Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಡೆಯುತ್ತಿರುವ ಸಮಾಜವನ್ನು ಗಾಂಧಿ ಚಿಂತನೆ...

ಒಡೆಯುತ್ತಿರುವ ಸಮಾಜವನ್ನು ಗಾಂಧಿ ಚಿಂತನೆ ಬೆಸೆಯಲಿ: ಪ್ರೊ.ಕಲ್ಗುಡಿ

ವಾರ್ತಾಭಾರತಿವಾರ್ತಾಭಾರತಿ30 Jan 2016 11:38 PM IST
share
ಒಡೆಯುತ್ತಿರುವ ಸಮಾಜವನ್ನು ಗಾಂಧಿ ಚಿಂತನೆ ಬೆಸೆಯಲಿ: ಪ್ರೊ.ಕಲ್ಗುಡಿ

ಬೆಂ.ವಿವಿ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಸರ್ವೋದಯ ದಿನಾಚರಣೆ
ಬೆಂಗಳೂರು,ಜ.30: ದುರ್ಬಲವೆಂಬಂತೆ ಕಾಣುವ ಅಹಿಂಸೆಯ ತತ್ವದ ಮೂಲಕ ಗಾಂಧೀಜಿಯವರು ವಸಾಹತು ಶಾಹಿಯ ಪ್ರಬಲ ಶಕ್ತಿಯನ್ನು ಮಣಿಸಿದರು. ಗಾಂಧಿ ನಮ್ಮಿಳಗೆ ನಿರಂತರ ವಾಗಿ ರೂಪುಗೊಳ್ಳಬೇಕಾದ ಆಧ್ಯಾತ್ಮಿಕ ಶಕ್ತಿಯಾಗಿದ್ದಾರೆ. ಇಂದುಒಡೆದು ಹೋಗುತ್ತಿರುವ ಸಮಾಜವನ್ನು ಬೆಸೆಯಬಲ್ಲ ಶಕ್ತಿ ಗಾಂಧಿ ಚಿಂತನೆಗಳಿಗಿದೆ. ಅವುಗಳನ್ನು ಬಳಸಿ ಸಮುದಾಯಗಳನ್ನು ಒಳಗೊಳ್ಳುವ ಕೆಲಸವನ್ನು ನಾವು ಇಂದು ಮಾಡಬೇಕಾಗಿದೆ ಎಂದು ಚಿಂತಕ ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು.
ಬೆಂಗಳೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರ ಏರ್ಪಡಿಸಿದ್ದ ಸರ್ವೋದಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಸತ್ಯವನ್ನು ನೋಡಬೇಕಾದ ಹೊಸ ರೀತಿಯನ್ನು ಪಶ್ಚಿಮಕ್ಕೂ, ಪೂರ್ವಕ್ಕೂ ಏಕಕಾಲಕ್ಕೆ ತೋರಿಸಿಕೊಟ್ಟರು ಎಂದರು.
ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಬಿ.ತಿಮ್ಮೇಗೌಡ ಅವರು ಮಾತನಾಡಿ, ಬ್ರಿಟಿಷರ ಗುಲಾಮಗಿರಿ ಯನ್ನು ಅನುಭವಿಸಿದ ಹಳೆಯ ತಲೆಮಾರಿಗೆ ಸ್ವಾತಂತ್ರ್ಯದ ಮಹತ್ವ ಹಾಗೂ ಅರ್ಥ ಚೆನ್ನಾಗಿ ತಿಳಿದಿತ್ತು. ಆದರೆ, ಗಾಂಧೀಜಿ ಯವರಂಥ ಹಿರಿಯರು ಮಾಡಿದ ತ್ಯಾಗ, ಬಲಿದಾನಗಳ ಫಲವನ್ನು ಅನುಭವಿಸುತ್ತಿರುವ ಈಚಿನ ತಲೆಮಾರುಗಳು ಅದರ ಮಹತ್ವವನ್ನು ಸರಿಯಾಗಿ ಮನಗಂಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಗಾಂಧೀಜಿಯವರ ಹಲವು ಹೇಳಿಕೆಗಳನ್ನು ಈ ಕಾಲಕ್ಕೆ ತಕ್ಕಂತೆ ವ್ಯಾಖ್ಯಾನಿಸಿದ ಅವರುಗಾಂಧೀ ಚಿಂತನೆಗಳ ಆಧಾರದ ಮೇಲೆ ಜಾತ್ಯತೀತ, ಸಮಾಜವಾದಿ ರಾಷ್ಟ್ರವನ್ನು ಇಂದು ಕಟ್ಟಬೇಕಾಗಿದೆ ಎಂದರು.
ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ನಟ ರಾಜ್ ಹುಳಿಯಾರ್ ಮಾತನಾಡಿ, ಗಂಡು ಮತ್ತು ಹೆಣ್ಣು ಈ ಎರಡೂ ವ್ಯಕ್ತಿತ್ವಗಳನ್ನು ಬೆಸೆದು, ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ರೀತಿ ಯನ್ನು ಗಾಂಧಿ ತೋರಿಸಿದ್ದರು. ಒಂದು ರೀತಿಯಲ್ಲಿ ಸಾವನ್ನು ಮೊದಲೇ ನಿರೀಕ್ಷಿಸಿದ್ದ ಗಾಂಧೀಜಿ ನಾನು ಗೋರಿಯಿಂದಲೂ ಮಾತನಾಡುತ್ತಿರುತ್ತೇನೆ ಎಂದದ್ದು ಇಂದು ನಿಜವಾಗಿದೆ. ಗಾಂಧೀ ಚಿಂತನೆಯಿಂದ ಸಾಧಾರಣ ವ್ಯಕ್ತಿಗಳು, ನೂರಾರು ಸಮುದಾಯಗಳು ಸದಾ ಸ್ಫೂರ್ತಿ ಪಡೆಯುತ್ತಿವೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಗಾಂಧೀಜಿಯವರ ಬದುಕು, ಚಿಂತನೆ ಕುರಿತ ’ಗಾಂಧೀ ಕ್ವಿಝ್’ ಏರ್ಪಡಿಸಲಾಗಿತ್ತು. ಅರ್ಥ ಶಾಸ್ತ್ರಜ್ಞ ಪ್ರೊ.ಎಸ್.ಆರ್.ಕೇಶವ್ ಕ್ವಿಝ್ ಕಾರ್ಯಕ್ರಮ ನಿರ್ವ ಹಿಸಿದರು. ಸಂಭ್ರಮ್ ಕಾಲೇಜು (ಪ್ರಥಮ), ಶೇಷಾದ್ರಿಪುರಂ ಕಾಲೇಜು (ದ್ವಿತೀಯ), ಕನ್ನಡ ಅಧ್ಯಯನ ಕೇಂದ್ರ (ತೃತೀಯ)ದ ವಿದ್ಯಾರ್ಥಿಗಳು ಬಹುಮಾನ ಪಡೆದರು. ಕಾರ್ಯಕ್ರಮದಲ್ಲಿ ಪ್ರೊ. ಗೋಪಾಲಕೃಷ್ಣ , ಚಂದ್ರಶೇಖರ ಐಜೂರ್ ಉಪಸ್ಥಿತರಿದ್ದರು.

ಬ್ರಿಟಿಷರ ಗುಲಾಮಗಿರಿಯನ್ನು ಅನುಭವಿಸಿದ ಹಳೆಯ ತಲೆಮಾರಿಗೆ ಸ್ವಾತಂತ್ರ್ಯದ ಮಹತ್ವ ಹಾಗೂ ಅರ್ಥ ಚೆನ್ನಾಗಿ ತಿಳಿದಿತ್ತು. ಆದರೆ, ಗಾಂಧೀಜಿಯವರಂಥ ಹಿರಿಯರು ಮಾಡಿದ ತ್ಯಾಗ, ಬಲಿದಾನಗಳ ಫಲವನ್ನು ಅನುಭವಿಸುತ್ತಿರುವ ಈಚಿನ ತಲೆಮಾರುಗಳು ಅದರ ಮಹತ್ವವನ್ನು ಸರಿಯಾಗಿ ಮನಗಂಡಿಲ್ಲ
-ಪ್ರೊ.ಬಿ.ತಿಮ್ಮೇಗೌಡ, ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X