Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರೆ : ಸಚಿವರಿಗೆ ಸೆಡ್ಡು ಹೊಡೆದ...

ಪಡುಬಿದ್ರೆ : ಸಚಿವರಿಗೆ ಸೆಡ್ಡು ಹೊಡೆದ ಕರಾವಳಿಯ ಕುವರಿ!

ವಾರ್ತಾಭಾರತಿವಾರ್ತಾಭಾರತಿ30 Jan 2016 10:11 PM IST
share
ಪಡುಬಿದ್ರೆ : ಸಚಿವರಿಗೆ ಸೆಡ್ಡು ಹೊಡೆದ ಕರಾವಳಿಯ ಕುವರಿ!

ಪಡುಬಿದ್ರೆ, ಜ.30: ಡಿವೈಎಸ್ಪಿ ಅನುಪಮಾ ಶೆಣೈ ಎಂದಾಗ ಇದೀಗ ಎಲ್ಲರಿಗೂ ಚಿರಪರಿಚಿತ. ಈಕೆ ಇತ್ತೀಚೆಗಷ್ಟೆ ಕೂಡ್ಲಿಗಿ ಶಾಸಕ, ಕಾರ್ಮಿಕ ಮಂತ್ರಿಯಾಗಿರುವ ಪರಮೇಶ್ವರ ನಾಯ್ಕಿ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಮೂಲಕ ರಾಜ್ಯದಲ್ಲಿ ಸುದ್ದಿಮಾಡಿದ ಈಕೆ ಮೂಲತಃ ಉಡುಪಿ ಜಿಲ್ಲೆ ಪಡುಬಿದ್ರೆ ಸಮೀಪದ ಉಚ್ಚಿಲದ ಪಣಿಯೂರಿನವರು. ಮಗಳು ಡಿವೈಎಸ್‌ಪಿ ಆಗಿದ್ದರೂ ತಂದೆ ಮಾತ್ರ ಎಂದಿನಂತೆ ಸಣ್ಣದೊಂದು ಕ್ಯಾಂಟೀನ್ ನಡೆಸುತ್ತಾ ಜೀವನ ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲೆಯ ಬಡಾ ಗ್ರಾಮದ ಉಚ್ಚಿಲ ಜನಪ್ರಿಯ ಮಿಲ್ ಸಮೀಪ ನಿವಾಸಿ ನಳಿನಿ ಮತ್ತು ರಾಧಾಕೃಷ್ಣ ಶೆಣೈ ದಂಪತಿಗೆ ಮೂವರು ಮಕ್ಕಳು. ಹಿರಿಯ ಮಗಳೇ ಅನುಪಮಾ ಶೆಣೈ. ಇನ್ನಿಬ್ಬರು ಸಹೋದರರು. ಒಬ್ಬ ಅಚ್ಯುತ್ ಶೆಣೈ ಇನ್ನೋರ್ವ ಅರವಿಂದ ಶೆಣೈ. ಉಚ್ಚಿಲ ಪೇಟೆಯಲ್ಲಿ 40 ವರ್ಷಗಳಿಂದಲೂ ಸಣ್ಣದೊಂದು ಚಹಾ ಕ್ಯಾಂಟೀನ್ ನಡೆಸಿ ಮೂವರು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ರಾಧಾಕೃಷ್ಣ ಶೆಣೈ ನೀಡಿದ್ದಾರೆ. ಅನುಪಮಾ ಶೆಣೈಯವರು ಪ್ರಾಥಮಿಕ ಶಿಕ್ಷಣವನ್ನು ಕುಲಶೇಖರದ ಸೈಂಟ್ ಜೋಸೆಫ್‌ನಲ್ಲಿ ಮುಗಿಸಿ, ಮಂಗಳೂರಿನ ಸೈಂಟ್ ಅಲೋಶಿಯಸ್‌ನಲ್ಲಿ ಎಮ್‌ಎಸ್‌ಡಬ್ಲ್ಯೂ ಮಾಡಿದವರು. ಅಲೋಶಿಯಸ್ ಕಾಲೇಜಿನ ಈಗಿನ ಪ್ರಾಂಶುಪಾಲರ ಅಚ್ಚುಮೆಚ್ಚಿನ ವಿದ್ಯಾರ್ಥಿನಿ.

 ಸಣ್ಣಂದಿನಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದರು. ತನ್ನ ಕನಸನ್ನು ನನಸು ಮಾಡಬೇಕು ಎಂಬ ಹಂಬಲದಿಂದ ಸ್ನಾತಕೋತ್ತರ ಪದವಿಯ ಬಳಿಕ ದೆಹಲಿಗೆ ತೆರಳಿ ಐಪಿಎಸ್‌ಗಾಗಿ ತರಬೇತಿ ಪಡೆದರು. ಐಪಿಎಸ್ ಹಾಗೂ ಕೆಎಎಸ್ ಪರೀಕ್ಷೆಗಳನ್ನು ಬರೆದರೂ ಐಪಿಎಸ್‌ನಲ್ಲಿ ಸಫಲರಾಗದೇ ಕರ್ನಾಟಕ ಪೊಲೀಸ್ ಸರ್ವೀಸ್‌ಗೆ ಡಿವೈಎಸ್ಪಿಯಾಗಿ ನೇರ ನೇಮಕಾತಿಯನ್ನು ಪಡೆದಿದ್ದರು. ಪ್ರೊಬೆಶನರಿ ಹಂತವನ್ನು ಮಡಿಕೇರಿಯಲ್ಲಿ ಮುಗಿಸಿದ ಇವರು ಡಿವೈಎಸ್ಪಿಯಾಗಿ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿದರು. ಇದೀಗ ಅವರ ಸೇವೆಯನ್ನು ಕಂಡ ಜನರು ದಕ್ಷತೆ ಮತ್ತು ಪ್ರಾಮಾಣಿಕತೆ ಹಾಗೂ ಧೈರ್ಯಶಾಲಿತನವಿರುವ ಅತ್ಯುತ್ತಮ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಆಕೆ ಉತ್ತಮ ಸ್ವಭಾವದವಳು. ಯಾವುದೇ ಲಂಚ, ಭ್ರಷ್ಟಾಚಾರಗಳಿಗೆ ತಲೆಬಾಗುವವಳಲ್ಲ. ಅನ್ಯಾಯವಾದರೆ ನ್ಯಾಯದ ಪರ ಹೋರಾಡುವವಳು. ಆದರೆ ಮೊನ್ನೆ ತಾನೇ ಸಚಿವರ ದುರ್ವರ್ತನೆ ಬೇಸರ ತಂದಿದೆ. ಈ ರೀತಿ ಓರ್ವ ದಕ್ಷ ಅಧಿಕಾರಿಯೊಂದಿಗೆ ಸಚಿವರ ಈ ವರ್ತನೆ ಸರಿಯಲ್ಲ.  ಅಬ್ದುಲ್ಲಾ, ಸ್ಥಳೀಯ ವ್ಯಕ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X