Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬ್ರಿಟನ್: 3,000 ವರ್ಷಗಳ ಹಿಂದಿನ ಕಂಚಿನ...

ಬ್ರಿಟನ್: 3,000 ವರ್ಷಗಳ ಹಿಂದಿನ ಕಂಚಿನ ಯುಗದ ವಸಾಹತು ಪತ್ತೆ

ವಾರ್ತಾಭಾರತಿವಾರ್ತಾಭಾರತಿ31 Jan 2016 11:20 PM IST
share
ಬ್ರಿಟನ್: 3,000 ವರ್ಷಗಳ ಹಿಂದಿನ ಕಂಚಿನ ಯುಗದ ವಸಾಹತು ಪತ್ತೆ

ಲಂಡನ್, ಜ. 31: ಸುಮಾರು 3,000 ವರ್ಷಗಳ ಹಿಂದಿನ ಕಂಚಿನ ಯುಗದ ವಸಾಹತೊಂದನ್ನು ಬ್ರಿಟನ್‌ನಲ್ಲಿ ಸಂಶೋಧಕರು ಪತ್ತೆಹಚ್ಚಿದ್ದಾರೆ. ಇದನ್ನು ಬ್ರಿಟನ್‌ನ ‘ಪಾಂಪೇ’ ಎಂಬುದಾಗಿ ಬಣ್ಣಿಸಲಾಗುತ್ತಿದೆ.
ಇಟಲಿಯ ಪುರಾತನ ನಗರ ಪಾಂಪೇ ಜ್ವಾಲಾಮುಖಿ ಸ್ಫೋಟಗೊಂಡಾಗ ಅದರಡಿಯಲ್ಲಿ ಹೂತು ಹೋಗಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಕ್ಯಾಂಬ್ರಿಜ್‌ಶಯರ್‌ನಲ್ಲಿನ ‘ಮಸ್ಟ್ ಫಾರ್ಮ್’ ವಸಾಹತಿಗೆ ಬೆಂಕಿ ತಗುಲಿದಾಗ, ಅಲ್ಲಿನ ಮರದ ಮನೆಗಳು ಪಕ್ಕದ ನದಿಗೆ ಕುಸಿದು ಬಿದ್ದವು. ಬಳಿಕ ನದಿ ತಳದ ಕೆಸರಿನಲ್ಲಿ ಅವಶೇಷಗಳು ಶಾಶ್ವತವಾಗಿ ಉಳಿದವು. ಆ ವಸಾಹತಿನಲ್ಲಿದ್ದ ಕುಟುಂಬಗಳು ತಮ್ಮ ವಸ್ತುಗಳನ್ನು ಬಿಟ್ಟು ಓಡಿ ಹೋಗಿ ಜೀವ ಉಳಿಸಿಕೊಂಡಿರಬಹುದು ಎಂಬುದಾಗಿ ಭಾವಿಸಲಾಗಿದೆ.
ಇವು ಪ್ರಾಚೀನ ಬ್ರಿಟನ್‌ನ ಅತ್ಯಂತ ಶ್ರೇಷ್ಠ ‘ಕಂಚಿನ ಯುಗದ ಮನೆಗಳು’ ಎಂಬುದಾಗಿ ಕ್ಯಾಂಬ್ರಿಜ್ ಪ್ರಾಚ್ಯ ಇಲಾಖೆಯ ತಂಡವೊಂದು ಬಣ್ಣಿಸಿದೆ.
‘ಮಸ್ಟ್ ಫಾರ್ಮ್’ನಲ್ಲಿನ ಆರು ವೃತ್ತಾಕಾರದ ಮನೆಗಳನ್ನು ಒಳಗೊಂಡ ವಸಾಹತನ್ನು ನದಿಯೊಂದರ ಕಾಲುವೆಯ ಮೇಲ್ಗಡೆ ಮರದ ಅಟ್ಟಣಿಗೆಗಳನ್ನು ಬಳಸಿ ನಿರ್ಮಿಸಲಾಗಿತ್ತು ಎಂದು ಹೇಳಲಾಗಿದೆ.
ಪ್ರಾಚೀನ ಕಾಲದ ಬ್ರಿಟಿಷರು ವಾಸಿಸುತ್ತಿದ್ದ ಈ ಮನೆಗಳ ಮೇಲ್ಛಾವಣಿಯ ಮರಗಳನ್ನು ಹೊರತೆಗೆಯಲು ಸಂಶೋಧಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕ್ಸಿನುವಾ ವಾರ್ತಾ ಸಂಸ್ಥೆ ವರದಿ ಮಾಡಿದೆ. ಮನೆಯೊಳಗೆ ಏನಿದೆ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಮೇಲ್ಛಾವಣಿಯನ್ನು ಜಾಗರೂಕತೆಯಿಂದ ತೆರೆಯಲಾಗುವುದು.
ಮಸ್ಟ್ ಫಾರ್ಮ್‌ನಲ್ಲಿನ ಅಗೆತ ಈ ವಾರ ಅರ್ಧದಷ್ಟು ಮುಗಿದಿದೆ. ಈ ಅವಧಿಯಲ್ಲಿ ನೂರಾರು ವಸ್ತುಗಳನ್ನು ಪತ್ತೆಹಚ್ಚಲಾಗಿದೆ.


ಮನೆಗಳನ್ನೊಳಗೊಂಡ ವಸಾಹತನ್ನು ನದಿಯೊಂದರ ಕಾಲುವೆಯಲ್ಲಿ ಮರದ ಅಟ್ಟಣಿಗೆಗಳ ಮೇಲೆ ಕಟ್ಟಲಾಗಿದೆ. ಕಂಚಿನ ಯುಗದ ಕೊನೆಯ ವೇಳೆಗೆ ಈ ವಸಾಹತು ಅಸ್ತಿತ್ವದಲ್ಲಿದ್ದಿರಬಹುದು.

-ಕಸಿಯ ಗಡನೀಕ್, ಕ್ಯಾಂಬ್ರಿಜ್‌ಶಯರ್ ಕೌಂಟಿ ಕೌನ್ಸಿಲ್‌ನ ಹಿರಿಯ ಪ್ರಾಕ್ತನ ಶಾಸ್ತ್ರಜ್ಞ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X