Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು : ಸೂಫಿ ಚಿಂತನೆಯಿಂದ...

ಬೆಂಗಳೂರು : ಸೂಫಿ ಚಿಂತನೆಯಿಂದ ಭಯೋತ್ಪಾದನಾ ಕೃತ್ಯಗಳಿಗೆ ತಡೆ - ಎ.ಪಿ. ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ31 Jan 2016 11:02 PM IST
share
ಬೆಂಗಳೂರು : ಸೂಫಿ ಚಿಂತನೆಯಿಂದ ಭಯೋತ್ಪಾದನಾ ಕೃತ್ಯಗಳಿಗೆ ತಡೆ - ಎ.ಪಿ. ಉಸ್ತಾದ್

ಸೂಫಿ ಚಿಂತನೆಯಿಂದ ಭಯೋತ್ಪಾದನಾ ಕೃತ್ಯಗಳಿಗೆ ತಡೆ

*ಕಾಂತಪುರಂ ಅಬೂಬಕ್ಕರ್ ಮುಸ್ಲಿಯಾರ್/ ಎ.ಪಿ. ಉಸ್ತಾದ್

ಬೆಂಗಳೂರು, ಜ.31: ಇಸ್ಲಾಂ ಭಯೋತ್ಪಾದನೆ, ಉಗ್ರವಾದವನ್ನು ವಿರೋಧಿಸುತ್ತಿದೆ. ಇಂತಹ ಚಿಂತನೆಗಳು ಇಸ್ಲಾಮಿನ ಹಾಗೂ ಪ್ರವಾದಿ ಸಂದೇಶಗಳಿಗೆ ವಿರುದ್ಧವಾಗಿದೆ. ಮುಸ್ಲಿಮ್ ಯುವಕರು ಭಯೋತ್ಪಾದನಾ ಚಿಂತನೆಗಳಿಂದ ದೂರವಿದ್ದು, ಸೂಫಿ ಚಿಂತನೆಯನ್ನು ಬೆಳೆಸಿಕೊಂಡು, ಅವರು ತೋರಿಸಿಕೊಟ್ಟ ಹಾದಿಯನ್ನು ಮುಂದುವರಿಸಬೇಕಾಗಿದೆ ಎಂದು ಅಖಿಲ ಭಾರತ ಸುನ್ನಿ ಉಲಮಾ ಒಕ್ಕೂಟದ ಅಧ್ಯಕ್ಷ ಕಾಂತಾಪುರಂ ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಬೆಂಗಳೂರಿನಲ್ಲಿ ರವಿವಾರ ನಡೆದ ಎಸ್ಸೆಸ್ಸೆಫ್ ಕ್ಯಾಂಪಸ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ದೇಶದ ಸ್ವಾತಂತ್ರ್ಯಕ್ಕಾಗಿ ಮೌಲಾನ ಮಹಮ್ಮದ್ ಅಲಿ ಜೌಹರ್, ಅಬುಲ್ ಕಲಾಂ ಆಝಾದ್ ರಂತಹ ಮುಸ್ಲಿಂ ನಾಯಕರು, ಉಲಮಾಗಳು ಹೋರಾಡಿದ್ದಾರೆ. ಆದುದರಿಂದ ಮುಸ್ಲಿಮರ ದೇಶಪ್ರೇಮವನ್ನು ಸಂಶಯಿಸುವುದು ಮೂರ್ಖತನ. ಮುಸ್ಲಿಮರ ದೇಶಪ್ರೇಮ ಯಾರ ಮುಂದೆಯೂ ತೋರಿಸಬೇಕಾದ ಅಗತ್ಯವಿಲ್ಲ. ಏಕದೇವ ವಿಶ್ವಾಸದೊಂದಿದೆ ಸೂಫಿ ಚಿಂತನೆಯನ್ನು ಬೆಳೆಸಿದ ಯಾರೂ ಉಗ್ರವಾದದೊಂದಿಗೆ ನಂಟು ಹೊಂದಲು ಸಾಧ್ಯವಿಲ್ಲವೆಂದು ಹೇಳಿದರು.

ಪ್ರಸಕ್ತ ಸನ್ನಿವೇಶದಲ್ಲಿ ದೇಶದಲ್ಲಿ ಭಯೋತ್ಪಾದನೆ, ಉಗ್ರವಾದ ಕೃತ್ಯಗಳ ಹೆಸರಿನಲ್ಲಿ ಹಲವಾರು ಅಮಾಯಕ ಮುಸ್ಲಿಂ ನಿರಪರಾಧಿ ಯುವಕರನ್ನು ಸಂಶಯದ ಆಧಾರದ ಮೇಲೆ ಬಂಧಿಸಲಾಗುತ್ತಿದೆ. ಅವರನ್ನು ವಿಚಾರಣಾಧೀನ ಕೈದಿಗಳಾಗಿ ಸೆರೆಮನೆಯಲ್ಲಿರಿಸುವಂತಹ ಪ್ರಕ್ರಿಯೆಗಳು ನಡೆಯುತ್ತಿದೆ. ಭಯೋತ್ಪಾದನೆ, ಉಗ್ರವಾದದ ಹೆಸರಿನಲ್ಲಿ ಬಂಧಿತರಾದ ಯುವಕರು ಅಪರಾಧಿಗಳಾಗಿದ್ದರೆ ಅವರನ್ನು ಕಠಿಣವಾಗಿ ಶಿಕ್ಷಿಸಬೇಕು. ಅವರು ನಿರಪರಾಧಿಗಳಾಗಿದ್ದರೆ ಅವರನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು ಎಂದು ಎಪಿ ಉಸ್ತಾದ್ ಒತ್ತಾಯಿಸಿದರು.

ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷ ಶಾಫಿ ಸಅದಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ತಿಮ್ಮೇಗೌಡ ಮಾತನಾಡಿ, ಎಸ್ಸೆಸ್ಸೆಫ್ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ‘ಡ್ಯೂಟಿ ಆಫ್ ಇಸ್ಲಾಮ್’ ಎಂಬ ವಿಷಯದಲ್ಲಿ ಫೈಝಲ್ ಅಹ್ಸನಿ ರಂಡೆತ್ತಾನಿ, ‘ಕ್ಯಾಂಪಸ್ ರೋಲ್ ಮಾಡೆಲ್’ ಎಂಬ ವಿಷಯದಲ್ಲಿ ಅಬೂಬಕರ್ ನೂರಾನಿ, ಱಆಧ್ಯಾತ್ಮಿಕ ಬದಲಾವಣೆ’ ಎಂಬ ವಿಷಯದಲ್ಲಿ ಡಾ. ಅಬ್ದುಲ್ ಸಲಾಮ್ ದೇವರಶೋಲ ಉಸ್ತಾದ್ ವಿಷಯ ಮಂಡಿಸಿದರು.

ಪ್ರೆಸ್ಟೀಜ್ ಯುನಿವರ್ಸಿಟಿಯ ಉಪಕುಲಪತಿ, ರಾಜ್ಯ ಎಸ್ಸೆಸ್ಸೆಫ್ ಉಪಾಧ್ಯಕ್ಷ ಇಸ್ಮಾಯೀಲ್ ಸಖಾಫಿ, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಸೈಯದ್ ಸಿ.ಟಿ.ಎಂ. ತಂಙಳ್ ಮನ್‌ಶರ್, ಅಬ್ದುಲ್ ರಹ್ಮಾನ್ ಮಂಗಳೂರು, ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧೀಕ್ ಮೋಂಟುಗೋಳಿ, ಯಾಕೂಬ್ ಮಾಸ್ಟರ್ ಮಡಿಕೇರಿ, ಅಬ್ದುಲ್ ಹಮೀದ್ ಮಡಿಕೇರಿ ಮುಂತಾದವರು ಉಪಸ್ಥಿತರಿದ್ದರು.

ಸ್ವಾದಿಕ್ ಮಾಸ್ಟರ್ ಸ್ವಾಗತಿಸಿದರು. ಶರೀಫ್ ಬೆಂಗಳೂರು ವಂದಿಸಿದರು. ಮುಜೀಬ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು....

share
ವಾರ್ತಾಭಾರತಿ
ವಾರ್ತಾಭಾರತಿ
Next Story
X