Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಪೊಲೀಸ್ ಮತ್ತು ಮಾಧ್ಯಮದ...

ಮೂಡುಬಿದಿರೆ: ಪೊಲೀಸ್ ಮತ್ತು ಮಾಧ್ಯಮದ ನಡುವೆ ಸೌಹಾರ್ದಯುತ ಸಂಬಂಧ ಬೇಕು, ಎಸ್.ಐ. ಅನಂತ ಪದ್ಮನಾಭ

ವಾರ್ತಾಭಾರತಿವಾರ್ತಾಭಾರತಿ4 Feb 2016 6:03 PM IST
share
ಮೂಡುಬಿದಿರೆ: ಪೊಲೀಸ್ ಮತ್ತು ಮಾಧ್ಯಮದ ನಡುವೆ ಸೌಹಾರ್ದಯುತ ಸಂಬಂಧ ಬೇಕು, ಎಸ್.ಐ. ಅನಂತ ಪದ್ಮನಾಭ

ಆಳ್ವಾಸ್ ಅಭಿವ್ಯಕ್ತಿ ಮೀಡಿಯಾ ಕ್ಲಬ್‌ನಲ್ಲಿ ಎಸ್.ಐ. ಅನಂತ ಪದ್ಮನಾಭ ಅಭಿಮತ

ಮೂಡುಬಿದಿರೆ : ಇಂದು ದೃಶ್ಯ ಹಾಗೂ ಪ್ರಿಂಟ್ ಮಾಧ್ಯಮಗಳು ತೀವ್ರ ಪೈಪೋಟಿಯ ಕ್ಷೇತ್ರವಾಗಿ ಬೆಳೆಯುತ್ತಿದೆ. ಇಂದು ಏನೇ ಘಟನೆ ನಡೆದರೂ ಜನರು ಮೊದಲು ಮಾಹಿತಿ ನೀಡುವುದು ಮಾಧ್ಯಮಕ್ಕೆಯೇ ಹೊರತು ಪೋಲೀಸ್‌ಗಲ್ಲ. ಕೆಲವು ಸಂದರ್ಭಗಳಲ್ಲಿ ಕಾನೂನು ಕ್ರಮಗಳು ಪೂರ್ಣಗೊಳ್ಳುವವರೆಗೂ ಮಾಧ್ಯಮದವರು ಕಾಯಬೇಕಾಗುತ್ತದೆ. ಇಲ್ಲದಿದ್ದರೆ ಮುಖ್ಯವಾದ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆಯಿರುತ್ತದೆ ಆದ್ದರಿಂದ ಪೋಲೀಸ್ ಮತ್ತು ಮಾಧ್ಯಮದ ನಡುವೆ ಸೌಹಾರ್ದಯುತ ಸಂಬಂಧ ಅಗತ್ಯವಾಗಿ ಬೇಕು ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಹೇಳಿದರು.   ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ‘ಅಭಿವ್ಯಕ್ತಿ’ ಮೀಡಿಯಾ ಕ್ಲಬ್ ವತಿಯಿಂದ ಗುರುವಾರ ನಡೆದ ‘ಮಾಧ್ಯಮ ಮತ್ತು ಪೋಲೀಸ್’ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಅನೇಕ ಬಾರಿ ಮಧ್ಯಮಗಳಿಗೆ ಮುಂಚಿತವಾಗಿ ಮಾಹಿತಿ ಲಭ್ಯವಾಗುತ್ತದೆ. ಯಾವುದೇ ಪ್ರಥಮ ಮಾಹಿತಿ ಮಾಧ್ಯಮಕ್ಕೆ ದೊರೆತಾಗ ಅದನ್ನು ಎಲ್ಲಾ ವಿಧದಿಂದಲೂ ಪರಿಶೀಲಿಸಿ ಸಮಾಜಕ್ಕೆ ನೀಡುವುದು ಮಾಧ್ಯಮದ ಕೆಲಸ. ವೇಗವಾಗಿ ಸುದ್ಧಿ ನೀಡುವ ಒತ್ತಡದಿಂದಾಗಿ ತಪ್ಪು ಸುದ್ದಿಗಳು ಮಾಧ್ಯಮದಲ್ಲಿ ಪ್ರಕಟಗೊಂಡರೆ ಸಂಘರ್ಷಗಳಿಗೆ ಕಾರಣವಾಗಬಹುದು ಆದ್ದರಿಂದ ಯಾವುದೇ ಮಾಹಿತಿಯನ್ನು ಪೊಲೀಸರಲ್ಲಿ ಪರಿಶೀಲನೆ ನಡೆಸಿ ಸಮಾಜಕ್ಕೆ ನೀಡುವ ಮೂಲಕ ಪೊಲೀಸರಿಗೆ ಸಹಕಾರ ನೀಡುವ ಅಗತ್ಯವಿದೆ ಎಂದರು.  ನಂತರದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಕೇಸುಗಳೆಂದರೇನು, ಸಿವಿಲ್ ಕೇಸುಗಳು ಯಾವ ರೀತಿಯಾಗಿ ಕ್ರಿಮಿನಲ್ ಕೇಸುಗಳಾಗಿ ಮಾರ್ಪಾಡಾಗುತ್ತವೆ ಎಂಬುದರ ಬಗ್ಗೆ, ಆರ್‌ಟಿಐ ಕಾಯಿದೆ, ನ್ಯಾಯಾಂಗ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗಳು, ಸುರಕ್ಷತಾ ಕ್ರಮಗಳಲ್ಲಿ ಪೊಲೀಸರ ಕರ್ತವ್ಯದ ಬಗ್ಗೆ, ರಾಜಕೀಯಗಳಿಂದಾಗುವ ತೊಂದರೆಗಳು ಮುಂತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ ಅನಂತ ಪದ್ಮನಾಭ ಅವರು ಪೋಲೀಸ್ ಮತ್ತು ಮಾಧ್ಯಮ ವ್ಯವಸ್ಥೆಗಳಿಗೆ ಸಂಬಂಧಿಸಿದ  ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು.

 ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಮೌಲ್ಯ ಜೀವನ್‌ರಾಂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಸಂಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಶ್ರೀನಿವಾಸ ಪೆಜತ್ತಾಯ ವಂದಿಸಿದರು.

ವರ್ಷದ 365 ದಿನವೂ ಕೆಲಸ ಮಾಡುವ ಏಕೈಕ ವಿಭಾಗವೆಂದರೆ ಅದು ಪೋಲೀಸ್ ವಿಭಾಗ. ಅತೀ ಕಡಿಮೆ ಭ್ರಷ್ಟಾಚಾರ ಇರುವುದು ಕೂಡ ಪೋಲೀಸ್ ಇಲಾಖೆಯಲ್ಲಿ. ಆದರೂ ಜನ ಪೋಲೀಸ್ ಇಲಾಖೆಯನ್ನು ತಪ್ಪಾಗಿ ತಿಳಿಯುವ ಸಾಧ್ಯತೆಯಿದೆ. ಇಂದು ಸಾರ್ವಜನಿಕರು ಹಾಗೂ ಪೋಲೀಸ್ ಮಧ್ಯೆ ದೊಡ್ಡ ಕಂದಕವೇರ್ಪಟ್ಟಿದೆ. ಇದಕ್ಕೆ ಬಹುರ್ಶ ಇಲಾಖೆಯಲ್ಲಿನ ಒತ್ತಡಗಳೂ ಕಾರಣವಾಗಿದ್ದಿರಬಹುದು ಎಂದು ಅನಂತ ಪದ್ಮನಾಭ ವಿಷಾದ ವ್ಯಕ್ತಪಡಿಸಿದ ಅವರು ಸಿನೆಮಾ ಅಥವಾ ದಾರವಾಹಿಗಳಲ್ಲಿ ತೋರಿಸುವ ಪೊಲೀಸರಿಗೂ, ನಿಜವಾಗಿ ಕರ್ತವ್ಯದಲ್ಲಿ ನಿರತರಾಗಿರುವ ಪೊಲೀಸರಿಗೂ ತುಂಬಾ ವ್ಯತ್ಯಾಸವಿದೆ ಇದನ್ನು ತಾವೆಲ್ಲರೂ ತಿಳಿಯಬೇಕಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X