Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ : ಕುಮ್ಕಿ ಹಕ್ಕು-ಡಿಸಿಗೆ ನೀಡಿದ...

ಸುಳ್ಯ : ಕುಮ್ಕಿ ಹಕ್ಕು-ಡಿಸಿಗೆ ನೀಡಿದ ಅಧಿಕಾರ ಹಿಂದಕ್ಕೆ ಪಡೆಯಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Feb 2016 5:48 PM IST
share

ಫೆಬ್ರವರಿ 10ರಂದು ಸುಳ್ಯದಲ್ಲಿ ರೈತರ ಸಭೆ

ಸುಳ್ಯ: ಕಾನ, ಬಾಣೆ, ಕುಮ್ಕಿ ಹಕ್ಕಿನ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದ ಅಧಿಕಾರವನ್ನು ರದ್ದು ಮಾಡಬೇಕು ಹಾಗೂ ಜಮೀನನ್ನು ರೈತರ ಕೈಯಿಂದ ವಶಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿ ಹೋರಾಟ ರೂಪಿಸುವ ಸಲುವಾಗಿ ರೈತರ ಸಭೆ ಫೆಬ್ರವರಿ 10ರಂದು ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರಿನ ಭಾರತೀಯ ಕಿಸಾನ್ ಸಂಘದ ಕುಮ್ಕಿ ಹಕ್ಕು ಹೋರಾಟ ಸಮಿತಿಯ ಮುಖಂಡ ಎಂ.ಜಿ.ಸತ್ಯನಾರಾಯಣ, ಫೆ.10ರಿಂದ 17ರವರಗೆ ಜಿಲ್ಲೆಯ ವಿವಿಧೆಡೆ ರೈತರ ಸಭೆಗಳನ್ನು ಆಯೋಜಿಸಿದ್ದು, ಕುಮ್ಕಿ ಜಮೀನು ಹೊಂದಿರುವ ರೈತರು ಇದರಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಕುಮ್ಕಿ ಹಕ್ಕನ್ನು ರದ್ದು ಮಾಡಿ ಕಡಬ ಹಾಗೂ ಉಪ್ಪಿನಂಗಡಿಯಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳು ಭೂಸ್ವಾಧೀನಕ್ಕೆ ನೋಟೀಸ್ ನೀಡಲು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ಕುರಿತು ಎಲ್ಲಾ ರೈತರು ತೀವ್ರವಾದ ಹೋರಾಟವನ್ನು ನಡೆಸುವ ಅಗತ್ಯವಿದೆ. 1885ರಿಂದ 2004ರವರೆಗೆ ಕುಮ್ಕಿ ಜಮೀನು ರೈತರ ಹೆಸರಿನಲ್ಲಿದ್ದು, ಅದಕ್ಕೆ ಅವರು ತೆರಿಗೆಯನ್ನೂ ಪಾವತಿಸುತ್ತಿದ್ದರು. ಆ ಬಳಿಕ ತೆರಿಗೆ ಸ್ವೀಕರಿಸುವುದನ್ನು ಸರ್ಕಾರ ಸ್ಥಗಿತಗೊಳಿಸಿ ಆರ್‌ಟಿಸಿಯಲ್ಲಿ ಸರ್ಕಾರದ ಜಮೀನು ಎಂದು ನಮೂದಿಸಿದೆ. ಈ ಜಮೀನನ್ನು ಅಕ್ರಮ ಸಕ್ರಮದಲ್ಲಿ ವಿತರಿಸುತ್ತಿದೆ. ತೆರಿಗೆ ಕಟ್ಟಿದ ಅದರ ಹಕ್ಕುದಾರರಿಗೆ ನೀಡದೇ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದವರು ಆರೋಪಿಸಿದರು.

ಸುಳ್ಯ ತಾಲೂಕಿನಲ್ಲಿ 2,11,386 ಎಕರೆ ಕುಮ್ಕಿ ಜಮೀನಿದ್ದು, 10,746 ಫಲಾನುಭವಿಗಳಿದ್ದಾರೆ. ಹಲವರು ಒಂದು ಎಕರೆಗೂ ಕಡಿಮೆ ವರ್ಗ ಜಮೀನು ಹೊಂದಿದ್ದು, 5ರಿಂದ 10 ಎಕರೆ ಕುಮ್ಕಿ ಜಮೀನು ಹೊಂದಿದ್ದಾರೆ. 50 ಎಕರೆಗಿಂತ ಹೆಚ್ಚು ಕುಮ್ಕಿ ಜಮೀನು ಹೊಂದಿರುವ ಬೆರಳೆಣಿಕೆಯ ರೈತರು ಮಾತ್ರ ಇದ್ದಾರೆ. ಕನಿಷ್ಠ 10 ಎಕರೆ ಕುಮ್ಕಿ ಜಮೀನನ್ನು ರೈತರ ಹೆಸರಿಗೆ ಖಾತೆ ಮಾಡಿಸಿ ಹೆಚ್ಚುವರಿ ಜಮೀನನ್ನು ಸರ್ಕಾರ ಸ್ವಾಧೀನ ಪಡಿಸಲು ರೈತರ ಒಪ್ಪಿಗೆ ಇದೆ. ಈ ಕುರಿತು ಹಲವು ಬಾರಿ ಸರ್ಕಾರದೊಂದಿಗೆ ಮಾತುಕತೆ ನಡೆದರೂ ರೈತರ ಲಾಭಿ ಅಲ್ಲಿ ಕೆಲಸ ಮಾಡಲಿಲ್ಲ ಎಂದವರು ಹೇಳಿದರು.

ಮುಂದಿನ ಬಜೆಟ್‌ನಲ್ಲಿ ರಬ್ಬರ್‌ಗೆ ಬೆಂಬಲ ಬೆಲೆ ಘೋಷಿಸಲು ಹಣವನ್ನು ಕಾಯ್ದಿಡುವಂತೆ ಸಮಿತಿ ಮುಖಂಡ ಅಡ್ಡಂತಡ್ಕ ದೇರಣ್ಣ ಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಕುಮ್ಕಿ ಹೋರಾಟ ಸಮಿತಿಯ ರಾಮಚಂದ್ರ ನೆಕ್ಕಿಲ, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಸುಬ್ರಾಯ, ರೈತ ಮುಖಂಡ ವಸಂತ ಭಟ್ ತೊಡಿಕಾನ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X