Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು : ಶೈಕ್ಷಣಿಕ ಸಂಸ್ಥೆಗಳಲ್ಲಿ...

ಬೆಂಗಳೂರು : ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾತಿ-ಧರ್ಮಾಧಾರಿತ ವಿಭಜನೆ ಅನಗತ್ಯ: ಮುಖ್ತಾರ್‌ ಅಬ್ಬಾಸ್‌ನಖ್ವಿ

ವಾರ್ತಾಭಾರತಿವಾರ್ತಾಭಾರತಿ30 Jan 2016 7:44 PM IST
share
ಬೆಂಗಳೂರು : ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾತಿ-ಧರ್ಮಾಧಾರಿತ ವಿಭಜನೆ ಅನಗತ್ಯ: ಮುಖ್ತಾರ್‌ ಅಬ್ಬಾಸ್‌ನಖ್ವಿ

ಬೆಂಗಳೂರು, ಜ.30: ಶೈಕ್ಷಣಿಕ ಸಂಸ್ಥೆಗಳ ಆವರಣಗಳು ದೇಶದ ಅಭಿವೃದ್ಧಿ, ರಾಷ್ಟ್ರ ನಿರ್ಮಾಣಕ್ಕೆ ಬಳಕೆಯಾಗಬೇಕೆ ಹೊರತು, ರಾಜಕೀಯ ಕಾರಣಗಳಿಗಾಗಿ ಜಾತಿ, ಧರ್ಮದ ಆಧಾರದಲ್ಲಿ ವಿಭಜನೆಯಾಗಬಾರದು ಎಂದು ಕೇಂದ್ರ ಸಂಸದೀಯ ಹಾಗೂ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.

ಶನಿವಾರ ಆನೇಕಲ್ ತಾಲೂಕಿನ ಗುಳಿಮಂಗಲ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಸಮಸ್ಯೆಗಳಿರುವಂತೆ ನಮ್ಮ ದೇಶವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಣ ಸಂಸ್ಥೆಗಳು ನಮ್ಮ ಮುಂದಿರುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯುವಕರನ್ನು ಸನ್ನದ್ಧಗೊಳಿಸಬೇಕು ಎಂದರು.

ಭಯೋತ್ಪಾದನೆ ಮೂಲಕ ದೇಶದಲ್ಲಿನ ಶಾಂತಿ, ಏಕತೆ, ಸಹೋದರತೆಗೆ ಧಕ್ಕೆಯುಂಟು ಮಾಡುವ ಕೆಲಸವನ್ನು ಮಾಡುತ್ತಿರುವ ಹೇಡಿಗಳು, ದುಷ್ಟಶಕ್ತಿಗಳ ವಿರುದ್ಧ ನಾವು ಸಂಘಟಿತ ಹೋರಾಟ ಮಾಡಬೇಕು. ನಮ್ಮ ದೇಶದ ಐಕ್ಯತೆ ಹಾಗೂ ಸಮಗ್ರತೆಯನ್ನು ಮುರಿಯುವ ಅವರ ಪ್ರಯತ್ನ ಎಂದಿಗೂ ಫಲಿಸುವುದಿಲ್ಲ ಎಂದು ಮುಖ್ತಾರ್ ಅಬ್ಬಸ್ ನಖ್ವಿ ಹೇಳಿದರು.

ರಾಷ್ಟ್ರವಿರೋಧಿಗಳ ವಿರುದ್ಧ ಜಿಹಾದ್ : ಬಹುಸಂಖ್ಯಾತರು, ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ದುಡಿಯುತ್ತಿದ್ದಾರೆ. ಆದರೆ ಕೆಲವರು ಧರ್ಮವನ್ನು ರಕ್ಷಾ ಕವಚವನ್ನಾಗಿ ಮಾಡಿಕೊಂಡು ದೇಶದ ಅಭಿವೃದ್ಧಿಗೆ ಅಡ್ಡಿಯುಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಚಳವಳಿ ಅಥವಾ ಜಿಹಾದ್ (ಧರ್ಮಯುದ್ಧ) ಮಾಡಬೇಕು ಎಂದು ಅವರು ಕರೆ ನೀಡಿದರು.

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿರುವ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಯಾವುದೇ ಧಕ್ಕೆಯಿಲ್ಲ. ದೇಶದಲ್ಲಿ ಅಲ್ಪಸಂಖ್ಯಾತರ 22 ಸಾವಿರ ಶಿಕ್ಷಣ ಸಂಸ್ಥೆಗಳು ನೋಂದಣಿಯಾಗಿವೆ. ಇದಕ್ಕಿಂತ ಏಳು ಪಟ್ಟು ಹೆಚ್ಚು ಸಂಸ್ಥೆಗಳು ಇನ್ನು ನೋಂದಣಿಯಾಗಿಲ್ಲ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದರು. ಎಲ್ಲ ಶಿಕ್ಷಣ ಸಂಸ್ಥೆಗಳು ನೋಂದಣಿಯಾಗಿ ಕಾನೂನು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ, ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಎಂಬುದು ನಮ್ಮ ಆಶಯ. ಆದುದರಿಂದ, ಶಿಕ್ಷಣ ಸಂಸ್ಥೆಗಳ ನೋಂದಣಿಯ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

 ಅಲಿಘಡ್ ಮುಸ್ಲಿಮ್ ವಿಶ್ವವಿದ್ಯಾಲಯ ಹಾಗೂ ಜಾಮಿಯಾ ಮಿಲ್ಲಿಯಾ ಕೇಂದ್ರೀಯ ವಿವಿಗಳಾಗಿವೆ. ಇವುಗಳು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಯ ಸ್ಥಾನಮಾನ ಹೇಗೆ ಪಡೆಯಲು ಸಾಧ್ಯ ಎಂಬುದರ ಕುರಿತು ಗೊಂದಲ ಉಂಟಾಗಿದೆ. ಈ ಪ್ರಕರಣದ ಕುರಿತು ನ್ಯಾಯಾಲಯ ನಿರ್ಧಾರ ಕೈಗೊಳ್ಳುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X