Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೌಕಾಪಡೆಯ ಶಕ್ತಿ ಪ್ರದರ್ಶನ

ನೌಕಾಪಡೆಯ ಶಕ್ತಿ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ6 Feb 2016 11:41 PM IST
share
ನೌಕಾಪಡೆಯ ಶಕ್ತಿ ಪ್ರದರ್ಶನ

♦ 50 ರಾಷ್ಟ್ರಗಳು ಭಾಗಿ ♦ ರಾಷ್ಟ್ರಪತಿ ಸಮೀಕ್ಷೆ

ವಿಶಾಖಪಟ್ಟಣಂ, ಫೆ.6: ಭಾರತೀಯ ನೌಕಾಪಡೆಯ ಯುದ್ಧ ಸನ್ನದ್ಧತೆ ಮತ್ತು ಶಕ್ತಿ-ಸಾಮರ್ಥ್ಯಗಳ ಪ್ರದರ್ಶನದ ಅಂಗವಾಗಿ ಆಯೋಜಿಸಲಾದ ಅಂತಾ ರಾಷ್ಟ್ರೀಯ ನೌಕಾಪಡೆ ಪರಾಮರ್ಶೆ (ಐಎಫ್‌ಆರ್)- 2016ರಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದ 50 ರಾಷ್ಟ್ರಗಳ ನೌಕಾಪಡೆಗಳ ನೌಕೆಗಳ ಸಮೀಕ್ಷೆಯನ್ನು ರಾಷಟ್ಟೆಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ನಡೆಸಿದರು.

ಭಾರತೀಯ ನೌಕಾಪಡೆಯ ಪ್ರತಿಷ್ಠಿತ ಗಸ್ತುನೌಕೆ ‘‘ಐಎನ್‌ಎಸ್ ಸುಮಿತ್ರಾ’’ದ ಮೂಲಕ ಅವರು ಯುದ್ಧನೌಕೆಗಳ ಸಮೀಕ್ಷೆ ನಡೆಸಿದರು.

ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಯವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಮತ್ತು ಇತರ ಗಣ್ಯರು ಈ ನೌಕಾಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದರು. ಇದು ಸ್ವಾತಂತ್ರಾನಂತರ 11ನೆ ನೌಕಾಪಡೆ ಪರಾಮರ್ಶೆಯಾಗಿದ್ದು, ಭಾರತದಲ್ಲಿ ನಡೆಯುತ್ತಿರುವ ಎರಡನೆ ಐಎಫ್‌ಆರ್ ಆಗಿದೆ.

 ಇಲ್ಲಿಯ ಬಂಗಾಲ ಕೊಲ್ಲಿಯ ತೀರದಲ್ಲಿ ಲಂಗರು ಹಾಕಿದ್ದ 70 ಯುದ್ಧನೌಕೆಗಳ ಎದುರಿನಿಂದ ರಾಷ್ಟ್ರಪತಿ ಮತ್ತು ಇತರ ಗಣ್ಯರನ್ನು ಹೊತ್ತಿದ್ದ ಐಎನ್‌ಎಸ್ ಸುಮಿತ್ರಾ ಗಂಭೀರವಾಗಿ ಸಾಗಿತು. ನೌಕೆಗಳ ಪರಾಮರ್ಶೆಯ ಬಳಿಕ ಮಾತನಾಡಿದ ಮುಖರ್ಜಿ, 50 ಮಿತ್ರರಾಷ್ಟ್ರಗಳ ನೌಕಾಪಡೆಗಳಿಗೆ ಸೇರಿದ ನೌಕೆಗಳು ಮಹಾಸಾಗರಗಳನ್ನು ದಾಟಿ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಮೊದಲ ಐಎಫ್‌ಆರ್‌ನಲ್ಲಿ ಪಾಲ್ಗೊಂಡಿವೆ ಎಂದು ಹೇಳಿದರು.

ಭಾರತೀಯ ನೌಕಾಪಡೆಯ ಶಕ್ತಿ-ಸಾಮರ್ಥ್ಯವನ್ನು ಪ್ರಮುಖವಾಗಿ ಬಿಂಬಿಸುತ್ತಿರುವ ಐಎಫ್‌ಆರ್-2016 ವಿಶ್ವಾದ್ಯಂತದ ನೌಕಾಪಡೆಗಳನ್ನು ಭಾರತದ ಕಡಲ ತೀರದಲ್ಲಿ ಒಗ್ಗೂಡಿಸಿದೆ. ಇದು ಸಮುದ್ರವನ್ನು ಶಾಂತಿ,ಸಹಕಾರ ಮತ್ತು ಮೈತ್ರಿಯನ್ನು ಉತ್ತೇಜಿಸುವ ಹಾಗೂ ಸುರಕ್ಷಿತ ಸಾಗರ ಭವಿಷ್ಯಕ್ಕಾಗಿ ಸಹಭಾಗಿತ್ವವನ್ನು ಹೆಚ್ಚಿಸುವ ನಮ್ಮ ಸಮಾನ ಉದ್ದೇಶವನ್ನು ಪ್ರಮುಖವಾಗಿ ಬಿಂಬಿಸುತ್ತಿದೆ ಎಂದು ನುಡಿದರು.

ಪರಾಮರ್ಶೆಯಲ್ಲಿ ಭಾರತೀಯ ನೌಕಾಪಡೆ ಮತ್ತು ವಿಶ್ವಾದ್ಯಂತದ ಅಗ್ರ ನೌಕಾಪಡೆಗಳ ನೌಕೆಗಳು ಸಮ್ಮಿಲನಗೊಂಡಿದ್ದವು. ಭಾರತೀಯ ತಟ ರಕ್ಷಣಾ ಪಡೆ ಮತ್ತು ವಾಣಿಜ್ಯ ನೌಕೆಗಳೂ ಭಾಗಿಯಾಗಿದ್ದವು.

ಭಾರತೀಯ ನೌಕಾಪಡೆಯ ವಾಯು ಘಟಕದ ವೈಮಾನಿಕ ಪ್ರದರ್ಶನವನ್ನೂ ರಾಷ್ಟ್ರಪತಿಗಳು ವೀಕ್ಷಿಸಿದರು.

ಪರಾಮರ್ಶೆಯ ಅಂತಿಮ ಹಂತದಲ್ಲಿ ಯುದ್ಧನೌಕೆಗಳು ಮತ್ತು ಜಲಾಂತರ್ಗಾಮಿಗಳು ಸಾಲುಸಾಲಾಗಿ ರಾಷ್ಟ್ರಪತಿಗಳ ನೌಕೆಯ ಎದುರಿನಿಂದ ಸಾಗಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X