Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಜಾನೆ ಲೂಟಿ ಆರೋಪಿಗೆ ನೆಹರೂ ಪ್ರಶಸ್ತಿ...

ಖಜಾನೆ ಲೂಟಿ ಆರೋಪಿಗೆ ನೆಹರೂ ಪ್ರಶಸ್ತಿ ನೀಡಿದ್ದರು!

ವಾರ್ತಾಭಾರತಿವಾರ್ತಾಭಾರತಿ5 Feb 2016 8:44 AM IST
share
ಖಜಾನೆ ಲೂಟಿ ಆರೋಪಿಗೆ ನೆಹರೂ ಪ್ರಶಸ್ತಿ ನೀಡಿದ್ದರು!

ನವದೆಹಲಿ: ಭಾರತದ ಐಎನ್‌ಎ ಖಜಾನೆಯನ್ನು ಲೂಟಿ ಮಾಡಲಾಗಿದೆ ಎಂಬ ಹಿಂದಿನ ಪ್ರತಿಪಾದನೆಯನ್ನು ಖಚಿತಪಡಿಸುವ ಪುರಾವೆಗಳು, ಇತ್ತೀಚೆಗೆ ಬಿಡುಗಡೆ ಮಾಡಲಾದ ನೇತಾಜಿ ಕುರಿತ ರಹಸ್ಯ ಕಡತಗಳಲ್ಲಿ ದೊರಕಿವೆ. 1951 ಹಾಗೂ 1955 ಅವಧಿಯಲ್ಲಿ ಟೋಕಿಯೊ ಹಾಗೂ ನವದೆಹಲಿ ನಡುವೆ ನಡೆದ ಪತ್ರ ವ್ಯವಹಾರದಿಂದ ಇದು ಬಹಿರಂಗವಾಗಿದೆ.

ಖಜಾನೆ ಲೂಟಿ ಪ್ರಕರಣ ನೆಹರೂ ಸರ್ಕಾರದ ಗಮನಕ್ಕೆ ಬಂದಿತ್ತು. ಕೇಂದ್ರ ಸರ್ಕಾರಿ ಅಧಿಕಾರಿಗಳು ಇಬ್ಬರು ನೇತಾಜಿ ಸಹಚರರ ಬಗ್ಗೆ ಅನುಮಾನ ಹೊಂದಿದ್ದರು ಎಂದು ಹೇಳಲಾಗಿದೆ.

ಇವರಲ್ಲಿ ಒಬ್ಬರನ್ನು ಪಂಚವಾರ್ಷಿಕ ಯೋಜನೆಯ ಪ್ರಚಾರ ಸಲಹೆಗಾರರಾಗಿ ನೇಂಕ ಮಾಡಲಾಗಿತ್ತು. ಸುಮಾರು 7 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಕೊಳ್ಳೆ ಹೊಡೆದ ವಿಷಯವನ್ನು ಮೊಟ್ಟಮೊದಲ ಬಾರಿಗೆ ಅನೂಜ್ ಧರ್ ತಮ್ಮ 2012ರ "ಇಂಡಿಯಾಸ್ ಬಿಗ್ಗೆಸ್ಟ್ ಕವರಪ್" ಎಂಬ ಕೃತಿಯಲ್ಲಿ ಬೆಳಕಿಗೆ ತಂದಿದ್ದರು.


1951ರ ಮೇ 21ರಂದು ಟೋಕಿಯೊ ಮಿಷನ್ ಮುಖ್ಯಸ್ಥ ಕೆ.ಕೆ.ಚೆತ್ತೂರ್ ಅವರು, ಕಾಮನ್ವೆಲ್ತ್ ಸಂಬಂಧಗಳ ಕಾರ್ಯದರ್ಶಿ ಬಿ.ಎನ್.ಚಕ್ರವರ್ತಿ ಅವರಿಗೆ ಬರೆದ ಪತ್ರದಲ್ಲಿ ಈ ಸಂಶಯ ವ್ಯಕ್ತಪಡಿಸಿದ್ದು, ಬೋಸ್ ಸಹಚರ ಹಾಗೂ ಪ್ರಚಾರ ಸಚಿವ ಎಸ್.ಎ.ಅಯ್ಯರ್ ಹಾಗೂ ಇಂಡಿಯನ್ ಇಂಡಪೆಂಡೆನ್ಸ್ ಲೀಗ್‌ನ ಟೋಕಿಯೊ ಮುಖ್ಯಸ್ಥ ಮುಂಗಾ ರಾಮಮೂರ್ತಿ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.
"ನಿಮಗೆ ಈಗಾಗಲೇ ತಿಳಿದಿರುವಂತೆ ರಾಮಮೂರ್ತಿ ವಿರುದ್ಧ ಇಂಡಿಯನ್ ಇಂಡಪೆಂಡೆನ್ಸ್ ಲೀಗ್‌ನ ನಿಧಿ ದುರ್ಬಳಕೆ ಮಾಡಿಕೊಂಡ ಆರೋಪವಿದೆ. ಜತೆಗೆ ಸುಭಾಸ್ ಅವರ ವೈಯಕ್ತಿಕ ಆಸ್ತಿಯ ವಿಚಾರದಲ್ಲೂ ಇದು ನಡೆದಿದೆ ಎಂಬ ಸಂಶಯವಿದೆ. ಅಪರೂಪದ ಪ್ರಾಚೀನ ವಸ್ತುಗಳು, ವಜ್ರದ ಆಭರಣಗಳು, ಚಿನ್ನ ಹಾಗೂ ಇತರ ಅಮೂಲ್ಯ ವಸ್ತುಗಳು ಅದರಲ್ಲಿದ್ದವು. ಸರಿಯೋ ತಪ್ಪೋ ಗೊತ್ತಿಲ್ಲ; ಅಯ್ಯರ್ ಹೆಸರೂ ಅದರಲ್ಲಿ ಸೇರಿಕೊಂಡಿದೆ" ಎಂದು ವಿವರಿಸಿದ್ದರು.


ಇದಕ್ಕೆ ಪ್ರತಿಯಾಗಿ ಕೆ.ಕೆ.ಚೆತ್ತೂರ್ ಅವರು 1951ರ ಅಕ್ಟೋಬರ್ 20ರಂದು ಪತ್ರ ಬರೆದು, ಜಪಾನ್ ಸರ್ಕಾರ ರಹಸ್ಯವಾಗಿ "ಭಾರಿ ಪ್ರಮಾಣದ ಚಿನ್ನದ ಆಭರಣಗಳು ಹಾಗೂ ಅಮೂಲ್ಯ ಹರಳುಗಳು ಸುಭಾಸ್ ಜತೆಗಿದ್ದವು. ಆದರೆ ದುರಂತಕ್ಕೀಡಾದ ವಿಮಾನದಲ್ಲಿ ಎರಡು ಸೂಟ್‌ಕೇಸ್ ಮಾತ್ರ ಒಯ್ಯಲು ಅವಕಾಶ ನೀಡಲಾಗಿದೆ" ಎಂದು ಟೋಕಿಯೊ ಮಿಷನ್‌ಗೆ ಪತ್ರ ಬರೆದಿದೆ ಎಂದು ಸ್ಪಷ್ಟಪಡಿಸಿದ್ದರು.

ಇದರ ಜತೆಗೆ ಪಕ್ಷದ ಕಡೆಯಿಂದ ಟೋಕಿಯೊ ಮಿಷನ್‌ಗೆ ಹಸ್ತಾಂತರಿಸಿದ್ದಕ್ಕಿಂತ ಭಾರಿ ಅಧಿಕ ಮೌಲ್ಯದ ವಸ್ತುಗಳು ಸುಭಾಸ್ ಬಳಿ ಇದ್ದವು ಎಂದು ವಿವರಿಸಲಾಗಿತ್ತು. ಮತ್ತೊಂದು ಪತ್ರದಲ್ಲಿ ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಾ ಭಾರತಕ್ಕೆ ಬರೆದ ಪತ್ರದಲ್ಲಿ ಅಯ್ಯರ್ ಅವರ ಚಟುವಟಿಕೆಗಳು ಅನುಮಾನಾಸ್ಪದ ಎಂದು ಸ್ಪಷ್ಟಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X