Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ವಿಶ್ವಕಪ್: ವೇಗದ ಅರ್ಧಶತಕ...

ಅಂಡರ್-19 ವಿಶ್ವಕಪ್: ವೇಗದ ಅರ್ಧಶತಕ ಬಾರಿಸಿದ ಪಂತ್

ವಾರ್ತಾಭಾರತಿವಾರ್ತಾಭಾರತಿ1 Feb 2016 11:09 PM IST
share
ಅಂಡರ್-19 ವಿಶ್ವಕಪ್: ವೇಗದ ಅರ್ಧಶತಕ ಬಾರಿಸಿದ ಪಂತ್

ಢಾಕಾ, ಫೆ.1: ಭಾರತದ ಯುವ ವಿಕೆಟ್‌ಕೀಪರ್-ದಾಂಡಿಗ ರಿಷಬ್ ಪಂತ್ ಸೋಮವಾರ ಅಂಡರ್-19 ವಿಶ್ವಕಪ್‌ನಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಆ್ಯಡಂ ಗಿಲ್‌ಕ್ರಿಸ್ಟ್ ಹಾಗೂ ಎಂಎಸ್ ಧೋನಿಯ ಆಟವನ್ನು ನೆನಪಿಸಿದರು.

 ಕೇವಲ 18 ಎಸೆತಗಳಲ್ಲಿ 50 ರನ್ ಪೂರೈಸಿದ ಪಂತ್ ಐಸಿಸಿ ಅಂಡರ್-19 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕವನ್ನು ಸಿಡಿಸಿದ ಸಾಧನೆ ಮಾಡಿದರು. 2009-10ರ ಆವೃತ್ತಿಯ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್‌ಇಂಡೀಸ್ ದಾಂಡಿಗ ಟ್ರೆವನ್ ಗ್ರಿಫಿತ್ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದರು.

ನಾಯಕ ಇಶಾನ್ ಕಿಶನ್‌ರೊಂದಿಗೆ ಇನಿಂಗ್ಸ್ ಆರಂಭಿಸಿದ ದಿಲ್ಲಿಯ 18ರ ಹರೆಯದ ಪಂತ್ ನೇಪಾಳದ ಬೌಲರ್‌ಗಳನ್ನು ಮನಸೋ ಇಚ್ಛೆ ದಂಡಿಸಿದರು.

24 ಎಸೆತಗಳಲ್ಲಿ 78 ರನ್ ಸಿಡಿಸಿದ ಪಂತ್ ಒಂದು ಹಂತದಲ್ಲಿ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಹೆಸರಲ್ಲಿರುವ ಅತ್ಯಂತ ವೇಗದ ಶತಕದ ದಾಖಲೆ ಮುರಿಯುವ ವಿಶ್ವಾಸ ಮೂಡಿಸಿದ್ದರು. ಪಂತ್ ಅಬ್ಬರದ ನೆರವಿನಿಂದ ಭಾರತ 3.5 ಓವರ್‌ಗಳಲ್ಲಿ 50 ರನ್ ಹಾಗೂ 7.3 ಓವರ್‌ಗಳಲ್ಲಿ 100 ರನ್ ತಲುಪಿತು.

ನೇಪಾಳದ ಸ್ಪಿನ್ನರ್ ಪ್ರೇಮ್ ತಮಂಗ್ 9.1ನೆ ಓವರ್‌ನಲ್ಲಿ ಪಂತ್‌ರ ಬಿರುಗಾಳಿ ವೇಗದ ಬ್ಯಾಟಿಂಗ್‌ಗೆ ಕೊನೆಗೂ ತೆರೆ ಎಳೆದರು.

ಫೆ.6 ರಂದು ನಡೆಯಲಿರುವ 2016ರ ಐಪಿಎಲ್ ಆಟಗಾರರ ಹರಾಜಿನಲ್ಲಿ ಪಾಲ್ಗೊಳ್ಳಲಿರುವ ಎಡಗೈ ದಾಂಡಿಗ ಪಂತ್ 10 ಲಕ್ಷ ರೂ.ಮೂಲ ಬೆಲೆ ಹೊಂದಿದ್ದಾರೆ. ಪಂತ್‌ರನ್ನು ತಮ್ಮತ್ತ ಸೆಳೆಯಲು ಡೆಲ್ಲಿ ಡೇರ್ ಡೆವಿಲ್ಸ್, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸಹಿತ ಎಲ್ಲ ತಂಡಗಳು ತುದಿಗಾಲಲ್ಲಿ ನಿಂತಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X