Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಜಿಟಲ್ ಇಂಡಿಯಾದ ವಿರುದ್ಧ ರಾಹುಲ್...

ಡಿಜಿಟಲ್ ಇಂಡಿಯಾದ ವಿರುದ್ಧ ರಾಹುಲ್ ಗಾಂಧಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ31 Jan 2016 11:30 PM IST
share
ಡಿಜಿಟಲ್ ಇಂಡಿಯಾದ ವಿರುದ್ಧ ರಾಹುಲ್ ಗಾಂಧಿ ಕಿಡಿ

ಹೊಸದಿಲ್ಲಿ, ಜ.31: ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ಕಾರ್ಯಕ್ರಮವನ್ನು ರವಿವಾರ ಟೀಕಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ, ಮುಕ್ತ ಅಂತರ್ಜಾಲ ವ್ಯವಸ್ಥೆ (ನೆಟ್ ನ್ಯೂಟ್ರಾಲಿಟಿ) ಯನ್ನು ಬಲವಾಗಿ ಬೆಂಬಲಿಸಿದ್ದಾರೆ.
 ಅಂತರ್ಜಾಲದ ಸ್ವಾತಂತ್ರವನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತಲೇ ಬಂದಿದೆ. ಇಂಟರ್ ಸೇವಾ ಪೂರೈಕೆದಾರರು (ಐಎಸ್‌ಪಿಗಳು)/ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿ) ಹಾಗೂ ಕೇಂದ್ರ ಸರಕಾರವು ಅಂತರ್ಜಾಲದ ಎಲ್ಲಾ ದತ್ತಾಂಶ (ಡೇಟಾ)ಗಳನ್ನು ಸರಿಸಮಾನವಾಗಿ ಪರಿಗಣಿಸಬೇಕು. ಇಂಟರ್‌ನೆಟ್‌ನಲ್ಲಿರುವ ಎಲ್ಲಾ ವೆಬ್‌ಸೈಟ್‌ಗಳನ್ನು ಸಮಾನವಾಗಿ ಪರಿಗಣಿಸಬೇಕೆಂಬುದೇ, ಮುಕ್ತಜಾಲ ಅಂತರ್ಜಾಲ(ನೆಟ್ ನ್ಯೂಟ್ರಾಲಿಟಿ) ನೀತಿಯ ಉದ್ದೇಶವಾಗಿದೆ ಎಂದು ರಾಹುಲ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ,.
  ದೇಶದಲ್ಲಿ ಅಂತಾರ್ಜಾಲ ವ್ಯವಸ್ಥೆ, ಅನತಿ ದೂರದ ಬೃಹತ್ ಕಾರ್ಪೊರೇಟ್ ಕಂಪೆನಿಗಳ ನಿಯಂತ್ರಣದಲ್ಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಯೋಜನೆ ಯಶಸ್ವಿಯಾಗದು ಎಂದವರು ಹೇಳಿದ್ದಾರೆ.
   ಇಂಟರ್‌ನೆಟ್ ಆಧಾರಿತ ಕರೆಗಳಿಗೆ ಪ್ರತ್ಯೇಕ ಶುಲ್ಕಗಳನ್ನು ವಿಧಿಸಲು, ದೂರವಾಣಿ ಸೇವಾಸಂಸ್ಥೆ ಏರ್‌ಟೆಲ್ ಈ ಹಿಂದೆ ನಿರ್ಧರಿಸಿತ್ತು. ಆದರೆ ಅದನ್ನು ಜನರು ತೀವ್ರವಾಗಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಅದು ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು. ‘ಏರ್‌ಟೆಲ್ ಝೀರೋ’ ಹಾಗೂ ಫೇಸ್‌ಬುಕ್‌ನ ಉಚಿತ ಇಂಟರ್‌ನೆಟ್ ಸೇವೆ ಫ್ರೀ ಬೇಸಿಕ್ಸ್ ಯೋಜನೆಗಳಿಗೂ ಇಂಟರ್‌ನೆಟ್ ಚಳವಳಿಗಾರರು ಹಾಗೂ ತಜ್ಞರಿಂದ ವಿರೋಧ ವ್ಯಕ್ತವಾಗಿದೆ.
  ‘‘ ಇಂಟರ್‌ನೆಟ್ ಬಳಕೆದಾರರು, ತಮಗೆ ಬೇಕಾದ ವೆಬ್‌ಸೈಟ್ ಅಥವಾ ಸೇವೆಯೊಂದಿಗೆ ಸಂಪರ್ಕವನ್ನು ಹೊಂದಲು ಮುಕ್ತವಕಾಶ ದೊರೆಯಬೇಕೆಂಬುದೇ ಕಾಂಗ್ರೆಸ್ ಪಕ್ಷ ಹಾಗೂ ನನ್ನ ನಂಬಿಕೆಯಾಗಿದೆ. ಇಂಟರ್‌ನೆಟ್ ಸೇವೆಗಳನ್ನು ವಿಭಜಿಸುವ ಮೂಲಕ ಸಾರ್ವಜನಿಕ ಇಂಟರ್‌ನೆಟ್‌ನ್ನು ಖಾಸಗಿ ವೇದಿಕೆಗೆ ಒಪ್ಪಿಸುವುದರಿಂದ ಉಂಟಾಗುವ ಅಪಾಯದ ಅರಿವು ನಮಗಿದೆ’’ಯೆಂದು ರಾಹುಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ಪದೇ ಪದೇ ಚರ್ಚೆಯನ್ನು ನಡೆಸುವ ನೆಪದಲ್ಲಿ ಕೇಂದ್ರ ಸರಕಾರವು ಮುಕ್ತ ಅಂತರ್ಜಾಲ ನೀತಿಯನ್ನು ರೂಪಿಸಲು ವಿಳಂಬಿಸುತ್ತಿದೆಯೆಂದು ರಾಹುಲ್ ಆಪಾದಿಸಿದರು.ಮುಕ್ತ ಅಂತರ್ಜಾಲ ನೀತಿ, ಫ್ರೀಬೇಸಿಕ್ಸ್ ಹಾಗೂ ವಿಭಿನ್ನ ಡಾಟಾ ದರ ನಿಗದಿ ಯೋಜನೆಗಳ ಬಗ್ಗೆ ಉತ್ತರಿಸುವಂತೆ ಗ್ರಾಹಕರಿಂದ ಎರಡೆರಡು ಬಾರಿ ಅಭಿಪ್ರಾಯಗಳನ್ನು ಕೇಳಿದ ಭಾರತೀಯ ಟೆಲಿಕಾಂ ಪ್ರಾಧಿಕಾರದ ಕ್ರಮವನ್ನು ಅವರು ಖಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X