Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ;ಹಸ್ತಪ್ರತಿಗಳು ಜಗತ್ತಿನ...

ಉಡುಪಿ;ಹಸ್ತಪ್ರತಿಗಳು ಜಗತ್ತಿನ ಜ್ಞಾನದೇಗುಲದ ಆಸ್ತಿ: ಡಾ.ಜೋಯಿಸ

ವಾರ್ತಾಭಾರತಿವಾರ್ತಾಭಾರತಿ3 Feb 2016 5:14 PM IST
share
ಉಡುಪಿ;ಹಸ್ತಪ್ರತಿಗಳು ಜಗತ್ತಿನ ಜ್ಞಾನದೇಗುಲದ ಆಸ್ತಿ: ಡಾ.ಜೋಯಿಸ

ಉಡುಪಿ, ಫೆ.3: ಹಸ್ತಪ್ರತಿಗಳು ಜಗತ್ತಿನ ಜ್ಞಾನದೇಗುಲದ ಆಸ್ತಿ. ಇವುಗಳ ವಿವರಗಳನ್ನೊಳಗೊಂಡ ಕೆಟಲಾಗ್ ಅಧ್ಯಯನಾದಿಗಳ ಸಂಪತ್ತು. ಇವುಗಳ ಸಂರಕ್ಷಣೆ, ಅಲಭ್ಯ ಪ್ರತಿಗಳ ಮುದ್ರಣ ಸರಕಾರ ಹಾಗೂ ವಿಶ್ವವಿದ್ಯಾನಿಲಯಗಳ ಆದ್ಯ ಕರ್ತವ್ಯ ಎಂದು ಹಿರಿಯ ವಿದ್ವಾಂಸ ಕೆಳದಿಯ ಡಾ.ಕೆಳದಿ ಗುಂಡಾ ಜೋಯಿಸ ಅವರು ಹೇಳಿದ್ದಾರೆ.

ಹಂಪಿ ಕನ್ನಡ ವಿವಿಯ ಹಸ್ತಪ್ರತಿ ಶಾಸ್ತ್ರ ವಿಭಾಗ ಹಾಗೂ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಜಂಟಿ ಆಶ್ರಯದಲ್ಲಿ ಇಂದಿಲ್ಲಿ ಪ್ರಾರಂಭಗೊಂಡ ನಾಲ್ಕು ದಿನಗಳ ಹಸ್ತಪ್ರತಿ ತರಬೇತಿ ಮತ್ತು ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಸ್ತಪ್ರತಿಗಳ ಸಂಶೋಧನೆ ತುಂಬಾ ಕ್ಲಿಷ್ಟಕರವಾದುದು. ಇದಕ್ಕೆ ತಾಳ್ಮೆ, ವಿದ್ವತ್, ಆರ್ಥಿಕ ಸೌಲಭ್ಯಗಳ ಅಗತ್ಯತೆ ಇದೆ ಎಂದ ಡಾ.ಜೋಯಿಸ ಕನ್ನಡ ಹಸ್ತಪ್ರತಿಗಳ ಅಧ್ಯಯನಕ್ಕೆ ಸ್ವಾತಂತ್ರಪೂರ್ವದಲ್ಲಿ ಅನ್ಯಭಾಷಿಗರನ್ನು ನೇಮಿಸಿದ್ದು ವಿಪರ್ಯಾಸ. ಇದರಿಂದ ಆಗಿನ ಕಾಲದ ಸಂಶೋಧನೆಗಳಲ್ಲಿ ಅನೇಕ ತಪ್ಪುಗಳು ನುಸುಳಿವೆ ಎಂದು ವಿವರಿಸಿದರು.

ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ಹೆರಂಜೆ ಕೃಷ್ಣ ಭಟ್ ಸ್ವಾಗತಿಸಿದರೆ, ಶಿಬಿರದ ನಿರ್ದೇಶಕ ಡಾ.ಎಸ್.ಎಸ್. ಅಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಹಂಪಿ ಕನ್ನಡ ವಿವಿ ಹಸ್ತಪ್ರತಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಫ್.ಟಿ. ಹಳ್ಳಿಕೇರಿ ಶಿಬಿರದ ಕುರಿತು ವಿವರಗಳನ್ನು ನೀಡಿದರು. ಸಂಶೋಧಕರಾದ ಪ್ರೊ.ಸುರೇಶ್ ರೈ ವಂದಿಸಿದರೆ, ಲತಾ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

ಬಾಕ್ಸ್ ಮಾಡಿ

ಪೂರ್ವಾಗ್ರಹಪೀಡಿತ ಸಂಶೋಧನೆ ಬೇಡ

ಪೂರ್ವಾಗ್ರಹಪೀಡಿತ ಸಂಶೋಧನೆ, ವೈಜ್ಞಾನಿಕ ಸಂಶೋಧನೆಗೆ ತುಂಬಾ ಅಪಾಯಕಾರಿಯಾದುದು. ಜ್ಞಾನ ಭಂಡಾರದ ಸಂಪತ್ತು ಹಸ್ತಪ್ರತಿಗಳಲ್ಲಿದೆ. ಇವುಗಳಲ್ಲಿ ವೇದ, ಪುರಾಣ, ಇತಿಹಾಸ, ಗಣಿತ, ಬೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಶಾಸ್ತ್ರ, ಸಸ್ಯಶಾಸ್ತ್ರ, ಲೋಹಶಾಸ್ತ್ರ, ಕಾವ್ಯ ಮುಂತಾದವು ಉಪಲಬ್ಧವಿವೆ ಎಂದು ಡಾ.ಗುಂಡಾ ಜೋಯಿಸ ಹೇಳಿದರು.

ಋಷಿಗಳ ವೈಜ್ಞಾನಿಕ ಜ್ಞಾನಭಂಡಾರಗಳನ್ನು ಪ್ರಶ್ನಿಸಲು ನಾವು ಅನರ್ಹರೆಂದೇ ಹೇಳಬಹುದು. ಪೂರ್ವಾಗ್ರಹಗಳಿಲ್ಲದ ಅವರ ಜ್ಞಾನವು ಜಗತ್ತಿನ ಶಾಂತಿಗೆ ಮೀಸಲಾಗಿದ್ದು, ಇವುಗಳನ್ನು ಪ್ರಾಚೀನ ಹಸ್ತಪ್ರತಿಗಳಲ್ಲಿ ಕಾಣಬಹುದು. ಇವುಗಳ ರಕ್ಷಣೆ ಹೊಣೆಗಾರಿಕೆ ನಮ್ಮ ಮೇಲಿದೆ ಎಂದವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X