Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲೋಧಾ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು:...

ಲೋಧಾ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು: ಬಿಸಿಸಿಐಗೆ ಸುಪ್ರೀಂ ತಾಕೀತು

ವಾರ್ತಾಭಾರತಿವಾರ್ತಾಭಾರತಿ4 Feb 2016 6:36 PM IST
share
ಲೋಧಾ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು: ಬಿಸಿಸಿಐಗೆ ಸುಪ್ರೀಂ ತಾಕೀತು

ಹೊಸದಿಲ್ಲಿ, ಫೆ.4: ಭಾರತೀಯ ಕ್ರಿಕೆಟ್ ಮಂಡಳಿಯಲ್ಲಿ ಸಮಗ್ರ ಬದಲಾವಣೆಗೆ ಜಸ್ಟಿಸ್ ಆರ್.ಎಂ. ಲೋಧಾ ಸಮಿತಿಯು ಮಾಡಿರುವ ಶಿಫಾರಸನ್ನು ಬಿಸಿಸಿಐ ಸ್ವೀಕರಿಸಬೇಕು ಹಾಗೂ ಅದನ್ನು ಜಾರಿಗೆ ತರಬೇಕು ಎಂದು ಸುಪ್ರೀಂಕೋರ್ಟ್ ಗುರುವಾರ ತಾಕೀತು ಮಾಡಿದೆ.

ಲೋಧಾ ಸಮಿತಿಯ ಶಿಫಾರಸು ನಮಗೆ ತೃಪ್ತಿ ನೀಡಿದ್ದು, ಅದು ನೇರ, ವಿವೇಚನಾಯುಕ್ತ, ಮನದಟ್ಟಾಗುವ ಹಾಗೂ ಗೌರವಕ್ಕೆ ಅರ್ಹವಾಗಿದೆ. ಕಾನೂನು ತಜ್ಞರ ಸಮಿತಿಯ ಶಿಫಾರಸನ್ನು ನಿರಾಕರಿಸಲು ಯಾವುದೇ ಕಾರಣಗಳು ಇಲ್ಲ. ಬಿಸಿಸಿಐ ಈ ವರದಿಯನ್ನು ಸ್ವೀಕರಿಸುವ ಜೊತೆಗೆ ಅದನ್ನು ಜಾರಿಗೊಳಿಸಬೇಕು. ನಿಮಗೆ ಇದನ್ನು ಜಾರಿಗೆ ತರಲು ಕಷ್ಟವಾದರೆ, ನಾವು ಲೋಧಾ ಸಮಿತಿಯ ಮೂಲಕವೇ ಇದನ್ನು ನಿಮಗಾಗಿ ಜಾರಿಗೆ ತರುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಜಸ್ಟಿಸ್ ಟಿಎಸ್ ಠಾಕೂರ್ ಹಾಗೂ ಜಸ್ಟಿಸ್ ಇಬ್ರಾಹೀಂ ಕಲೀಫುಲ್ಲಾ ಅವರಿದ್ದ ದ್ವಿಸದಸ್ಯ ಪೀಠ ಬಿಸಿಸಿಐಗೆ ಖಡಕ್ ಎಚ್ಚರಿಕೆ ನೀಡಿದೆ. ಲೋಧಾ ಸಮಿತಿಯ ಶಿಫಾರಸನ್ನು ಜಾರಿ ತರುವ ಸಂಬಂಧ ಪ್ರತಿಕ್ರಿಯೆ ನೀಡಲು ಬಿಸಿಸಿಐಗೆ ನ್ಯಾಯ ಪೀಠವು ಮಾ.3ರ ತನಕ ಕಾಲಾವಕಾಶ ನೀಡಿದೆ.

ಲೋಧಾ ಸಮಿತಿ ಅಂತಿಮ ವರದಿ ಸಲ್ಲಿಸುವ ಮೊದಲು ಎಲ್ಲರ ಅಭಿಪ್ರಾಯವನ್ನು ಪಡೆದುಕೊಂಡಿದೆ. ಆದ್ದರಿಂದ ಈ ಶಿಫಾರಸನ್ನು ಸ್ವೀಕರಿಸಲು ಯಾವುದೇ ಸಮಸ್ಯೆ ಕಾಣುತ್ತಿಲ್ಲ ಎಂದು ಟಿಎಸ್ ಠಾಕೂರ್ ನೇತೃತ್ವದ ನ್ಯಾಯಪೀಠ ಹೇಳಿದೆ.

 ಲೋಧಾ ಸಮಿತಿಯ ಶಿಫಾರಸಿಗೆ ಸಂಬಂಧಿಸಿ ಕ್ರಿಕೆಟ್ ಮಂಡಳಿಯ 30 ಸದಸ್ಯರನ್ನು ಸಂಪರ್ಕಿಸುವ ಅಗತ್ಯವಿದೆ. ಫೆ.7 ರಂದು ಕಾನೂನು ಸಮಿತಿಯ ಸಭೆ ನಡೆಸಲಿದ್ದೇವೆ. ಆದ್ದರಿಂದ ನಮಗೆ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಬಿಸಿಸಿಐನ್ನು ಪ್ರತಿನಿಧಿಸಿದ ಹಿರಿಯ ವಕೀಲ ಶೇಖರ್ ನಫಾಡೆ ನ್ಯಾಯಾಲಯವನ್ನು ಕೋರಿಕೊಂಡರು. ಬಿಸಿಸಿಐ ಲೋಧಾ ಸಮಿತಿಯ ಶಿಫಾರಸನ್ನು ಜಾರಿಗೊಳಿಸುವ ಮೂಲಕ ಸಮಸ್ಯೆಯಿಂದ ಹೊರಬರಬೇಕಾಗಿದೆ ಎಂದು ಹೇಳಿದ ನ್ಯಾಯಾಲಯ ಬಿಸಿಸಿಐಗೆ ಮಾ.3ರ ತನಕ ಉತ್ತರ ನೀಡಲು ಕಾಲಾವಕಾಶ ನೀಡಿತು.

ಐಪಿಎಲ್‌ನಲ್ಲಿ ಭುಗಿಲೆದ್ದ ಸ್ಪಾಟ್ ಫಿಕ್ಸಿಂಗ್ ಹಗರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ 2015ರಲ್ಲಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಲೋಧಾ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು. ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐನ ಆಡಳಿತ ಮಂಡಳಿಯಲ್ಲಿ ಬದಲಾವಣೆ ಮಾಡಬೇಕು. ಬಿಸಿಸಿಐ ಅನ್ನು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ಅಡಿ ತರಬೇಕು, ರಾಜಕಾರಣಿಗಳು ಹಾಗೂ ಸರಕಾರಿ ಅಧಿಕಾರಿಗಳನ್ನು ಕ್ರಿಕೆಟ್ ಮಂಡಳಿಯಿಂದ ದೂರ ಇಡಬೇಕು. ಹಗರಣದಿಂದ ಸುತ್ತುವರಿದಿರುವ ಕ್ರಿಕೆಟ್ ಮಂಡಳಿಯನ್ನು ಕಳಂಕಮುಕ್ತವಾಗಿಸಲು ಬೆಟ್ಟಿಂಗ್‌ನ್ನು ಕಾನೂನುಬದ್ಧಗೊಳಿಸಬೇಕು ಎಂದು ಜನವರಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಲೋಧಾ ಸಮಿತಿ ಶಿಫಾರಸು ಮಾಡಿತ್ತು.

ಜ.4 ರಂದು ಲೋಧಾ ಸಮಿತಿಯ ವರದಿ ಬಿಡುಗಡೆಯಾದ ಬಳಿಕ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಎಲ್ಲ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಆಂತರಿಕ ಸಭೆ ಕರೆದು ಸಮಿತಿಯ ಶಿಫಾರಸಿನ ಬಗ್ಗೆ ಚರ್ಚಿಸುವಂತೆ ಸೂಚಿಸಿದ್ದರು. ಆದರೆ, ಹೆಚ್ಚಿನ ರಾಜ್ಯ ಕ್ರಿಕೆಟ್ ಸಂಸ್ಥೆಯು ಸಲಹೆಯೊಂದಿಗೆ ಪ್ರತಿಕ್ರಿಯೆ ನೀಡಲು ಸಮಯಾವಕಾಶ ಬೇಕೆಂದು ಕೇಳಿಕೊಂಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X