದ್ದಾರೆ.
 ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷವು ಸಲ್ಲಿಸಿರುವ ಅರ್ಜಿಗೆ ಎರಡು ದಿನಗಳಲ್ಲಿ ಉತ್ತರಿಸುವಂತೆ ಬುಧವಾರ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸರ್ವೋಚ್ಚ ನ್ಯಾಯಾಲಯವು, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಗಳನ್ನು ತನಗೊಪ್ಪಿಸುವಂತೆ ರಾಜಖೋವಾರನ್ನು ಆದೇಶಿಸಿತ್ತು.
ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ಸೂಚನೆಯಂತೆ ರಾಜಖೋವಾ ಅವರು ಅರುಣಾಚಲ ಪ್ರದೇಶದಲ್ಲಿನ ತನ್ನ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅರುಣಾಚಲ ಪ್ರದೇಶದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯನ್ನು ಬಿಜೆಪಿ ಸರಕಾರವು ತುರ್ತು ಸ್ಥಿತಿ ಸದೃಶ ಪರಿಸ್ಥಿತಿಗೆ ಹೋಲಿಸಿದೆ.
ಕೇಂದ್ರ ಸಂಪುಟದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ರಾಜ್ಯದಲ್ಲಿ ಕೇಂದ್ರಾಡಳಿತದ ಆದೇಶಕ್ಕೆ ಮಂಗಳವಾರ ಸಹಿ ಹಾಕಿದ್ದರು.
 ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಪ್ರತಿಪಾದಿಸಿರುವ ತನ್ನ ವರದಿಯಲ್ಲಿ ರಾಜಖೋವಾ ಅವರು, ರಾಜಭವನದ ಹೊರಗಡೆ ದನವೊಂದನ್ನು ಹತ್ಯೆ ಮಾಡುತ್ತಿರುವ ಛಾಯಾಚಿತ್ರವನ್ನು ಲಗತ್ತಿಸಿದ್ದಾರೆ ಎಂದು ಆಂಗ್ಲ ದೈನಿಕವೊಂದು ವರದಿ ಮಾಡಿದೆ.
 ರಾಜಖೋವಾರ ಆದೇಶದಂತೆ ವಿಧಾನ ಸಭಾ ಅಧಿವೇಶನದ ಹಿಂದೂಡಿಕೆಯನ್ನು ಮತ್ತು ಮುಖ್ಯಮಂತ್ರಿ ನಬಮ್ ಟುಕಿ(ಈಗ ಮಾಜಿ) ಅವರ ಪದಚ್ಯುತಿಯನ್ನು ಉಚ್ಚ ನ್ಯಾಯಾಲಯವು ರದ್ದುಗೊಳಿಸಿದ ಬಳಿಕ ಹಲವಾರು ಕಾಂಗ್ರೆಸ್ ಶಾಸಕರು ರಾಜ ಭವನದ ಹೊರಗಡೆ ದನವೊಂದನ್ನು ಬಲಿ ನೀಡಿದ್ದರು ಎಂದು ದೈನಿಕವು ವರದಿ ಮಾಡಿದೆ.
ಟುಕಿ ಅವರು ನಿಷೇಧಿತ ಭಯೋತ್ಪಾದಕ ಸಂಘಟನೆ ಎನ್‌ಎಸ್‌ಸಿಎನ್-ಕೆ ಜೊತೆ ಒಡನಾಟ ಹೊಂದಿದ್ದಾರೆ ಎಂದೂ ರಾಜಖೋವಾ ತನ್ನ ನಾಲ್ಕು ಪುಟಗಳ ವರದಿಯಲ್ಲಿ ಆರೋಪಿಸಿದ್ದಾರೆ.

ಸರಕಾರಿ ಅಧಿಕಾರಿಗಳೇ ಹೆಚ್ಚಿರುವ, ನಿಷಿಗಳ ಸರ್ವೋಚ್ಚ ಕೋಮು ಸಂಘಟನೆ ನಿಷಿ ಇಲೈಟ್ ಸೊಸೈಟಿಗೆ ಪ್ರಚೋದನೆ ಮತ್ತು ಹಣಕಾಸು ನೆರವು ನೀಡುವ ಮೂಲಕ ಟುಕಿ ಸರಕಾರಿ ಅಧಿಕಾರಿಗಳಿಂದ ಅಶಿಸ್ತು,ಅರಾಜಕತೆ ಮತ್ತು ರಾಜಕೀಯವನ್ನು ಪ್ರೋತ್ಸಾಹಿಸುತ್ತಿದ್ದರು ಎಂದೂ ರಾಜಖೋವಾ ಆರೋಪಿಸಿದ್ದಾರೆನ್ನಲಾಗಿದೆ. ನಿಷಿ ಅರುಣಾಚಲ ಪ್ರದೇಶದ ಪ್ರಮುಖ ಬುಡಕಟ್ಟು ಜನಾಂಗವಾಗಿದೆ. ‘‘ಅರುಣಾಚಲ ಪ್ರದೇಶದಲ್ಲಿ ಸಂವಿಧಾನದ ವೈಫಲ್ಯ’’ ಶೀರ್ಷಿಕೆಯ ಈ ವರದಿಯು ರಾಜಖೋವಾ ಅವರು 2015, ಸೆಪ್ಟಂಬರ್‌ನಿಂದ ಕೇಂದ್ರಕ್ಕೆ ರವಾನಿಸಿರುವ 15 ವರದಿಗಳಲ್ಲೊಂದಾಗಿದೆ. ವಸ್ತುಶಃ ಕಳೆದ ಹಲವಾರು ತಿಂಗಳುಗಳಿಂದಲೂ ರಾಜ್ಯದಲ್ಲಿ ಅಲ್ಪಸಂಖ್ಯಾತ ಸರಕಾರವು ಆಡಳಿತ ನಡೆಸುತ್ತಿದೆ ಎಂದು ವರದಿಯು ಹೇಳಿದೆ.
 ರಾಜ್ಯದಲ್ಲಿ ದಿನಗಳೆದಂತೆ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಹದಗೆಡುತ್ತಲೇ ಇದೆ. ಡಿ.15,16 ಮತ್ತು 17 ಈ ಮೂರು ದಿನಗಳಲ್ಲಂತೂ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿತ್ತು ಮತ್ತು ಸರಕಾರವಿದೆ ಎನ್ನುವುದಕ್ಕೆ ಯಾವುದೇ ಕುರುಹುಗಳಿರಲಿಲ್ಲ. ತನ್ನನ್ನು ನಿಂದಿಸಲಾಗಿತ್ತು ಮತ್ತು ತನಗೆ ಬೆದರಿಕೆಯೊಡ್ಡಲಾಗಿತ್ತು. ತನ್ನ ಮೇಲೆ ದೈಹಿಕ ಹಲ್ಲೆಗೂ ಪ್ರಯತ್ನ ನಡೆದಿತ್ತು ಮತ್ತು ತನ್ನನ್ನು ದಿಗ್ಬಂಧನಕ್ಕೊಳಪಡಿಸಲು ಸಚಿವರು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ತನ್ನ ಜಾಗೃತ ಸಿಬ್ಬಂದಿ ತನ್ನನ್ನು ರಕ್ಷಿಸಿದ್ದರು ಎಂದೂ ರಾಜಖೋವಾ ವರದಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X