Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.7: NWF ವತಿಯಿಂದ 'ಸ್ವಾಭಿಮಾನದತ್ತ...

ಫೆ.7: NWF ವತಿಯಿಂದ 'ಸ್ವಾಭಿಮಾನದತ್ತ ದೃಢ ಹೆಜ್ಜೆಗಳು, ರಾಷ್ಟ್ರೀಯ ಸಾರಥಿಗಳಿಗೆ ಅಭಿನಂದನಾ ಸಭೆ'

ಝುಲೈಕಾಝುಲೈಕಾ5 Feb 2016 2:56 PM IST
share
ಫೆ.7: NWF ವತಿಯಿಂದ ಸ್ವಾಭಿಮಾನದತ್ತ ದೃಢ ಹೆಜ್ಜೆಗಳು, ರಾಷ್ಟ್ರೀಯ ಸಾರಥಿಗಳಿಗೆ ಅಭಿನಂದನಾ ಸಭೆ

ಮಂಗಳೂರು:  ನ್ಯಾಷನಲ್ ವುಮೆನ್ಸ್ ಫ್ರಂಟ್, ಕರ್ನಾಟಕ ವತಿಯಿಂದ ಸ್ವಾಭಿಮಾನದತ್ತ ದೃಢ ಹೆಜ್ಜೆಗಳು, ರಾಷ್ಟ್ರೀಯ ಸಾರಥಿಗಳಿಗೆ ಅಭಿನಂದನಾ ಸಭೆಯು ಫೆ.7ರಂದು ಸಂಜೆ 3.30ಕ್ಕೆ ಮಂಗಳೂರಿನ ಬಲ್ಮಠ ಸರ್ಕಲ್ ಸಮೀಪದ ಶಾಂತಿ ನಿಲಯದಲ್ಲಿ ನಡೆಯಲಿದೆ. 

ಶಾಹಿದಾ ಮಂಗಳೂರು (ಮಹಿಳಾಪರ ಹೋರಾಟಗಾರರು) ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ವುಮೆನ್ಸ್ ಇಂಡಿಯಾ ಮೂವುಮೆಂಟ್ ಇದರ ಅಧ್ಯಕ್ಷೆ ಯಾಸ್ಮಿನ್ ಫಾರೂಕಿ ರಾಜಸ್ಥಾನ್  ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನ್ಯಾಷನಲ್ ವುಮೆನ್ಸ್ ಫ್ರಂಟ್, ಕರ್ನಾಟಕ ಇದರ ಅಧ್ಯಕ್ಷೆ ಫಾತಿಮಾ ನಸೀಮಾ ಅಧ್ಯಕ್ಷತೆ ವಹಿಸುವರು. 

ಮಹಿಳಾ ಘನತೆ ಮತ್ತು ಸ್ವಾಭಿಮಾನದ ಬದುಕಿಗಾಗಿ ಹೋರಾಟಗಳು ಹಿಂದಂತಿಗಿಂತಲೂ ಹೆಚ್ಚು ದೃಢವಾಗಿರಬೇಕಾದ ಸಮಯ ಇದು, ನಮ್ಮ ಪ್ರತಿಯೊಂದು ಹೆಜ್ಜೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ದೇಶ ಸ್ವಾತಂತ್ರ್ಯಗೊಂಡು 68 ವರ್ಷ ಕಳೆದರೂ ಮಹಿಳಾ ಸಬಲೀಕರಣ ತೆವಳುತ್ತಾ ಸಾಗಿದೆ. ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಮಹಿಳೆಯರು  ಬದುಕುವ ಮತ್ತು ಹುಟ್ಟುವ ಹಕ್ಕುಗಳಿಗಾಗಿ ಇವತ್ತೂ ಕೂಡಾ ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಇತ್ತೀಚಿನ ಜನಗಣತಿಯಲ್ಲಿ ಪುರುಷ, ಮಹಿಳಾ ಸಂಖ್ಯಾ ಅನುಪಾತವು ಅದನ್ನು ಎತ್ತಿ ತೋರಿಸುತ್ತಿದೆ.


    ಮಹಿಳೆಯರ ಜನ ಸಂಖ್ಯೆಯಲ್ಲಿ ಅತೀ ಹೆಚ್ಚು  ಅಲ್ಪಸಂಖ್ಯಾತ, ದಲಿತ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳಯರು ಹಕ್ಕು, ಸ್ವಾತಂತ್ರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಮಹಿಳೆಯರ ಸಬಲೀಕರಣವಾಗದೆ ದೇಶದ ಸಬಲೀಕರಣವನ್ನು ಘೋಷಿಸಲು ಅಸಾಧ್ಯ. ಏಕತೆ, ದೃಢತೆ ಮತ್ತು ನಿರಂತರವಾದ  ಹೋರಾಟಗಳಿಂದ ತಮ್ಮ ಹಕ್ಕುಗಳನ್ನು ಪಡೆಯಬೇಕಾಗಿದೆ.

ಬನ್ನಿ ಐಕ್ಯರಾಗೋಣ ಮತ್ತು ದೇಶದ ಪ್ರತಿಯೋರ್ವ ಮಹಿಳೆಯನ್ನು ತಲುಪೋಣ. ದೇಶದ ಪ್ರತಿಯೋರ್ವ ತಾಯಿ, ಸಹೋದರಿ ಮತ್ತು ಮಗಳನ್ನು ಗುರುತಿಸಲು ನ್ಯಾಷನಲ್ ವುಮೆನ್ಸ್ ಫ್ರಂಟ್ ಪ್ರಯತ್ನಿಸುತ್ತಿದೆ. ಆತ್ಮ ವಿಶ್ವಾಸದ ಬೀಜಗಳನ್ನು ಬಿತ್ತೋಣ, ಪ್ರಬಲ ಶಕ್ತಿಯಾಗಿ ಮುಂದುವರಿಯೋಣ. ನಾವು ಮಹಿಳೆಯರ ಧ್ವನಿಯಾಗಿದ್ದೇವೆ. ನಮ್ಮ ರೆಕ್ಕೆಗಳನ್ನು ವಿಸ್ತರಿಸೋಣ. ಗುಣಮಟ್ಟದ ಶಿಕ್ಷಣ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಗಳು ನಮ್ಮ ಕರ್ತವ್ಯಗಳಾಗಿವೆ. ಮಹಿಳಾ ಸಬಲೀಕರಣದ ನಮ್ಮ ಉದ್ದೇಶ ಮತ್ತು ಸ್ವಾತಂತ್ರ್ಯ ನಮ್ಮ ಗುರಿ.ಹೃದಯ ಹೀನರಿಗೆ ಶರಣಾಗದಿರೋಣ ಎಂಬ ದ್ಯೇಯದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ಝುಲೈಕಾ
ಝುಲೈಕಾ
Next Story
X