Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮರನ್ನು ಭಯೋತ್ಪಾದಕರೆಂದು...

ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸುವಲ್ಲಿ ಮಾಧ್ಯಮಗಳದ್ದು ಪ್ರಮುಖ ಪಾತ್ರ: ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ3 Feb 2016 11:52 PM IST
share
ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸುವಲ್ಲಿ ಮಾಧ್ಯಮಗಳದ್ದು ಪ್ರಮುಖ ಪಾತ್ರ: ಅಧ್ಯಯನ

ನ್ಯೂಯಾರ್ಕ್,ಫೆ.3: ತಮ್ಮ ವರದಿಗಳ ಮೂಲಕ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಧ್ಯಯನವೊಂದು ಬೆಟ್ಟು ಮಾಡಿದೆ.
ಮುಸ್ಲಿಮ್ ವಿರೋಧಿ ವರದಿಗಳಿಗೆ ಹೆಚ್ಚು ತೆರೆದುಕೊಳ್ಳುವುದು ಮುಸ್ಲಿಮರು ಸ್ವಭಾವತಃ ಹಿಂಸಾ ಪ್ರವೃತ್ತಿಯವರು ಎಂಬ ಗ್ರಹಿಕೆ ಜನರಲ್ಲಿ ಬೆಳೆಯುವಂತೆ ಮಾಡುತ್ತಿದೆ ಎಂದು ಅಧ್ಯಯನ ಹೇಳಿದೆ.
ಕಠಿಣ ಮುಸ್ಲಿಮ್ ವಿರೋಧಿ ನಿಲುವನ್ನು ತಳೆಯುವ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಗಳಿಗೆ ಹೆಚ್ಚಿನ ಬೆಂಬಲ ಲಭಿಸಲಿದೆ ಎಂದು ಅಮೆರಿಕದ ಲೋವಾ ಸ್ಟೇಟ್ ವಿವಿಯ ಸಂಶೋಧಕರು ನಡೆಸಿರುವ ಸರಣಿ ಅಧ್ಯಯನಗಳು ಭವಿಷ್ಯ ನುಡಿದಿವೆ.

ರಾಜಕೀಯ ಮಡಿವಂತರು ಮತ್ತು ತಮ್ಮ ‘ಸಹ ಅಮೆರಿಕನ್’ರೊಂದಿಗೆ ಹೆಚ್ಚು ಪ್ರಬಲವಾಗಿ ಗುರುತಿಸಿಕೊಳ್ಳುವ ಜನರು ಮುಸ್ಲಿಮ್ ರಾಷ್ಟ್ರಗಳ ವಿರುದ್ಧ ಯುದ್ಧ ಮತ್ತು ಮುಸ್ಲಿಮ್ ಅಮೆರಿಕನ್ನರ ಸಾಮಾಜಿಕ ನಿರ್ಬಂಧಕ್ಕೆ ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಾರೆ ಎನ್ನುವುದನ್ನು ಅಧ್ಯಯನವು ಬಹಿರಂಗಗೊಳಿಸಿದೆ. ಆದರೆ ಮುಸ್ಲಿಮ್ ಅಮೆರಿಕನ್ನರ ಕುರಿತು ಧನಾತ್ಮಕ ವರದಿಗಳು ಮುಸ್ಲಿಮರು ಆಕ್ರಮಣಶೀಲರು ಎನ್ನುವ ಭಾವನೆಯನ್ನು ತಗ್ಗಿಸುವಲ್ಲಿ ನೆರವಾಗುತ್ತವೆ ಎನ್ನುವುದನ್ನು ಅಧ್ಯಯನವು ಕಂಡುಕೊಂಡಿದೆ. ಮುಸ್ಲಿಮ್ ಅಮೆರಿಕನ್ನರ ಬಗ್ಗೆ ಧನಾತ್ಮಕ ವರದಿಗಳನ್ನು ಪ್ರಕಟಿಸುವ ಮೂಲಕ ಪತ್ರಕರ್ತರು ಸಕ್ರಿಯ ಬದಲಾವಣೆಯನ್ನು ಮಾಡಬಹುದು. ಮುಸ್ಲಿಮ್ ಸಂಬಂಧಿತ ಭಯೋತ್ಪಾದಕ ದಾಳಿಗಳ ಬಗ್ಗೆ ವರದಿ ಮಾಡುವಾಗ ವರದಿಗಾರರು ಇಂತಹ ಕೃತ್ಯಗಳಿಗೆ ತಮ್ಮ ವಿರೋಧದ ಬಗ್ಗೆ ಮುಸ್ಲಿಮ್ ಅಮೆರಿಕನ್ನರೊಂದಿಗೆ ಮಾತನಾಡಿ ಅವರ ಅಭಿಪ್ರಾಯಗಳನ್ನು ಬರೆಯಬೇಕು ಎಂದು ಅಧ್ಯಯನವು ಹೇಳಿದೆ. ಅಲ್ಲದೆ ಮುಸ್ಲಿಮ್ ಅಮೆರಿಕನ್ನರೂ ಇಂತಹ ಭಯೋತ್ಪಾದನೆಯ ವಿರುದ್ಧ ಮೈಚಳಿ ಬಿಟ್ಟು ಮಾತನಾಡುವ ಮೂಲಕ ಮುಸ್ಲಿಮರ ಕುರಿತ ನಕಾರಾತ್ಮಕ ಭಾವನೆಯನ್ನು ನಿವಾರಿಸಲು ನೆರವಾಗಬಹುದಾಗಿದೆ ಎಂದು ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X