Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ವಿಶ್ವಕಪ್: ಭಾರತದ ಆರ್ಭಟಕ್ಕೆ...

ಅಂಡರ್-19 ವಿಶ್ವಕಪ್: ಭಾರತದ ಆರ್ಭಟಕ್ಕೆ ನಲುಗಿದ ನೇಪಾಳ

ವಾರ್ತಾಭಾರತಿವಾರ್ತಾಭಾರತಿ1 Feb 2016 11:07 PM IST
share
ಅಂಡರ್-19 ವಿಶ್ವಕಪ್: ಭಾರತದ ಆರ್ಭಟಕ್ಕೆ ನಲುಗಿದ ನೇಪಾಳ

ಆವೇಶ್ ಖಾನ್(3-24) 

ಮೀರ್ಪುರ, ಫೆ.1: ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಬಾರಿಸಿದ ಮಿಂಚಿನ ಅರ್ಧಶತಕದ(24 ಎಸೆತ, 78 ರನ್) ಸಹಾಯದಿಂದ ಭಾರತ ತಂಡ ನೇಪಾಳ ವಿರುದ್ಧದ ಅಂಡರ್-19 ವಿಶ್ವಕಪ್ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

 ವಿಶ್ವಕಪ್‌ನ ‘ಡಿ’ ಗುಂಪಿನಲ್ಲಿ ಆಡಿರುವ ಎಲ್ಲ ಪಂದ್ಯಗಳನ್ನು ಜಯಿಸಿರುವ ಭಾರತ ಅಜೇಯವಾಗುಳಿದಿದೆ. ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಬಾಂಗ್ಲಾದೇಶ ಇಲ್ಲವೇ ನಮೀಬಿಯಾ ತಂಡವನ್ನು ಎದುರಿಸಲಿದೆ.

ರಿಷಬ್ ಪಂತ್ 18 ಎಸೆತಗಳಲ್ಲಿ 9 ಬೌಂಡರಿ ಹಾಗೂ ಐದು ಸಿಕ್ಸರ್‌ಗಳ ಸಹಾಯದಿಂದ ಅಂಡರ್-19 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕ ಸಿಡಿಸಿದರು. ಪಂತ್ ಸಾಹಸದಿಂದ ಭಾರತ 18.1 ಓವರ್‌ಗಳಲ್ಲಿ 170 ರನ್ ಗುರಿಯನ್ನು ಸುಲಭವಾಗಿ ತಲುಪಿತು.

ರಣಜಿ ಟ್ರೋಫಿ ಆಟಗಾರರಾದ ರಿಷಬ್ ಹಾಗೂ ನಾಯಕ ಐಶಾನ್ ಕಿಶನ್(52 ರನ್, 40 ಎಸೆತ, 7 ಬೌಂಡರಿ, 3 ಸಿಕ್ಸರ್) ಮೊದಲ ವಿಕೆಟ್‌ನಲ್ಲಿ ಕೇವಲ 9 ಓವರ್‌ಗಳಲ್ಲಿ 124 ರನ್ ಜೊತೆಯಾಟ ನಡೆಸಿ ನೇಪಾಳದ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದರು.

ಸರ್ಫ್‌ರಾಝ್ ಖಾನ್(ಔಟಾಗದೆ 21, 23 ಎಸೆತ, 2 ಬೌಂಡರಿ, 1 ಸಿಕ್ಸರ್) ಹಾಗೂ ಅರ್ಮಾನ್ ಝಾಫರ್(ಔಟಾಗದೆ 12) 4ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 33 ರನ್ ಸೇರಿಸಿ ಇನ್ನೂ 179 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು.

ನೇಪಾಳ 169/8: ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ನೇಪಾಳ ತಂಡವನ್ನು ಆವೇಶ್ ಖಾನ್(3-24) ನೇತೃತ್ವದ ಭಾರತದ ಬೌಲಿಂಗ್ ಪಡೆ 8 ವಿಕೆಟ್ ನಷ್ಟಕ್ಕೆ 169 ರನ್‌ಗೆ ನಿಯಂತ್ರಿಸಿತ್ತು. 48 ಓವರ್‌ಗೆ ಕಡಿತಗೊಳಿಸಲಾದ ಪಂದ್ಯದಲ್ಲಿ ವಿ. ಸುಂದರ್(2-20) ಹಾಗೂ ಮಯಾಂಕ್ ದಾಗಾರ್(2-32) ತಲಾ ಎರಡು ವಿಕೆಟ್ ಕಬಳಿಸಿದರು. ನೇಪಾಳದ ಪರ ಆರಂಭಿಕ ದಾಂಡಿಗ ಸುನರ್(37) ಅಗ್ರ ಸ್ಕೋರರ್ ಎನಿಸಿಕೊಂಡರು.

ಸಂಕ್ಷಿಪ್ತ ಸ್ಕೋರ್

ನೇಪಾಳ: 48 ಓವರ್‌ಗಳಲ್ಲಿ 169/8

(ಎಸ್. ಸುನರ್ 37, ರಾಜ್ಬೀರ್ ಸಿಂಗ್ 35, ಪ್ರೇಮ್ ತಮಂಗ್ ಔಟಾಗದೆ 29, ಆವೇಶ್ ಖಾನ್ 3-34, ವಿ.ಸುಂದರ್ 2-20)

ಭಾರತ: 18.1 ಓವರ್‌ಗಳಲ್ಲಿ 175/3

(ರಿಷಬ್ ಪಂತ್ 78, ಇಶಾನ್ ಕಿಶನ್ 52, ಸರ್ಫ್‌ರಾಝ್ ಖಾನ್ ಔಟಾಗದೆ 21, ಪ್ರೇಮ್ ತಮಾಂಗ್ 2-41)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X