Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ಆತ್ಮಹತ್ಯೆ ವಿರೋಧಿಸಿ...

ರೋಹಿತ್ ಆತ್ಮಹತ್ಯೆ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ

ವಾರ್ತಾಭಾರತಿವಾರ್ತಾಭಾರತಿ1 Feb 2016 11:42 PM IST
share
ರೋಹಿತ್ ಆತ್ಮಹತ್ಯೆ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ

ವಿದ್ಯಾರ್ಥಿನಿಯರಿಗೂ ಥಳಿತ

ಹೊಸದಿಲ್ಲಿ, ಫೆ.1: ಹೈದರಾಬಾದ್ ವಿವಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ವಿರುದ್ಧ ಹೊಸದಿಲ್ಲಿಯ ಆರೆಸ್ಸೆಸ್‌ಕಾರ್ಯಾಲಯದ ಮುಂದೆ ಶನಿವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ದಿಲ್ಲಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸುತ್ತಿರುವ ದೃಶ್ಯವಿರುವ ವೀಡಿಯೊ ಟಿವಿ ಮಾಧ್ಯಮಗಳಲ್ಲಿ ಹಾಗೂ ಅಂತರ್ಜಾಲ ತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನಕಾರರ ಮೇಲೆ ನಡೆದಿರುವ ಹಲ್ಲೆಯ ಈ ವೀಡಿಯೊ ದಿಲ್ಲಿ ಪೊಲೀಸರ ದೌರ್ಜನ್ಯಕ್ಕೆ ಸಾಕ್ಷಿಯಾಗಿದೆಯೆಂದು, ವಿವಿಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

‘‘ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳು, ಅನ್ಯಾಯಗಳ ವಿರುದ್ಧ ಧ್ವನಿಯೆತ್ತುತ್ತಿದ್ದಾರೆ. ಆದರೆ ಹಿಂದೆಂದೂ, ಈ ರೀತಿಯಾಗಿ ಪ್ರತಿಭಟನೆ ನಡೆಸುವ ಅವರ ಹಕ್ಕನ್ನು ಕಸಿದುಕೊಂಡಿರಲಿಲ್ಲ. ವೇಮುಲಾ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ, ಪ್ರತಿ ಸಲವೂ ನಾವು ಶಾಂತಿಯುತ ಪ್ರದರ್ಶನ ನಡೆಸಲು ಯತ್ನಿಸಿದಾಗಲೆಲ್ಲಾ ನಮ್ಮನ್ನು ಥಳಿಸಲಾಗುತ್ತಿದೆ, ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಹಾಗೂ ಆಕ್ರಮಣ ನಡೆಸಲಾಗುತ್ತಿದೆ. ಅದಕ್ಕೆ ಈ ವೀಡಿಯೊ ಸಾಕ್ಷಿಯಾಗಿದೆ’’ ಎಂದು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆ ಶಿಹ್ಲಾ ರಶೀದ್ ಶೋರಾ ಹೇಳಿದ್ದಾರೆ.

‘‘ಅಸಮರ್ಥನೀಯವೆಂದು ಕಂಡುಬಂದ ಯಾವ ವಿಷಯದ ಬಗೆಗೂ ಪ್ರತಿಭಟನೆ ನಡೆಸುವ ಹಕ್ಕನ್ನು ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿದೆ. ನಾವು ಪ್ರತಿಬಾರಿಯೂ ಧ್ವನಿಯೆತ್ತಲು ಯತ್ನಿಸಿದ ಸಂದರ್ಭಗಳಲ್ಲಿ ನಮ್ಮ ಮೇಲೆ ಹಲ್ಲೆಗಳಾಗಿವೆ’’ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿನಿ ಸುಚೇತಾ ಡೇ ಆಪಾದಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವಂತೆ, ಪೊಲೀಸರಿಗೆ ಸೂಚನೆಗಳನ್ನು ನೀಡುತ್ತಿರುವವರು ಯಾರೆಂಬುದು ಬಯಲಿಗೆ ಬರಬೇಕಾಗಿದೆಯೆಂದು ಎಡಪಕ್ಷಗಳ ಬೆಂಬಲ ಹೊಂದಿರುವ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್‌ಎ)ದ ಸದಸ್ಯ ಸನ್ನಿ ಕುಮಾರ್ ಆರೋಪಿಸಿದ್ದಾರೆ.

‘‘ರೋಹಿತ್‌ಗೆ ನ್ಯಾಯ ದೊರೆಯುವ ತನಕವೂ ಈ ಪ್ರತಿಭಟನೆ ಮುಂದುವರಿಯಲಿದೆ. ಇದು ಕೇವಲ ರೋಹಿತ್ ಮಾತ್ರವಲ್ಲ ಪ್ರತಿಯೊಬ್ಬ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆಯೆಂದು ಶೋರಾ ಹೇಳಿದ್ದಾರೆ.

ರೋಹಿತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವರಾದ ಬಂಡಾರು ದತ್ತಾತ್ರೇಯ ಹಾಗೂ ಸ್ಮತಿ ಇರಾನಿ ಮತ್ತು ಹೈದರಾಬಾದ್ ವಿವಿಯ ಉಪಕುಲಪತಿ ಬಂಡಾರು ದತ್ತಾತ್ರೇಯ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರ ದೌರ್ಜನ್ಯದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ವಿದ್ಯಾರ್ಥಿಗಳ ಮೇಲಿನ ಹಲ್ಲೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಬಿಜೆಪಿಯು ತನ್ನ ರಾಜಕೀಯ ಉದ್ದೇಶಕ್ಕಾಗಿ ದಿಲ್ಲಿ ಪೊಲೀಸ್ ಪಡೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೆಂದು ಆರೋಪಿಸಿದ್ದಾರೆ.

ದಿಲ್ಲಿ ಪೊಲೀಸರಿಗೆ ಮಹಿಳಾ ಆಯೋಗ ನೋಟಿಸ್

ಹೊಸದಿಲ್ಲಿ, ಫೆ.1: ಆರೆಸ್ಸೆಸ್ ಕಾರ್ಯಾಲಯದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳಾ ಪೊಲೀಸರನ್ನು ಯಾಕೆ ಸ್ಥಳದಲ್ಲಿ ನಿಯೋಜಿಸಲಾಗಿಲ್ಲವೆಂದು ಪ್ರಶ್ನಿಸಿ, ದಿಲ್ಲಿ ಮಹಿಳಾ ಆಯೋಗವು, ದಿಲ್ಲಿ ಪೊಲೀಸರಿಗೆ ಸೋಮವಾರ ನೋಟಿಸ್ ಜಾರಿಗೊಳಿಸಿದೆ.ವಿದ್ಯಾರ್ಥಿನಿಯರು ಸೇರಿದಂತೆ ಪ್ರತಿಭಟನಾ ನಿರತರ ಮೇಲೆ ಪೊಲೀಸರು ಆರೆಸ್ಸೆಸ್ ಕಾರ್ಯಾಲಯದ ಬಳಿ ಹಲ್ಲೆ ನಡೆಸಿದ ವೀಡಿಯೊವೊಂದು ಬಹಿರಂಗಗೊಂಡ ಬೆನ್ನಲ್ಲೇ ಆಯೋಗವು ದಿಲ್ಲಿಯ ಜಂಟಿ ಪೊಲೀಸ್ ಆಯುಕ್ತ (ಕೇಂದ್ರ ವಲಯ) ಸುನೀಲ್ ಕುಮಾರ್ ಗೌತಮ್ ವಿರುದ್ಧ ನೋಟಿಸ್ ಜಾರಿಗೊಳಿಸಿದೆ.

ಆರೆಸ್ಸೆಸ್ ಗೂಂಡಾಗಳಿಂದಲೂ ಪ್ರತಿಭಟನಕಾರರ ಮೇಲೆ ಹಲ್ಲೆ; ನಿರ್ದಯವಾಗಿ ಚಚ್ಚಿದ ಪೊಲೀಸರು

ವೀಡಿಯೊದಲ್ಲಿ ಆರೆಸ್ಸೆಸ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಮನಬಂದಂತೆ ಥಳಿಸುತ್ತಿರುವುದು ಕಂಡುಬಂದಿದೆೆ. ಪೊಲೀಸರ ಜೊತೆಗೆ ಕೆಲವು ಆರೆಸ್ಸೆಸ್ ಬೆಂಬಲಿಗರೂ ಪ್ರತಿಭಟನಕಾರರ ಮೇಲೆ ಹಲ್ಲೆ ನಡೆಸಿರುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ. ಪುರುಷ ಪೊಲೀಸರು, ವಿದ್ಯಾರ್ಥಿನಿಯರ ಮೇಲೂ ಹಲ್ಲೆ ಮಾಡಿದ್ದಾರೆ. ಕೆಲವು ವಿದ್ಯಾರ್ಥಿನಿಯರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X