Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಲು ಕಳೆದುಕೊಳ್ಳಬೇಕಾದ ಯುವತಿಗೆ...

ಕಾಲು ಕಳೆದುಕೊಳ್ಳಬೇಕಾದ ಯುವತಿಗೆ ಮರುಹುಟ್ಟು ಇಂಡಿಯಾನ ಆಸ್ಪತ್ರೆಯಲ್ಲಿ ಸಂಕೀರ್ಣ ಶಸ್ತ್ರ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ3 Feb 2016 2:19 PM IST
share
ಕಾಲು ಕಳೆದುಕೊಳ್ಳಬೇಕಾದ ಯುವತಿಗೆ ಮರುಹುಟ್ಟು ಇಂಡಿಯಾನ ಆಸ್ಪತ್ರೆಯಲ್ಲಿ ಸಂಕೀರ್ಣ ಶಸ್ತ್ರ ಚಿಕಿತ್ಸೆ

ಮಂಗಳೂರು, ಫೆ.3: ಕ್ಯಾನ್ಸರ್‌ಕಾರಗ ಗಡ್ಡೆಯಿಂದ ಕಾಲು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದ 20 ಹರೆಯದ ಯುವತಿಗೆ ಸಂಕೀರ್ಣ ಶಸ್ತ್ರ ಚಿಕಿತ್ಸೆ ಮೂಲಕ ಇಂಡಿಯಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯು ಮರು ಹುಟ್ಟು ನೀಡಿದೆ.


ಆಸ್ಪತ್ರೆಯಲ್ಲಿಂದು ಅಪರೂಪದ ಯಶಸ್ವಿ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಜಲಾಲುದ್ದೀನ್ ಅಕ್ಬರ್, ಕಾಲಿನಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗೆಡ್ಡೆ ತೆಗೆಯಲು ಯುವತಿಯನ್ನು ಸಂಕೀರ್ಣ ಶಸ್ತ್ರ ಚಿಕಿತ್ಸೆಗೊಳಪಡಿಸಿ ಆಕೆ ಚೇತರಿಸಿಕೊಂಡಿದ್ದು, ಮುಂದಿನ ನಾಲ್ಕೈದು ವಾರಗಳಲ್ಲಿ ಆಕೆ ನಡೆದಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.


ಕಣ್ಣೂರಿನ ನಿವಾಸಿ 20ರ ಹರೆಯದ ಯುವತಿ ಎಡಗಾಲಲ್ಲಿ ಕ್ಯಾನ್ಸರ್‌ಕಾರಕ ಗಡ್ಡೆ ಬೆಳೆದು ನಡೆದಾಡಲು ಅಸಾಧ್ಯವಾಗಿತ್ತು. ಈ ಹಿಂದೆ ಗಡ್ಡೆ ತೆಗೆಯಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಮತ್ತೆ ಕಾಣಿಸಿಕೊಂಡಿದ್ದರಿಂದ ಆಕೆಯ ಪ್ರಾಣ ಉಳಿಸಲು ಎಡಗಾಲನ್ನು ಕತ್ತರಿಸಬೇಕೆಂಬ ಸಲಹೆ ವೈದ್ಯರಿಂದ ವ್ಯಕ್ತವಾಗಿತ್ತು. ಕೊನೆಗೆ ಆಕೆ ಇಂಡಿಯಾನ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು ಎಂದು ಡಾ. ಜಲಾಲುದ್ದೀನ್ ವಿವರಿಸಿದರು.


ಕೀಲುರೋಗ ತಜ್ಞರಾದ ಡಾ. ಇಮ್ತಿಯಾಝ್, ಡಾ. ಅಭಿಷೇಕ್, ಅರಿವಳಿಕೆ ತಜ್ಞ ಡಾ. ವಿನ್ಸೆಂಟ್ ಜತೆ 8 ಗಂಟೆಗಳ ಶಸ್ತ್ರ ಚಿಕಿತ್ಸೆಯ ಮೂಲಕ ಗಡ್ಡೆಯನ್ನು ತೆಗೆದು, ಕೃತಕ ಅಂಗಜೋಡಣೆ ಮೂಲಕ ಕಾಲನ್ನು ಉಳಿಸಲಾಗಿದೆ. ಇಂಥ ಪ್ರರಣ ಯಶಸ್ವಿಯಾಗಿರುವುದು ಭಾರತದಲ್ಲಿ ಇದು ಪ್ರಥಮವಾಗಿದೆ. ಕಾಲಿಗೆ ರಕ್ತವನ್ನು ಪೂರೈಸುವ ಅತೀ ಸಂಕೀರ್ಣವಾದ ನಾಳವಿದ್ದು, ಶಸ್ತ್ರ ಚಿಕಿತ್ಸೆಯ ಒಂದಿಷ್ಟು ಲೋಪವಾದರೂ ನೂಲಿನ ಎಳೆಯಂತಿರುವ ಈ ನಾಳಕ್ಕೆ ತೊಂದರೆಯಾದಲ್ಲಿ ರೋಗಿ ಮುಂದೆ ನಡೆದಾಡಲು ಸಾಧ್ಯವಾಗದೇ ಕಾಲನ್ನು ಕತ್ತರಿಸಬೇಕಾದ ಪರಿಸ್ಥಿತಿ ಬರಬಹುದು.

ಈ ಪ್ರಕರಣದಲ್ಲಿ ಯುವತಿ ಈ ಹಿಂದೆಯೇ ಕಾಲನ್ನು ಕತ್ತರಿಸಲು ಒಪ್ಪಿಗೆ ನೀಡದ್ದರಿಂದ, ಶಸ್ತ್ರ ಚಿಕಿತ್ಸೆ ನಡೆಸುವುದು ಕೂಡಾ ಸವಾಲಾಗಿತ್ತು ಎಂದವರು ಹೇಳಿದರು.


ಕಳೆದ ಸುಮಾರು ಎರಡು ವರ್ಷಗಳಿಂದ ಈ ಕಾಲಿನಲ್ಲಿನ ಗಡ್ಡೆ ಸಮಸ್ಯೆಯಿಂದಾಗಿ ಆಕೆಗೆ ನಡೆದಾಡಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಒಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಬಳಿಕ ಹಲವಾರು ಆಸ್ಪತ್ರೆಗಳಿಗೆ ಅಲೆದಾಡಿದ್ದ ಆಕೆಗೆ ಇಂಡಿಯಾನ ಆಸ್ಪತ್ರೆಯ ತಜ್ಞ ವೈದ್ಯರ ಮೂಲಕ ಹೊಸ ಜೀವನವನ್ನು ನೀಡಲು ಸಾಧ್ಯವಾಗಿದೆ. ಕ್ಯಾನ್ಸರ್ ರೋಗದಲ್ಲಿ ಮತ್ತೆ ಗೆಡ್ಡೆ ಬೆಳೆಯುವ ಸಾಧ್ಯತೆ ಇರುವುದರಿಂದ ಮುಂದೆ ಮತ್ತೆ ಯುವತಿಗೆ ರೇಡಿಯೋ ತೆರಪಿ ಒದಗಿಸಬೇಕಾಗುತ್ತದೆ. ಪ್ರಸಕ್ತ ಶಸ್ತ್ರ ಚಿಕಿತ್ಸೆಗಾಗಿ ಸುಮಾರು 2 ಲಕ್ಷ ರೂ. ವೆಚ್ಚವಾಗಿದೆ ಎಂದು ಡಾ. ಜಲಾಲುದ್ದೀನ್ ತಿಳಿಸಿದರು.


ಗೋಷ್ಠಿಯಲ್ಲಿ ಡಾ. ಇಮ್ತಿಯಾಝ್, ಡಾ. ಅಭಿಷೇಕ್, ಡಾ. ದೇವಾನಂದ ಶೆಟ್ಟಿ, ಕಾಸಿಂ ಹಾಗೂ ಭಾಸ್ಕರ ಅರಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X