Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಕ್ವಾರ್ಟರ್ ಫೈನಲ್:ಹೆರ್ವಾಡ್ಕರ್...

ರಣಜಿ ಕ್ವಾರ್ಟರ್ ಫೈನಲ್:ಹೆರ್ವಾಡ್ಕರ್ ಶತಕ ; ಮುಂಬೈ 303/6

ವಾರ್ತಾಭಾರತಿವಾರ್ತಾಭಾರತಿ3 Feb 2016 11:47 PM IST
share

  ಮೈಸೂರು, ಫೆ.3: ಆರಂಭಿಕ ದಾಂಡಿಗ ಅಖಿಲ್ ಹೆರ್ವಾಡ್ಕರ್ ಶತಕ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ಸಹಾಯದಿಂದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ.

 ಇಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಮುಂಬೈ ತಂಡ ದಿನದಾಟದಂತ್ಯಕ್ಕೆ 90 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 303 ರನ್ ಗಳಿಸಿದೆ.

 ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ತಂಡ 6 ಓವರ್‌ಗಳಲ್ಲಿ 21 ರನ್‌ಗೆ 1 ವಿಕೆಟ್ ಕಳೆದುಕೊಂಡಿತು. ಹೆರ್ವಾಡ್ಕರ್ ಜೊತೆ ಇನಿಂಗ್ಸ್ ಆರಂಭಿಸಿದ ಜೈ ಬಿಸ್ತಾ 9 ರನ್ ಗಳಿಸಿ ಜಸ್‌ಕರಣ್ ಸಿಂಗ್ ದಾಳಿಯನ್ನು ಎದುರಿಸಲಾರದೆ ಪೆವಿಲಿಯನ್ ಸೇರಿದರು.

 ಆಗ ಜೊತೆಯಾದ ಶ್ರೇಯಸ್ ಅಯ್ಯರ್ ಮತ್ತು ಹೆರ್ವಾಡ್ಕರ್ ಬ್ಯಾಟಿಂಗ್ ಮುಂದುವರಿಸಿದರು. ಈ ಜೋಡಿ 2ನೆ ವಿಕೆಟ್‌ಗೆ 70 ರನ್ ಜೊತೆಯಾಟ ನಡೆಸಿ ತಂಡದ ಸ್ಕೋರ್‌ನ್ನು 23.5 ಓವರ್‌ಗಳಲ್ಲಿ 91ಕ್ಕೆ ತಲುಪಿಸಿದರು. 45 ರನ್ ಗಳಿಸಿದ ಅಯ್ಯರ್ ಅವರು ಎಲ್‌ಬಿಡಬ್ಲು ಬಲೆಗೆ ಬಿದ್ದರು.

ಮೂರನೆ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಮತ್ತು ಹೆರ್ವಾಡ್ಕರ್ 136 ರನ್‌ಗಳ ಜೊತೆಯಾಟ ನೀಡಿ ತಂಟಡದ ಸ್ಕೋರನ್ನು 200ರ ಗಡಿ ದಾಟಿಸಿದರು.

ಯಾದವ್ ಕೇವಲ 70 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್‌ಗಳ ಸಹಿತ 75 ರನ್ ಗಳಿಸಿ ಔಟಾದರು. ಬಳಿಕ ತಂಡದ ಮೂರು ವಿಕೆಟ್‌ಗಳು ಬೇಗನೆ ಉರುಳಿತು.ಸಿದ್ದೇಶ್ ಲಾಡ್(16), ನಾಯಕ ಅಭಿಷೇಕ್ ನಾಯರ್(25), ಧವಳ್ ಕುಲಕರ್ಣಿ (11) ನಿರ್ಗಮಿಸಿದರು. ಈ ನಡುವೆ ಹೆರ್ವಾಡ್ಕರ್ ಶತಕ ಪೂರ್ಣಗೊಳಿಸಿದರು.

ನಾಲ್ಕನೆ ಪ್ರಥಮ ದರ್ಜೆ ಶತಕ ಪೂರ್ಣಗೊಳಿಸಿದ ಹೆರ್ವಾಡ್ಕರ್ 287 ನಿಮಿಷಗಳ ಬ್ಯಾಟಿಂಗ್‌ನಲ್ಲಿ 217 ಎಸೆತಗಳನ್ನು ಎದುರಿಸಿದರು. 12 ಬೌಂಡರಿಗಳ ನೆರವಿನಿಂದ 107 ರನ್ ಗಳಿಸಿ ಔಟಾದರು.

ಯಾದವ್ ನಿರ್ಗಮನದ ಬೆನ್ನಿಗೆ ಮುಂಬೈ ಕ್ಷಿಪ್ರವಾಗಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿತು. ಒಂದು ಹಂತದಲ್ಲಿ 2 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿದ್ದ ಮುಂಬೈ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳ ನಷ್ಟಕ್ಕೆ 303 ರನ್ ಗಳಿಸಿತು. ಸಂಕ್ಷಿಪ್ತ ಸ್ಕೋರ್ ವಿವರ

ಮುಂಬೈ ಮೊದಲ ಇನಿಂಗ್ಸ್ 90 ಓವರ್‌ಗಲ್ಲಿ 303/6( ಅಖಿಲ್ ಹೆರ್ವಾಡ್ಕರ್107, ಶ್ರೇಯಸ್ ಅಯ್ಯರ್45, ಸೂರ್ಯಕುಮಾರ್ ಯಾದವ್ 75; ಜಸ್‌ಕರಣ್ ಸಿಂಗ್ 2-57, ನದೀಮ್ 2-96).

ಸೌರಾಷ್ಟ್ರ ಮೇಲುಗೈ:ಮಿಂಚಿದ ಉನದ್ಕಟ್, ವಿಶಾಖಪಟ್ಟಣ, ಫೆ.3: ಜಯದೇವ್ ಉನದ್ಕಟ್ ಪಡೆದ ಐದು ವಿಕೆಟ್ ಗೊಂಚಲುಗಳ ನೆರವಿನಿಂದ ಸೌರಾಷ್ಟ್ರ ತಂಡ ವಿದರ್ಭ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ ಕೇವಲ 151 ರನ್‌ಗೆ ಆಲೌಟ್ ಮಾಡಿದೆ.

ಉನದ್ಕಟ್(5-70) ದಾಳಿಗೆ ಸಿಲುಕಿದ ವಿದರ್ಭ ತಂಡ 50.4 ಓವರ್‌ಗಳಲ್ಲಿ 151 ರನ್‌ಗೆ ಆಲೌಟಾಯಿತು. ದಿನದಾಟದಂತ್ಯಕ್ಕೆ ಸೌರಾಷ್ಟ್ರ 1 ವಿಕೆಟ್‌ಗೆ 70 ರನ್ ಗಳಿಸಿತ್ತು. ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ 71 ಎಸೆತಗಳಲ್ಲಿ 9 ಬೌಂಡರಿಗಳ ಸಹಿತ ಔಟಾಗದೆ 45 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X