Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು : ಜಲ ಮತ್ತು ಶಬ್ದ ಮಾಲೀನ್ಯ...

ಬೆಂಗಳೂರು : ಜಲ ಮತ್ತು ಶಬ್ದ ಮಾಲೀನ್ಯ ತಗ್ಗಿಸಲು ಒಂದೇ ಒಂದು ಕಠಿಣ ನಿಯಮ ಜಾರಿಗೆ ತಂದಿಲ್ಲ,

ವಾರ್ತಾಭಾರತಿವಾರ್ತಾಭಾರತಿ5 Feb 2016 6:04 PM IST
share

  ಬೆಂಗಳೂರು.ಫೆ.5: ಬೆಂಗಳೂರು ನಗರದಲ್ಲಿ ವಾಯು ಮಾಲೀನ್ಯ, ಜಲ ಮತ್ತು ಶಬ್ದ ಮಾಲೀನ್ಯ ತಗ್ಗಿಸಲು ಸಂವಿಧಾನಿಕ ಸಂಸ್ಥೆ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಒಂದೇ ಒಂದು ಕಠಿಣ ನಿಯಮ ಜಾರಿಗೆ ತಂದಿಲ್ಲ ಎಂದು ಪರಿಸರ, ವಿಜ್ಞಾನ, ತಂತ್ರಜ್ಞಾನ ಹಾಗೂ ಅರಣ್ಯ ಕುರಿತ ಸಂಸದೀಯ ಸ್ಥಾಯಿ ಸಮಿತಿ ಇಂದಿಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರದ ಬಳಿ ಸಮಗ್ರ ಯೋಜನಾ ವರದಿಯೇ ಇಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನ ಐಸೆಟ್‌ನಲ್ಲಿ ಅರಣ್ಯ, ಪರಿಸರ, ವಿಜ್ಞಾನ ಮತ್ತು ತಂತ್ರಜ್ಞಾನ ಕರಿತು ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ವನಿ ಕುಮಾರ್, ಮಾಲೀನ್ಯ ನಿಯಂತ್ರಣ ಮಂಡಳಿ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿಲ್ಲ. ಮಾಲೀನ್ಯ ತಗ್ಗಿಸಲು ಕಠಿಣ ಕ್ರಮಗಳಿಗೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ 8 ರಿಂದ 9 ಸಾವಿರ ಆಸ್ಪತ್ರೆಗಳಿಂದ ಹೊರ ಹೊಮ್ಮುವ ಅಪಾಯಕಾರಿ ತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಇಲ್ಲ. ಕೇವಲ 4 ಸಂಸ್ಕರಣಾ ಘಟಕಗಳು ಮಾತ್ರ ಇಲ್ಲಿವೆ.  ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಸಮಗ್ರ ಯೋಜನೆ ಇಲ್ಲವಾಗಿದೆ. ಸರ್ಕಾರದ ಕ್ರಮ ಆಘಾತ ಮತ್ತು ದಿಘ್ಭ್ರಮೆಗೆ ಕಾರಣವಾಗಿದೆ ಎಂದರು. ಬೆಂಗಳೂರು ಮಹಾನಗರದ ಪರಿಸರ ಮತ್ತಿತರ ಸಮಸ್ಯೆಗಳ ಬಗ್ಗೆ ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗಿದ್ದು, ಬೆಂಗಳೂರು ಅಭಿವೃದ್ಧಿ ಮತ್ತು ಸಮಸ್ಯೆಗಳ ಮೇಲುಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರನ್ನು ನೇಮಕ ಮಾಡಿರುವುದು ಸೂಕ್ತವಾಗಿದೆ. ಮುಖ್ಯಮಂತ್ರಿ ನೀಡಿರುವ ಸಲಹೆಗಳನ್ನು ಸಮಿತಿ ಸ್ವೀಕರಿಸಿದ್ದು ಸೂಕ್ತ ಕ್ರಮ ಜರುಗಿಸಲಿದೆ ಎಂದರು. ಒಟ್ಟಾರೆ ಕರ್ನಾಟಕದ ಪರಿಸರದ ಬಗ್ಗೆ, ವಿಶೇಷವಾಗಿ ಬೆಂಗಳೂರಿನ ಪರಿಸರ ಸಂಬಂಧಿ ವಿಷಯಗಳ ಬಗ್ಗೆ ಕರ್ನಾಟಕ ಸರ್ಕಾರದಿಂದ ವರದಿ ಸ್ವೀಕರಿಸಲಾಗಿದ್ದು ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ತಗ್ಗಿಸಲು ಹಾಗೂ ಕುಡಿಯುವ ನೀರಿನ ಗುಣಮಟ್ಟ ಪಾಲನೆಗೆ ಖಚಿತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಅಶ್ವನಿ ಕುಮಾರ್ ತಿಳಿಸಿದರು. 

ದೇಶದ ಮಹತ್ವಾಕಾಂಕ್ಷೆಯ ಸಂಸ್ಥೆಯಾಗಿರುವ ಇಸ್ರೋಗೆ ಆಯವ್ಯಯದಲ್ಲಿ ನೀಡುತ್ತಿರುವ ಅನುದಾನದ ಮೊತ್ತವನ್ನು ಶೇಕಡಾ 50 ರಷ್ಟು ಹೆಚ್ಚುಸುವಂತೆ ಸಮಿತಿ ಸಂಸತ್ತಿಗೆ ಶಿಫಾರಸ್ಸು ಮಾಡಲಿರುವುದಾಗಿ ಅಶ್ವನಿ ಕುಮಾರ್ ಹೇಳಿದರು. ಪ್ರಸಕ್ತ ಕೇಂದ್ರ ಸರ್ಕಾರ ಇಸ್ರೋಗೆ 5 ಸಾವಿರದ 800 ಕೋಟಿ ರೂಪಾಯಿ ಆಯವ್ಯಯ ಅನುದಾನ ನೀಡುತ್ತಿದ್ದು, ಇದಕ್ಕೆ ಶೇಕಡಾ 50 ರಷ್ಟು ಹೆಚ್ಚುವರಿ ಅನುದಾನ ಸೇರಿಸಬೇಕೆಂದು ಶಿಫಾರಸ್ಸು ಮಾಡಲಾಗುವುದು. ದೇಶದ ಈ ಪ್ರತಿಷ್ಠಿತ ಸಂಸ್ಥೆಗೆ ಹಣಕಾಸು ತೊಂದರೆ ಎದುರಾಗಬಾರದು ಮತ್ತಷ್ಟು ನುರಿತ ಮಾನವ ಸಂಪನ್ಮೂಲವನ್ನು ಹೊಂದಲು ಹಾಗೂ ಸಂಶೋಧನಾ ಚಟುವಟಿಕೆ ಉತ್ತೇಜಿಸಲು ಹಣಕಾಸು ನೆರವು ಅಗತ್ಯ ಎಂದರು. ಇಸ್ರೋ ಸಂಸ್ಥೆಗೆ ಹೆಚ್ಚಿನ ಹಣಕಾಸು ದೊರಕಿಸಿಕೊಡಲು ಶಿಫಾರಸ್ಸು ಮಾಡುತ್ತಿದ್ದು, ಹೆಚ್ಚುವರಿ ಹಣ ದೊರೆತರೆ ಕೈಗೊಳ್ಳಬಹುದಾದ ಕಾರ್ಯ ಯೋಜನೆಗಳ ಬಗ್ಗೆ ವಿವರವಾದ ವರದಿ ನೀಡುವಂತೆ ಇಸ್ರೋಗೆ ಸೂಚಿಸಲಾಗಿದೆ ಎಂದು ಹೇಳಿದರು.

ಇಸ್ರೋ ಸಂಸ್ಥೆಯ ಐ.ಆರ್.ಎನ್.ಎಸ್ ಉಪಗ್ರಹ ಮಾರ್ಚ್ 16 ರಂದು ಉಡಾವಣೆಯಾಗಲಿದೆ. ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಇಸ್ರೋ ಮಹೋನ್ನತ ಸ್ಥಾನ ಪಡೆದಿದೆ ಎಂದರು. ತಂಬಾಕು ಬೆಳೆಯಿಂದ 17 ಸಾವಿರ ಕೋಟಿ ರೂಪಾಯಿ ಆದಾಯವಿದೆ ಆದರೆ ಇದರಿಂದಾಗುವ ಪರಿಸರ ಹಾನಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ಒಂದು ಲಕ್ಷ ಕೋಟಿ ರೂ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಬಗ್ಗೆ ವಿವರಿಸುವ ವರದಿಯನ್ನು ಸಿದ್ಧಪಡಿಸುವಂತೆ ತಂಬಾಕು ಮಂಡಳಿಗೆ ಸೂಚಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X