Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ ಸರಕಾರ ರಚನೆ ಬಿಕ್ಕಟ್ಟು...

ಜಮ್ಮು-ಕಾಶ್ಮೀರ ಸರಕಾರ ರಚನೆ ಬಿಕ್ಕಟ್ಟು , ಪಿಡಿಪಿ ಅಧ್ಯಕ್ಷೆ ಮೆಹಬೂಬರಿಂದ ಬಿಜೆಪಿ ನಂಟು ಕಡಿದುಕೊಳ್ಳುವ ಸುಳಿವು

ವಾರ್ತಾಭಾರತಿವಾರ್ತಾಭಾರತಿ5 Feb 2016 6:09 PM IST
share
ಜಮ್ಮು-ಕಾಶ್ಮೀರ ಸರಕಾರ ರಚನೆ ಬಿಕ್ಕಟ್ಟು , ಪಿಡಿಪಿ ಅಧ್ಯಕ್ಷೆ ಮೆಹಬೂಬರಿಂದ  ಬಿಜೆಪಿ ನಂಟು ಕಡಿದುಕೊಳ್ಳುವ ಸುಳಿವು

ಜಮ್ಮು,ಫೆ.5: ಜಮ್ಮು-ಕಾಶ್ಮೀರದಲ್ಲಿ ಸರಕಾರ ರಚನೆಯ ಕುರಿತು ಸುದೀರ್ಘ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಅವರು, ಕೇಂದ್ರವು ರಾಜ್ಯಕ್ಕಾಗಿ ಸರಣಿ ‘‘ವಿಶ್ವಾಸ ನಿರ್ಮಾಣ ಕ್ರಮಗಳನ್ನು’’ ಪ್ರಕಟಿಸದಿದ್ದರೆ ತಾನು ಮಿತ್ರಪಕ್ಷ ಬಿಜೆಪಿಯ ನಂಟು ಕಡಿದುಕೊಳ್ಳುವ ಸುಳಿವನ್ನು ನೀಡಿದ್ದಾರೆ.
ಶುಕ್ರವಾರ ಜಮ್ಮುವಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮೆಹಬೂಬ, ನೂತನ ಸರಕಾರದ ರಚನೆಗೆ ಮುನ್ನ ಪೂರಕ ವಾತಾವರಣ ಸೃಷ್ಟಿಯು ನೂತನ ಕ್ರಮಗಳ ಉದ್ದೇಶವಾಗಿದ್ದು,ತನ್ನ ಬೇಡಿಕೆಯನ್ನು ‘‘ಬ್ಲಾಕ್‌ಮೇಲ್’’ತಂತ್ರವೆಂದು ಭಾವಿಸಕೂಡದು ಎಂದು ಹೇಳಿದರು.
 ಗಾಳಿಯಲ್ಲಿ ಸರಕಾರವನ್ನು ರಚಿಸಲಾಗದು. ನೂತನ ಸರಕಾರ ರಚನೆಯಾಗಲು ಪೂರಕ ವಾತಾವರಣವನ್ನು ಸೃಷ್ಟಿಸುವುದು ಮುಖ್ಯವಾಗಿದೆ.ಜನರಲ್ಲಿ ವಿಶ್ವಾಸವನ್ನು ಮೂಡಿಸುವ ನಿಟ್ಟಿನಲ್ಲಿ ಮುಂದುವರಿಯಲು ಮಾರ್ಗವಿದೆ. ಅದಕ್ಕಾಗಿ ಸರಕಾರದ ಬೆಂಬಲದ ಅಗತ್ಯವಿದೆ. ಅದು ದೊರಕಿದರೆ ಒಳ್ಳೆಯದು,ಇಲ್ಲದಿದ್ದರೆ ಈವರೆಗಿನಂತೆ ನಮ್ಮ ದಾರಿಯಲ್ಲಿ ನಾವು ಮುನ್ನಡೆಯುತ್ತೇವೆ ಎಂದರು.
ಜ.7ರಂದು ಆಗಿನ ಮುಖ್ಯಮಂತ್ರಿ ಮುಫ್ತಿಮೊಹಮ್ಮದ್ ಸಯೀದ್ ಅವರ ನಿಧನಾನಂತರ ಹೆಚ್ಚುತ್ತಿರುವ ರಾಜಕೀಯ ಅನಿಶ್ಚಿತತೆಯ ನಡುವೆಯೇ ರಾಜ್ಯವು ರಾಜ್ಯಪಾಲರ ಆಡಳಿತದಲ್ಲಿದೆ.
ನೂತನ ಕ್ರಮಗಳು ರಾಜಕೀಯ ಸ್ವರೂಪದ್ದಾಗಿರಬೇಕೇ ಹೊರತು ಆರ್ಥಿಕ ಸ್ವರೂಪದ್ದಲ್ಲ ಎಂದು ಮೆಹಬೂಬ ಸುಳಿವು ನೀಡಿದರು.
ಗುರುವಾರವಷ್ಟೇ ರಾಜ್ಯಪಾಲ ಎನ್.ಎನ್.ವೋರಾ ಅವರು ಇಬ್ಬರು ಸಲಹೆಗಾರರನ್ನು ನೇಮಿಸಿದ್ದು, ಈ ಕ್ರಮವು ರಾಜ್ಯಪಾಲರ ಆಡಳಿತಾವಧಿಯ ವಿಸ್ತರಣೆಗೆ ತಾನು ವಿರುದ್ಧವಾಗಿಲ್ಲ ಎನ್ನುವುದನ್ನು ತೋರಿಸಲು ಕೇಂದ್ರದ ಒತ್ತಡ ತಂತ್ರವೆಂದೇ ಪರಿಗಣಿಸಲಾಗಿದೆ.
 
 ಮೆಹಬೂಬ ಸುಳಿವು ನೀಡಿರುವ ವಿಶ್ವಾಸ ನಿರ್ಮಾಣ ಕ್ರಮಗಳು ಮೈತ್ರಿಕೂಟದ ಪಾಲುದಾರ ಪಕ್ಷಗಳ ನಡುವೆ ಪ್ರಮುಖ ವಿವಾದದ ಕಾರಣವಾಗಿರುವ, ಪ್ರತ್ಯೇಕತಾವಾದಿಗಳು ಮತ್ತು ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆಗಳನ್ನು ಒಳಗೊಂಡಿರಬಹುದು ಎಂದು ಮೂಲಗಳು ತಿಳಿಸಿವೆ. ಕಳೆದ ಮಾರ್ಚ್‌ನಲ್ಲಿ ಸಮ್ಮಿಶ್ರ ಸರಕಾರ ರಚನೆಗೆ ಮುನ್ನ ಉಭಯ ಪಕ್ಷಗಳು ಒಪ್ಪಿಕೊಂಡಿದ್ದ ಕಾರ್ಯಸೂಚಿಯಲ್ಲಿ ಮಾತುಕತೆ ಪ್ರಕ್ರಿಯೆ ಸೇರಿತ್ತಾದರೂ ಮೋದಿ ಸರಕಾರವು ಇಂತಹ ಪ್ರಕ್ರಿಯೆಗೆ ಈವರೆಗೆ ಚಾಲನೆ ನೀಡಿಲ್ಲ. ಶಾಂತಿಯುತ ಚುನಾವಣಾ ಪ್ರಕ್ರಿಯೆಗಾಗಿ ಸಯೀದ್‌ರಿಂದ ಪಾಕಿಸ್ತಾನದ ಪ್ರಶಂಸೆ ಮತ್ತು ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ಬಿಡುಗಡೆ ಸೇರಿದಂತೆ ಇಂತಹುದೇ ವಿಷಯಗಳು ಉಭಯ ಪಕ್ಷಗಳ ನಡುವೆ ಪದೇಪದೇ ಕಚ್ಚಾಟಕ್ಕೆ ಕಾರಣವಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X