Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದಯವಾಣಿ ವಿರುದ್ಧ 1 ಕೋಟಿ ರೂ. ಮಾನನಷ್ಟ:...

ಉದಯವಾಣಿ ವಿರುದ್ಧ 1 ಕೋಟಿ ರೂ. ಮಾನನಷ್ಟ: ಇಬ್ರಾಹೀಂ ಮುಸ್ಲಿಯಾರ್

ವಾರ್ತಾಭಾರತಿವಾರ್ತಾಭಾರತಿ28 Jan 2016 11:55 PM IST
share
ಉದಯವಾಣಿ ವಿರುದ್ಧ 1 ಕೋಟಿ ರೂ. ಮಾನನಷ್ಟ: ಇಬ್ರಾಹೀಂ ಮುಸ್ಲಿಯಾರ್

ಸಕಲೇಶಪುರ, ಜ.28: ವಾರ್ತಾಭಾರತಿಗೆ ಧನ್ಯವಾದ. ನಾನು ರಿಯಾದ್‌ನಲ್ಲಿ ಉದ್ಯೋಗ ಮಾಡುತ್ತಾ ನೆಮ್ಮದಿಯಾಗಿದ್ದೇನೆ ಎಂದು ಉದಯವಾಣಿ ಪತ್ರಿಕೆಯಲ್ಲಿ ಭಯೋತ್ಪಾದಕ ಎಂದು ಚಿತ್ರಿಸಲಾಗುತ್ತಿರುವ ನೌಫಲ್ ತಿಳಿಸಿದರು.

 ಗುರುವಾರ ದೂರವಾಣಿಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ನೌಫಲ್, ನನಗೆ ಉದ್ಯೋಗ ಸಿಕ್ಕಿದೆ, 5 ವರ್ಷಗಳ ಒಪ್ಪಂದವಾಗಿದೆ. ಇಲ್ಲಿಯ ಸರಕಾರ ಗುರುತಿನ ಚೀಟಿಯೂ ನೀಡಿದೆ ಎಂದರು. ಉದಯವಾಣಿ ಸುಳ್ಳು ವರದಿಯಿಂದ ನನಗೆ ಭಾರೀ ಬೇಸರವಾಗಿತ್ತು. ಜೀವನದ ಮೇಲೆ ಜಿಗುಪ್ಸೆ ಉಂಟಾಗಿತ್ತು. ವಾರ್ತಾಭಾರತಿ ವರದಿ ಓದಿದ ನಂತರ ಪತ್ರಿಕೆಗಳ ಮೇಲೆ ವಿಶ್ವಾಸವಿರಿಸುವಂತಾಗಿದೆ ಎಂದು ಅವರು ಹೇಳಿದರು.
ಸುಳ್ಳು ವರದಿಗಳಿಂದ ನನ್ನ ಕುಟುಂಬ ತತ್ತರಿಸಿ ಹೋಗಿದೆ. ದೂರವಾಣಿಯಲ್ಲಿ ನನ್ನ ಪೋಷಕರು ನನಗೆ ಧೈರ್ಯವಾಗಿರು ಅನ್ನುತ್ತಾರೆ. ಆದರೆ ಅವರೇ ಅಳುತ್ತಿರುತ್ತಾರೆ. ನನ್ನ ಕುಟುಂಬ ಮಾನಸಿಕ ಹಿಂಸೆ ಅನುಭವಿಸುತ್ತಿದೆ. ಯಾವ ತಪ್ಪೂ ಮಾಡದ ನಮಗೆ ಈ ರೀತಿಯ ಕಿರುಕುಳ ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.
ನನ್ನ ತಂದೆ ಇಬ್ರಾಹೀಂ ಕೆ. ಮುಸ್ಲಿಯಾರ್ ಉತ್ತಮ ವಾಗ್ಮಿಯಾಗಿ ಎಲ್ಲರಿಗೂ ಚಿರ ಪರಿಚಿತರು. ತಂದೆಯವರ ಭಾಷಣವನ್ನು ಸಾವಿರಾರು ಜನರು ಕೇಳುತ್ತಾರೆ. ಅವರ ಸೌಹಾರ್ದದ ಮಾತುಗಳು ನನಗೆ ಇಷ್ಟವಾಗುತ್ತದೆ. ಅವರು ಅರಸೀಕೆರೆಯ ಕೊಡಿ ಮಠದ ಸ್ವಾಮೀಜಿಗೆ ಆಪ್ತರು. ನಾನು ಮತ್ತು ನನ್ನ ಕುಟುಂಬ ದೇಶಕ್ಕೆ ಮಾರಕವಾಗುವ ವಿಷಯವನ್ನು ಕನಸು ಮನಸಲ್ಲೂ ಚಿಂತಿಸುವುದಿಲ್ಲ. ನನ್ನ ಫೋನ್ ನಂಬರನ್ನು ನನ್ನ ಮನೆಯವರಿಂದ ಪಡೆದು ನನಗೆ ಯಾರು ಬೇಕಾದರೂ ಫೋನ್ ಮಾಡಬಹುದು. ನಾನು ಸಂಪರ್ಕದಲ್ಲಿರುತ್ತೇನೆ ಎಂದು ನೌಫಲ್ ಹೇಳಿದರು.
 
 ಕಣ್ಣೀರಿಟ್ಟ ನೌಫಲ್ ತಂದೆ: ವಾರ್ತಾಭಾರತಿಯಲ್ಲಿನ ವರದಿ ಓದಿ ಮನಸ್ಸಿಗೆ ಸಮಾಧಾನ ವಾಯಿತು ಎಂದು ಹೇಳುತ್ತಲೇ ಬಿಕ್ಕಳಿಸಿದ ನೌಫಲ್ ತಂದೆ ಇಬ್ರಾಹೀಂ ಕೆ. ಮುಸ್ಲಿಯಾರ್, ನಾನು ರಾತ್ರಿಯಿಡೀ ನಿದ್ದೆ ಮಾಡಲಿಲ್ಲ. ವಾರ್ತಾಭಾರತಿಯಲ್ಲಿ ಯಾವ ರೀತಿ ಸುದ್ದಿ ಇರುತ್ತದೋ ಎಂಬ ಆತಂಕವಿತ್ತು. ರಾತ್ರಿ 2 ಗಂಟೆಯ ಸುಮಾರಿಗೆ ನನ್ನ ಮೊಬೈಲ್‌ನಲ್ಲಿ ‘ವಾರ್ತಾಭಾರತಿ’ಯಲ್ಲಿನ ಸುದ್ದಿ ನೋಡಿ ನೆಮ್ಮದಿಯಾಯಿತು ಎಂದರು. ನೌಫಲ್ ಸಂಬಂಧಿ ಹೇಳಿಕೆ: ಕಳೆದ 27 ವರ್ಷಗಳಿಂದ ಕುಟುಂಬ ಸಮೇತರಾಗಿ ರಿಯಾದ್‌ನಲ್ಲಿ 2 ಸೂಪರ್ ಮಾರ್ಕೆಟ್ ನಡೆಸುತ್ತಿರುವ ನೌಫಲ್‌ರ ದೊಡ್ಡಮ್ಮನ ಮಗ ಕೆ.ಪಿ ಅಬ್ದುಲ್ ಅಝೀಝ್ ದೂರವಾಣಿ ಮುಖಾಂತರ ಪತ್ರಿಕೆಯೊಂದಿಗೆ ಮಾತನಾಡಿ, ನೌಫಲ್ ನಮ್ಮ ಕಣ್ಣಮುಂದೆ ನಮ್ಮ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಉದಯವಾಣಿ ಪತ್ರಿಕೆ ಈ ರೀತಿಯಾಗಿ ಸುಳ್ಳು ಬರೆಯುತ್ತಿರುವುದು ಏಕೆ ಎಂದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದರು.
 ಮಾನನಷ್ಟ ಮೊಕದ್ದಮೆ:  ಉದಯವಾಣಿ ಪತ್ರಿಕೆಯ ವಿರುದ್ಧ 1 ಕೋಟಿ ರೂ. ಮಾನನಷ್ಟ ಹಾಗೂ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಉನ್ನತ ಪೋಲಿಸ್ ಅಧಿಕಾರಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ದೂರು ಸಲ್ಲಿಸುತ್ತೇನೆ ಎಂದು ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X