Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಐಪಿಎಲ್ ಆಟಗಾರರ ಹರಾಜು, 351 ಮಂದಿ...

ಇಂದು ಐಪಿಎಲ್ ಆಟಗಾರರ ಹರಾಜು, 351 ಮಂದಿ ಕಣದಲ್ಲಿ

ವಾರ್ತಾಭಾರತಿವಾರ್ತಾಭಾರತಿ5 Feb 2016 11:50 PM IST
share

ಬೆಂಗಳೂರು, ಫೆ.5: ಒಂಬತ್ತನೆಯ ಆವೃತ್ತಿಯ ಐಪಿಎಲ್ ಟ್ವೆಂಟಿ-20 ಟೂರ್ನಿಗೆ ಆಟಗಾರರ ಹರಾಜು ಪ್ರಕ್ರಿಯೆ ಉದ್ಯಾನನಗರಿಯಲ್ಲಿ ಶನಿವಾರ ನಡೆಯಲಿದೆ. ಒಟ್ಟು 351 ಆಟಗಾರರು ಹರಾಜು ಪಟ್ಟಿಯಲ್ಲಿದ್ದಾರೆ. ಇದರಲ್ಲಿ ಭಾರತದ 230 ಆಟಗಾರರಿದ್ದಾರೆ.

ಐಸಿಸಿ ಅಸೋಸಿಯೇಟ್ ದೇಶದ ಇಬ್ಬರು ಆಟಗಾರರಾದ ಐರ್ಲೆಂಡ್‌ನ ಆಲ್‌ರೌಂಡರ್ ಕೇವಿನ್ ಒಬ್ರಿಯಾನ್(30 ಲಕ್ಷ ರೂ. ಮೂಲ ಬೆಲೆ) ಹಾಗೂ ಕೆನಡಾದ ಆಲ್‌ರೌಂಡರ್ ನಿಖಿಲ್ ದತ್ತ(10 ಲಕ್ಷ ರೂ.)ಹರಾಜಿನ ಪಟ್ಟಿಯಲ್ಲಿದ್ದಾರೆ.

ಒಟ್ಟು 351 ಆಟಗಾರರ ಪೈಕಿ 219 ಆಟಗಾರರು ಹೊಸಬರು. ಆಸ್ಟ್ರೇಲಿಯದ 29 ಆಟಗಾರರು, ವೆಸ್ಟ್‌ಇಂಡೀಸ್‌ನ 20 ಆಟಗಾರರು, ದಕ್ಷಿಣ ಆಫ್ರಿಕ (18)ಹಾಗೂ ಶ್ರೀಲಂಕಾದ(16) ಆಟಗಾರರು ಹರಾಜಿನಲ್ಲಿದ್ದಾರೆ. 351 ಆಟಗಾರರಲ್ಲಿ ಗರಿಷ್ಠ 116 ಆಟಗಾರರನ್ನು ಖರೀದಿಸಬಹುದು.

ಪ್ರತಿ ತಂಡ ಕನಿಷ್ಠ 28 ಆಟಗಾರರನ್ನು ಖರೀದಿಸಬೇಕು. 36ಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಖರೀದಿಸುವಂತಿಲ್ಲ. ಪ್ರತಿ ತಂಡ 66 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಹೂಡುವಂತಿಲ್ಲ.

ಈ ವರ್ಷದ ಹರಾಜಿನಲ್ಲಿ ಖರೀದಿಸಲ್ಪಡುವ ಆಟಗಾರರು ಫ್ರಾಂಚೈಸಿಯೊಂದಿಗೆ ಒಂದು ವರ್ಷ ಒಪ್ಪಂದ ಮಾಡಿಕೊಳ್ಳಲಿದ್ದಾರೆ. ಇನ್ನೂ ಒಂದು ವರ್ಷ ವಿಸ್ತರಿಸುವ ಆಯ್ಕೆಯೂ ಇದೆ. ಡೆಲ್ಲಿ ಡೇರ್‌ಡೆವಿಲ್ಸ್ ಖಾತೆಯಲ್ಲಿ ಗರಿಷ್ಠ 37.15 ಕೋಟಿ ರೂ. ಇದೆ.

ಎರಡು ಹೊಸ ತಂಡಗಳಾದ ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜಾಯಂಟ್ಸ್ ತಲಾ 27 ಕೋಟಿ ರೂ. ಹೊಂದಿವೆ.

ಪ್ರಮುಖ ಆಟಗಾರರು: ಈ ಬಾರಿಯ ಹರಾಜಿನಲ್ಲಿ 9 ಪ್ರಮುಖ ಆಟಗಾರರಿದ್ದಾರೆ. ಅವರೆಂದರೆ: ಇಶಾಂತ್ ಶರ್ಮ, ಆಶಿಷ್ ನೆಹ್ರಾ, ಶೇನ್ ವ್ಯಾಟ್ಸನ್, ಕೇವಿನ್ ಪೀಟರ್ಸನ್, ಯುವರಾಜ್ ಸಿಂಗ್, ಡೇಲ್ ಸ್ಟೇಯ್ನಾ, ಆ್ಯರೊನ್ ಫಿಂಚ್, ಮಾರ್ಟಿನ್ ಗಪ್ಟಿಲ್ ಹಾಗೂ ಡ್ವೇಯ್ನೇ ಸ್ಮಿತ್. ಈ ಪೈಕಿ ಐವರು ಆಟಗಾರರ ಮೂಲ ಬೆಲೆ 2 ಕೋಟಿ ರೂ., ಸ್ಟೇಯ್ನಿ 1.5 ಕೋ.ರೂ, ಫಿಂಚ್ 1 ಕೋ.ರೂ. ಹಾಗೂ ಗಪ್ಟಿಲ್ ಹಾಗೂ ಸ್ಮಿತ್ 50 ಲಕ್ಷ ರೂ. ಮೂಲ ಬೆಲೆ ಹೊಂದಿರುತ್ತಾರೆ. ಏಳು ಆಟಗಾರರಾದ ಮೈಕಲ್ ಹಸ್ಸಿ, ಧವಲ್ ಕುಲಕರ್ಣಿ, ಕೇನ್ ರಿಚರ್ಡ್‌ಸನ್, ಸಂಜು ಸ್ಯಾಮ್ಸನ್, ದಿನೇಶ್ ಕಾರ್ತಿಕ್, ಸ್ಟುವರ್ಟ್ ಬಿನ್ನಿ ಹಾಗೂ ಮಿಚೆಲ್ ಮಾರ್ಷ್ ಮೂಲ ಬೆಲೆ 2 ಕೋಟಿ ರೂ. ಕರ್ನಾಟಕದ ಕರುಣ್ ನಾಯರ್ (10 ಲಕ್ಷ ರೂ. ಆರಂಭಿಕ ಬೆಲೆ) 2016ರ ಹರಾಜಿನ ಪ್ರಮುಖ ಮಧ್ಯಮ ಕ್ರಮಾಂಕದ ದಾಂಡಿಗ. ರಾಜಸ್ಥಾನ ರಾಯಲ್ಸ್ ಪರ 25 ಐಪಿಎಲ್ ಪಂದ್ಯಗಳನ್ನು ಆಡಿರುವ ನಾಯರ್ 511 ರನ್ ಗಳಿಸಿದ್ದಾರೆ. ಆಟಗಾರರ ಕನಿಷ್ಠ ಮೂಲ ಬೆಲೆ 10 ಲಕ್ಷ ರೂ.

ಶನಿವಾರ ನ್ಯೂಝಿಲೆಂಡ್-ಆಸ್ಟ್ರೇಲಿಯ, ದಕ್ಷಿಣ ಆಫ್ರಿಕ-ಇಂಗ್ಲೆಂಡ್ ಹಾಗೂ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಈ ಪಂದ್ಯಗಳು ಹರಾಜಿನ ಮೇಲೆ ಪರಿಣಾಮಬೀರಲಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X