Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ:ವಿದ್ಯುತ್ ಅವ್ಯವಸ್ಥೆಗೆ ಸರಕಾರವೇ...

ಸುಳ್ಯ:ವಿದ್ಯುತ್ ಅವ್ಯವಸ್ಥೆಗೆ ಸರಕಾರವೇ ಹೊಣೆ : ಅಂಗಾರ

ವಾರ್ತಾಭಾರತಿವಾರ್ತಾಭಾರತಿ30 Jan 2016 6:38 PM IST
share

ಸುಳ್ಯ: ಸುಳ್ಯದ ವಿದ್ಯುತ್ ಅವ್ಯವಸ್ಥೆ ಮತ್ತು 110 ಕೆವಿ ಸಬ್‌ಸ್ಟೇಶನ್ ಅನುಷ್ಠಾನಗೊಳ್ಳದಿರುವುದಕ್ಕೆ ರಾಜ್ಯ ಸರಕಾರವೇ ಕಾರಣ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆಯನ್ನು ಮುಂದಿಟ್ಟು ಕಾಂಗ್ರೆಸ್ ರಾಜಕಾರಣ ಮಾಡಲು ಹೊರಟಿದೆ. ಸರಕಾರ ಮೆಸ್ಕಾಂಗೆ ಸೂಕ್ತ ಸಲಕರಣೆಗಳನ್ನು ಸರಬರಾಜು ಮಾಡುತ್ತಿಲ್ಲ. 2-3 ತಿಂಗಳ ಹಿಂದೆ ಹಾಕಬೇಕಿದ್ದ ಬ್ರೇಕರ್‌ಗಳನ್ನು ಇತ್ತೀಚೆಗಷ್ಟೇ ಅಳವಡಿಸಿದ್ದಾರೆ. 110 ಕೆವಿ ಸಮಸ್ಯೆಯ ಬಗ್ಗೆ ನಾನು ಸರಕಾರದ ಗಮನ ಸೆಳೆದಿದ್ದೇನೆ. ಅರಣ್ಯ ಇಲಾಖೆಯ ಒಪ್ಪಿಗೆ ಸಿಗಲಷ್ಟೇ ಬಾಕಿ. ಇದನ್ನು ಮಾಡಿಸಬೇಕಾದವರು ಅರಣ್ಯ ಸಚಿವರು. ಒಬ್ಬ ಶಾಸಕನಾಗಿ ಈ ಕುರಿತಂತೆ ನಾನು ಏನೇನೆಲ್ಲ ಮಾಡಬೇಕೋ ಅದೆಲ್ಲವನ್ನು ಮಾಡಿದ್ದೇನೆ. ಆದರೆ ಕಾಂಗ್ರೆಸ್ಸಿಗರು ದುರುದ್ದೇಶದಿಂದ ಆರೋಪ ಮಾಡುತ್ತಿದ್ದಾರೆ ಎಂದ ಅಂಗಾರ 1962ರಲ್ಲಿ ಸುಳ್ಯದಲ್ಲಿ 33ಕೆವಿ ಸಬ್‌ಸ್ಟೇಶನ್ ಅನುಷ್ಠಾನಗೊಂಡಿತ್ತು. ಆ ಬಳಿಕ ಆದ ಬೆಳ್ಳಾರೆ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಸಬ್‌ಸ್ಟೇಶನ್‌ಗಳು ನಾನು ಶಾಸಕನಾದ ಬಳಿಕವೇ ಆಗಿವೆ ಎಂದರು. ಕುಮ್ಕಿ ಹೋರಾಟದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಲು ಹೊರಟಿದೆ.

ಬಿಜೆಪಿ ಸರಕಾರ ಇರುವಾಗ ಈ ಕುರಿತಂತೆ ಕರಡು ತಯಾರಿಸಿ ರಾಜ್ಯಪಾಲರಿಗೆ ಸಲ್ಲಿಸಿದ್ದರೂ ಅವರು ಅಂಗೀಕಾರ ಮಾಡಿರಲಿಲ್ಲ. ಈಗ ಸಚಿವರು ಕುಮ್ಕಿ ಹಕ್ಕು ನೀಡುತ್ತೇವೆ ಎಂದು ಹೇಳುತ್ತಿರುವುದು ಸರಿಯಲ್ಲ. ಹಾಗಾದರೆ ಎರಡೂವರೆ ವರ್ಷದಿಂದ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದ ಅವರು, ರಾಜೀನಾಮೆ ನೀಡಲು ನನ್ನನ್ನು ಕಾಂಗ್ರೆಸ್ಸಿಗರು ಗೆಲ್ಲಿಸಿದ್ದಲ್ಲ. ಜನರು ಗೆಲ್ಲಿಸಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.

ಜಿ.ಪಂ. ಸದಸ್ಯ ನವೀನ್‌ಕುಮಾರ್ ಮೇನಾಲ, ನ.ಪಂ. ಅಧ್ಯಕ್ಷ ಪ್ರಕಾಶ್ ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಚಂದ್ರಾ ಕೋಲ್ಚಾರ್, ಶೈಲೇಶ್ ಅಂಬೆಕಲ್ಲು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X