Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕೋಮು ಶಕ್ತಿಗಳನ್ನು...

ಮಂಗಳೂರು : ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಕಾಂಗ್ರೆಸ್ ವಿಫಲ: ಎ.ಕೆ. ಸುಬ್ಬಯ್ಯ

ವಾರ್ತಾಭಾರತಿವಾರ್ತಾಭಾರತಿ30 Jan 2016 8:38 PM IST
share
ಮಂಗಳೂರು : ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಕಾಂಗ್ರೆಸ್ ವಿಫಲ: ಎ.ಕೆ. ಸುಬ್ಬಯ್ಯ

ಮಂಗಳೂರು, ಜ.30: ಕೋಮುಶಕ್ತಿಯನ್ನು ಹಿಮ್ಮೆಟ್ಟಿಸುವಲ್ಲಿ ಪ್ರಬಲ ರಾಜಕೀಯ ಪಕ್ಷವಾದ ಕಾಂಗ್ರೆಸ್ ವೈಫಲ್ಯ ಕಂಡಿರುವುದರಿಂದಲೇ ಇಂದು ಸಮಾಜದಲ್ಲಿ ಸಹಬಾಳ್ವೆಗೆ ತೊಂದರೆಯಾಗಿದೆ ಎಂದು ಹಿರಿಯ ವಿಚಾರವಾದಿ ಎ.ಕೆ. ಸುಬ್ಬಯ್ಯ ಅಭಿಪ್ರಾಯಿಸಿದ್ದಾರೆ. ಪುರಭವನದಲ್ಲಿ ಇಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ವತಿಯಿಂದ ಆಯೋಜಿಸಲಾದ ಸಹಬಾಳ್ವೆ ಸಾಗರ ರಾಷ್ಟ್ರೀಯ ಸಮಾವೇಸದ ರಾಣಿ ಅಬ್ಬಕ್ಕ ವೇದಿಕೆಯಲ್ಲಿ ರಾಜಕೀಯ ಪಕ್ಷಗಳ ಪಾತ್ರ ಕುರಿತಾದ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಗವದ್ಗೀತೆಯಲ್ಲಿ ಹೇಳಿದ ದೈವೀ ಗುಣ ಇರುವ ಮಹಾತ್ಮಾ ಗಾಂಧೀಜಿಯವರನ್ನು ಭಗವದ್ಗೀತೆಯ ರಾಕ್ಷಸಿ ಗುಣ ಇರುವ ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದ. ಅದೇ ರಾಕ್ಷಸಿ ಗುಣದವರು ಬಾಬರಿ ಮಸೀದಿಯನ್ನು ಧ್ವಂಸಗೈದರು. ಇದೀಗ ಅದೇ ರಾಕ್ಷಸಿ ಗುಣ ಇರುವವರು ಭಗದ್ಗೀತೆಯನ್ನು ಶಾಲೆಗಳಲ್ಲಿ ಪಠ್ಯವಾಗಿಸಬೇಕೆಂದು ಹಠ ಮಾಡುತ್ತಿದ್ದರೆ, ದೈವೀ ಗುಣವಿರುವ ಜಾತ್ಯತೀತ ನಿಲುವಿನವರು ಅದನ್ನು ಬೇಡ ಎನ್ನುತ್ತಿದ್ದಾರೆ ಎಂದವರು ಮಾರ್ಮಿಕವಾಗಿ ನುಡಿದರು. ಕೇರಳದಲ್ಲಿ ‘ಹೇಟ್ ಮುಸ್ಲಿಂ ಅಭಿಯಾನ’ದ ವೇಳೆ ಎಡಪಂಥೀಯರು ರಸ್ತೆಗಿಳಿದರು. ಹಾಗಾಗಿ ಅಲ್ಲಿ ಹಿಂದೂ ಮುಸ್ಲಿಂರ ನಡುವಿನ ಗಲಾಟೆ ಎಂಬುದು ಬಹಳ ಅಪರೂಪ. ಅಲ್ಲಿ ಏನಿದ್ದರೂ ಕಮ್ಯುನಿಸ್ಟರು ಮತ್ತು ಕೋಮುವಾದಿಗಳ ನಡುವಿನ ಸಂಘರ್ಷಗಳಾಗಿ ರೂಪುಗೊಳ್ಳುತ್ತಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಇಂತಹ ಸಮಾವೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸುವ ಮೂಲಕ ಕೋಮುಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಕಾರ್ಯತಂತ್ರ ರೂಪಿಸಬೇಕಾಗಿದೆ ಎಂದವರು ಹೇಳಿದರು.

ಕೋಮುಶಕ್ತಿಗಳಿಗೆ ರಾಜಾಶ್ರಯವಿಲ್ಲದೆ ಅದು ಅಪಾಯಕಾರಿಯಾಗುವುದಿಲ್ಲ. ರಾಜಾಶ್ರಯ ದೊರಕಿದಾಕ್ಷಣ ಅವು ಅಪಾಯಕಾರಿಯಾಗುತ್ತವೆ. ಮುಂದಿನ ಚುನಾವಣೆಯಲ್ಲಿ ರಾಷ್ಟ್ರ ಮತ್ತು ರಾಜ್ಯದಲ್ಲಿ ಕೋಮುಶಕ್ತಿಯನ್ನು ದೂರ ಉಳಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಬೇಕಾಗಿದೆೆ ಎಂದು ಅವರು ಹೇಳಿದರು. ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಹಿರಿಯ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಕೋಮುಸೌಹಾರ್ದದ ಹೋರಾಟದಲ್ಲಿ ತಾರ್ಕಿಕ ಯಶಸ್ಸು ಕಾಣಬೇಕಾದರೆ, ಜಾತೀಯತೆ, ಅಸ್ಪಶ್ಯತೆ, ಲಿಂಗತಾರತಮ್ಯ, ಭ್ರಷ್ಟಾಚಾರ, ಬಂಡವಾಳಶಾಹಿ, ಉಳಿಗಮಾನದ ಹೋರಾಟವೂ ನಡೆಯಬೇಕಿದೆ ಎಂದು ಹೇಳಿದರು. ನಮ್ಮಾಳಗಿನ ಶತ್ರುವನ್ನು ಗುರುತಿಸುವಲ್ಲಿ ನಾವು ವಿಫಲವಾಗಿದ್ದೇವೆ.

ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆಗಳು ಸಂಭವಿಸಿದ ವೇಳೆ ಶೂದ್ರ ವರ್ಗದವರು ಜೈಲು ಪಾಲಾಗುತ್ತಾರೆ. ಧರ್ಮದ ಹೆಸರಿನಲ್ಲಿ ಶೂದ್ರ ವರ್ಗದ ದುರ್ಬಳಕೆ ಆಗುತ್ತಿರುವ ಬಗ್ಗೆ ಎಚ್ಚರಿಕೆ ಮೂಡಿಸುವಲ್ಲಿ ನಾವು ವಿಫಲರಾಗಿದ್ದೇವೆ ಎಂದವರು ವಿಷಾದಿಸಿದರು. ರೋಹಿತ್ ವೇಮುಲಾ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಮೀಸಲಾತಿಯನ್ನು ಕೈಬಿಟ್ಟಿದ್ದರೂ ಜಾತಿ ಅವನ ಬೆನ್ನು ಬಿಡಲಿಲ್ಲ. ಆ ಕಾರಣದಿಂದಾಗಿಯೇ ಆತ ಆತ್ಮಹತ್ಯೆಗೆ ಶರಣಾದ. ಜಾತೀಯತೆ ವ್ಯವಸ್ಥೆಯನ್ನು ಪ್ರಶ್ನಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಶೋಷಕರ ಬಣ್ಣ ಬಯಲು ಮಾಡಬೇಕು. ಮಂಗಳೂರಿನಲ್ಲಿ ಹಿಂದೂ ಕೋಮುವಾದಕ್ಕೆ ಪ್ರಬಲ ಪೈಪೋಟಿ ನೀಡುವಲ್ಲಿ ಪಿಎಫ್‌ಐ ಎಸ್‌ಡಿಪಿಐ ಸಂಘಟನೆಗಳಿಂದ ಅದೇ ರೀತಿಯಲ್ಲಿ ಮುಸ್ಲಿ ಕೋಮುವಾದವನ್ನು ಹರಡಲಾಗುತ್ತಿದೆ. ಈ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದವರು ಹೇಳಿದರು.

ಗೋಷ್ಠಿಯ ಮುಕ್ತಾಯ ಹಂತದಲ್ಲಿ ಆಗಮಿಸಿದ ಆರೋಗ್ಯ ಸಚಿವ ಯು.ಟಿ.ಖಾದರ್, ಜಾತ್ಯತೀತ ಎಂಬುದು ಉಸಿರಿನಂತೆ, ಭಾರತ ದೇಶ ಬದುಕಲು ಜಾತ್ಯತೀತ ವ್ಯವಸ್ಥೆ ಅತೀ ಅಗತ್ಯ. ದೇಶಪ್ರೇಮ ಇರುವವರು ಕೋಮುವಾದತ್ವಕ್ಕೆ ಅವಕಾಶ ನೀಡಬಾರದು ಎಂದರು. ಸಿಪಿಐನ ಪಿ.ವಿ. ಲೋಕೇಶ್, ಸಿಪಿಎಂನ ಜಿ.ಎನ್. ನಾಗರಾಜ್, ಸಮಾಜ ಪರಿವರ್ತನಾ ಚಳವಳಿಯ ಡೀಕಯ್ಯ, ಮಹಿಳಾ ಪರ ಸಂಘಟನೆಯ ಪರವಾಗಿ ಜ್ಯೋತಿ ಚೇಳ್ಯಾರು, ಸಮಾನತೆಗಾಗಿ ಜನಾಂದೋಲನ ಸಿರಿಮನೆ ನಾಗರಾಜ್, ಕರ್ನಾಟಕ ಮಿಷನ್ ನೆಟ್‌ವರ್ಕ್ ವಾಲ್ಟರ್ ಮಾಬೆನ್, ಜಮಾಅತೆ ಇಸ್ಲಾಮಿ ಹಿಂದ್‌ನ ಸಯ್ಯಿದ್ ಇಸ್ಮಾಯಿಲ್, ಕರ್ನಾಟಕ ರಾಜ್ಯ ರೈತ ಸಂಘ ಜೆ.ಎಂ. ವೀರಸಂಗಯ್ಯ, ಸ್ವರಾಜ್ ಅಭಿಯಾನದ ಡೊಡ್ಡಿಪಾಳ್ಯ ನರಸಿಂಹಮೂರ್ತಿ ಮೊದಲಾದವರು ಮಾತನಾಡಿ ಅನಿಸಿಕೆ ವ್ಯಕ್ತಪಡಿಸಿದರು. ಕರ್ನಾಟಕ ಕೋಮ ಸೌಹಾರ್ದ ವೇದಿಕೆಯ ಬೆಂಗಳೂರು ಅಧಯಕ್ಷ ಅಮ್ಜದ್ ಪಾಷ ಸ್ವಾಗತಿಸಿದರು. ಸಹಮದದ ಶಶಿಧರ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಇಸ್ಮತ್ ಪಜೀರ್ ಪರಿಚಯ ನೀಡಿದರು. 

ಗುಜರಾತ್‌ನಲ್ಲಿ ಕಾಂಗ್ರೆಸ್ ವೈಫಲ್ಯದಿಂದ ಸಹಬಾಳ್ವೆ ನಿರ್ನಾಮ

ಕೋಮುವಾದದ ವಿರುದ್ಧ ಹೋರಾಟವೆಂದರೆ ಅದು ಮನುಧರ್ಮವೆಂಬ ಅಧರ್ಮ ಶಾಸ್ತ್ರ ಹಾಗೂ ಭಾರತದ ಜಾತ್ಯತೀತ ರಾಜ್ಯಾಂಗದ ನಡುವಿನ ನೇರ ಸಂಘರ್ಷವಾಗಿದೆ. ಕೋಮುವಾದದ ವಿರುದ್ಧದ ಜಾತ್ಯತೀತ ರಾಜಕೀಯ ಪಕ್ಷಗಳು ಹೋರಾಡಬೇಕು. ಮನುಶಕ್ತಿಗಳನ್ನು ಹಮ್ಮೆಟ್ಟಿಸಿ, ಮನುಧರ್ಮಶಾಸ್ತ್ರವನ್ನು ಅಳಿಸಿ ಸಹಬಾಳ್ವೆ ನಿರ್ಮಾಣಕ್ಕೆ ರಾಜಕೀಯ ಪಕ್ಷಗಲು ಮುಂದಾಗಬೇಕು. ಆದರೆ ಗುಜರಾತ್ ಹತ್ಯಾಕಾಂಡದ ವೇಳೆ ಪ್ರಬಲ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಕೋಮುವಾದಿಗಳ ವಿರುದ್ಧ ಸೆಟೆದು ನಿಂತಿದ್ದರೆ ಕೋಮುವಾದಿ ಶಕ್ತಿಗಳು ಪ್ರಬಲವಾಗಲು ಸಾಧ್ಯವಾಗುತ್ತಿರಲಿಲ್ಲ. ಗುಜರಾತ್‌ನಲ್ಲಿ ಕಾಂಗ್ರೆಸ್‌ನ ವೈಫಲ್ಯ ಸಹಬಾಳ್ವೆ ಸಮಾಜ ನಿರ್ನಾಮಕ್ಕೆ ಕಾರಣವಾಯಿತು ಎಂದು ಎ.ಕೆ. ಸುಬ್ಬಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಪಕ್ಷವನ್ನು ತಮ್ಮ ತೀಕ್ಷ್ಣವಾದ ಮಾತುಗಳಿಂದ ತರಾಟೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X