Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಷ್ಕರ ನಿರತರಿಂದ ತ್ಯಾಜ್ಯ ತೆರವಿಗೆ...

ಮುಷ್ಕರ ನಿರತರಿಂದ ತ್ಯಾಜ್ಯ ತೆರವಿಗೆ ಅಡ್ಡ

ವಾರ್ತಾಭಾರತಿವಾರ್ತಾಭಾರತಿ31 Jan 2016 11:23 PM IST
share

 ದಿಲ್ಲಿ ಪೌರಕಾರ್ಮಿಕರ ಮುಷ್ಕರ ಐದನೆ ದಿನಕ್ಕೆ

ಹೊಸದಿಲ್ಲಿ,ಜ.31: ದಿಲ್ಲಿಯ ಮೂರು ನಗರಪಾಲಿಕೆಗಳ ನೈರ್ಮಲ್ಯ ಕಾರ್ಮಿಕರ ಮುಷ್ಕರ ರವಿವಾರ ಐದನೆ ದಿನಕ್ಕೆ ಕಾಲಿಟ್ಟಿದ್ದು, ರಸ್ತೆಗಳಲ್ಲಿ ಕೊಳೆತುನಾರುತ್ತಿರುವ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಲು ಆಮ್ ಆದ್ಮಿ ಸರಕಾರ ನಿಯೋಜಿಸಿದ ಲೋಕೋಪಯೋಗಿ ಇಲಾಖೆಯ ಕಾರ್ಮಿಕರನ್ನು ಮುಷ್ಕರ ನಿರತರು ಅಡ್ಡಿಪಡಿಸಿದ ಘಟನೆ ನಡೆದಿದೆ.
 ಪೂರ್ವ ದಿಲ್ಲಿಯ ಪಥ್‌ಪರ್‌ಗಂಜ್‌ಗೆ ಪ್ರದೇಶಕ್ಕೆ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ರವಿವಾರ ಬೆಳಗ್ಗೆ ಭೇಟಿ ನೀಡಿದರು ಹಾಗೂ ಅಲ್ಲಿ ರಾಶಿಬಿದ್ದಿದ್ದ ತ್ಯಾಜ್ಯಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಮಿಕರಿಗೆ ತಿಳಿಸಿದರು.ಅವರು ಸ್ಥಳದಿಂದ ನಿರ್ಗಮಿಸುತ್ತಿದ್ದಂತೆಯೇ, ದಿಲ್ಲಿ ಮಹಾನಗರ ಪಾಲಿಕೆಯ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ, ಪಿಡಬ್ಲುಡಿ ಸಿಬ್ಬಂದಿಗೆ ಅಡ್ಡಿಪಡಿಸಿದರು. ಪಥ್‌ಪರ್‌ಗಂಜ್ ಸಿಸೋಡಿಯಾ ಅವರ ಸ್ವಕ್ಷೇತ್ರವಾಗಿದೆ.
ಈ ಮಧ್ಯೆ ಎಎಪಿಯ ಹಲವು ಸಚಿವರು ಹಾಗೂ ಶಾಸಕರು, ತಮ್ಮ ಕ್ಷೇತ್ರಗಳಲ್ಲಿ ನಡೆದ ಸ್ವಚ್ಛತಾ ಅಭಿಯಾನಗಳಲ್ಲಿ ಪಾಲ್ಗೊಂಡರು. ಮನೀಷ್ ಸಿಸೋಡಿಯಾ, ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ, ದಿಲ್ಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ತಮ್ಮ ಸ್ವಕ್ಷೇತ್ರಗಳಲ್ಲಿ ತ್ಯಾಜ್ಯಗಳ ತೆರವುಗೊಳಿಸುವ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಮುಷ್ಕರ ನಿರತ ದಿಲ್ಲಿ ಮಹಾನಗರಪಾಲಿಕೆ (ಎಂಸಿಡಿ)ನೌಕರರ ಬೇಡಿಕೆಗಳನ್ನು ತಾನು ಬೆಂಬಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ‘‘ ತಮಗೆ ಪೂರ್ಣವೇತನ ದೊರೆಯಬೇಕೆಂಬ ಎಂಸಿಡಿ ನೌಕರರ ಬೇಡಿಕೆಗೆ ನನ್ನ ಬೆಂಬಲವಿದೆ. ಹೈಕೋರ್ಟ್‌ನಲ್ಲಿ ಸೋಮವಾರ ಈ ಬಗ್ಗೆ ಅಲಿಕೆ ನಡೆಯಲಿದ್ದು, ಬಿಕ್ಕಟ್ಟು ಇತ್ಯರ್ಥಗೊಳ್ಳುವುದೆಂಬ ವಿಶ್ವಾಸ ತನಗಿದೆಯೆಂದು ಅವರು ಟ್ವೀಟ್ ಮಾಡಿದ್ದಾರೆ. ತ್ಯಾಜ್ಯಗಳನ್ನು ತೆರವುಗೊಳಿಸಲು ಪಿಡಬ್ಲುಡಿ ನೌಕರರು ರಾತ್ರಿಯಿಡೀ ಶ್ರಮಿಸಿದ್ದಾರೆ. ಅವರಿಗೆ ಎಲ್ಲಾ ಎಎಪಿ ಕಾರ್ಯಕರ್ತರು ನೆರವಾಗಬೇಕೆಂದು ಕೇಜ್ರಿವಾಲ್ ಕರೆ ನೀಡಿದ್ದಾರೆ. ದಿಲ್ಲಿ ಮಹಾನಗರ ಪಾಲಿಕೆಯನ್ನು 2012ರ ಮೇನಲ್ಲಿ ಮೂರು ಘಟಕಗಳಾಗಿ ವಿಭಜಿಸಲಾಗಿತ್ತು. ಈ ಮೂರು ನಗರಪಾಲಿಕೆ ಗಳಲ್ಲೂ ಬಿಜೆಪಿಯ ಆಡಳಿತವಿದೆ. ಆಮ್ ಆದ್ಮಿ ಪಕ್ಷದ ನಿಯಂತ್ರಣದಲ್ಲಿರುವ ದಿಲ್ಲಿ ಸರಕಾರವು, ನಗರಪಾಲಿಕೆಗಳಿಗೆ ಅನುದಾನ ಬಿಡುಗಡೆಗೊಳಿಸದಿರುವುದೇ ಪ್ರಸಕ್ತ ಬಿಕ್ಕಟ್ಟಿಗೆ ಕಾರಣವೆಂದು ಬಿಜೆಪಿ ಆರೋಪಿಸಿದೆ.
 ಆದರೆ ದಿಲ್ಲಿಯ ಆಮ್‌ಆದ್ಮಿ ಸರಕಾರ ಈ ಆರೋಪವನ್ನು ನಿರಾಕರಿಸಿದೆ. ದಿಲ್ಲಿ ಸರಕಾರದ ಸಚಿವರ ನಿವಾಸ ಹಾಗೂ ಕಚೇರಿಗಳ ಮುಂದೆ ತ್ಯಾಜ್ಯಗಳನ್ನು ಎಸೆಯುವಂತೆ ಬಿಜೆಪಿ ಸರಕಾರವು, ಪೌರಕಾರ್ಮಿಕರಿಗೆ ಕುಮ್ಮಕ್ಕು ನೀಡುತ್ತಿದೆಯೆಂದು ಆದು ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X