Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರದಿಂದ ಸಕಾಲ ಯೋಜನೆಯ ನಿರ್ಲಕ್ಷ:...

ಸರಕಾರದಿಂದ ಸಕಾಲ ಯೋಜನೆಯ ನಿರ್ಲಕ್ಷ: ಆರೋಪ

ವಾರ್ತಾಭಾರತಿವಾರ್ತಾಭಾರತಿ6 Feb 2016 11:43 PM IST
share

ಬೆಂಗಳೂರು, ಫೆ.6: ಸಾರ್ವಜನಿಕರ ಸಮಸ್ಯೆಗಳಿಗೆ ವೇದಿಕೆಯಂತಿರುವ ಸಕಾಲ ಯೋಜನೆಯನ್ನು ಸರಕಾರ ನಿರ್ಲಕ್ಷಿಸಿದ್ದರ ಪರಿಣಾಮವಾಗಿ ರಾಜ್ಯದಲ್ಲಿ ವಾರ್ಷಿಕ 5 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಷ್ಟ್ರೋತ್ಥಾನ ಸಂಕಲ್ಪ ಸಂಸ್ಥೆ ಆಪಾದಿಸಿದೆ. ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಸಂಸ್ಥೆಯ ಸಂಚಾಲಕ ಸಂತೋಷ್ ನರಗುಂದ ಮಾತನಾಡಿ, ಸಕಾಲ ಯೋಜನೆ ಆರಂಭವಾದ ವರ್ಷದಲ್ಲಿ ರಾಜ್ಯದಲ್ಲಿ 1.5 ಕೋಟಿಯಷ್ಟು ಅರ್ಜಿಗಳು ಸಲ್ಲಿಕೆಯಾಗಿತ್ತು, 2015ರಲ್ಲಿ 3.5 ಕೋಟಿಯಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಸರಕಾರ ಯೋಜನೆಗೆ ಒತ್ತು ನೀಡದ ಪರಿಣಾಮವಾಗಿ ಸಾರ್ವಜನಿಕರಿಗೆ ಯೋಜನೆಯಿಂದ ಯಾವುದೇ ಲಾಭವಾಗುತ್ತಿಲ್ಲ ಎಂದು ಹೇಳಿದರು. ಕಾಯ್ದೆ ಅನುಸಾರವಾಗಿ ಕೆಎಸ್‌ಜಿಸಿ(ಗ್ಯಾರಂಟಿ ಆಫ್ ಸರ್ವಿಸ್) ಪ್ರಮಾಣ ಪತ್ರವನ್ನು ನೀಡಬೇಕೆಂಬ ನಿಯಮವಿದ್ದು, ಯಾವುದೇ ಕೇಂದ್ರಗಳಲ್ಲಿ ಇದು ಪಾಲನೆಯಾಗುತ್ತಿಲ್ಲ. ಮೂರು ದಿನದ ಕೆಲಸಕ್ಕೆ ಅಧಿಕಾರಿಗಳು ನೂರು ದಿನ ಮಾಡಿದರೂ ಅರ್ಜಿಯನ್ನು ಒಂದು ದಿನದ ಅಂತರದಲ್ಲಿ ದಾಖಲಿಸಿ ಮರುದಿನವೇ ಅದನ್ನು ಅನುಮೋದಿಸುತ್ತಾರೆ. ಕಡತಗಳ ವಿಲೇವಾರಿಯಲ್ಲಿ ವಿಳಂಬ ಅನುಸರಿಸಿ ಕೇವಲ ತೋರಿಕೆಗೆ ಸರಕಾರದ ಕಡತದಲ್ಲಿ ತಕ್ಷಣ ವಿಲೇವಾರಿಯಾಗಿರುವುದನ್ನು ತೋರುತ್ತಾರೆ. ಇದು ಭಾರೀ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಅಧಿಕಾರಿಗಳ ಅಲೆದಾಟ ತಪ್ಪಿಲ್ಲ ಎಂದು ಆಪಾದಿಸಿದರು. ರಾಜ್ಯದಲ್ಲಿ 725 ಸಕಾಲ ಕೇಂದ್ರಗಳಿದ್ದು, ಈ ಪೈಕಿ 135 ಕೇಂದ್ರಗಳಲ್ಲಿ ಮಾತ್ರವೇ ಆನ್‌ಲೈನ್ ಸೇವೆ ಲಭ್ಯವಿದೆ. ಶೇ.80 ರಷ್ಟು ಕೇಂದ್ರಗಳಲ್ಲಿ ಆನ್‌ಲೈನ್ ಸೇವೆಯಿಲ್ಲ. 2015ರಲ್ಲಿ ಸಲ್ಲಿಕೆಯಾಗಿದ್ದ 40 ಸಾವಿರ ದೂರುಗಳಲ್ಲಿ 20 ಸಾವಿರ ದೂರುಗಳಿಗೆ ಪರಿಹಾರವಾಗಿಲ್ಲ. 2014ರಲ್ಲಿಯೇ ಸಹಾಯವಾಣಿ ಕೇಂದ್ರಗಳು ಸ್ಥಗಿತಗೊಂಡಿದ್ದು, 2015ರಲ್ಲಿಯೂ ಅವುಗಳು ಕಾರ್ಯಾರಂಭಿಸಲಿಲ್ಲ ಎಂದು ಆರೋಪಿಸಿದರು.

 ಸಾರ್ವಜನಿಕರ ಅನುಕೂಲಕ್ಕಾಗಿ ಇದ್ದ ಯೋಜನೆಯೊಂದು ಸಂಪೂರ್ಣ ನಿರ್ಲಕ್ಷವಾಗಿದ್ದಲ್ಲದೆ, ಇದರಲ್ಲಿಯೂ ಭ್ರಷ್ಟಾಚಾರ ಕಂಡು ಬರುತ್ತಿರುವುದು ಸರಿಯಲ್ಲ. ಸರಕಾರ ಕೂಡಲೇ ಸಕಾಲ ಯೋಜನೆಗೆ ಪುನರ್ಜನ್ಮ ನೀಡಬೇಕು ಎಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಸಂಚಾಲಕ ವೀರೇಶ್ ಮಾತನಾಡಿ, ಸಕಾಲ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ವೇಳೆಯಲ್ಲಿ ಸೇವೆಯನ್ನು ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರಿಹಾರ ನೀಡಲು ಸರಕಾರ 5 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಿತ್ತು. ಈ ಅನುದಾನದಲ್ಲಿ ಇದುವರೆಗೂ ಕೇವಲ 70 ಸಾವಿರ ರೂ.ಗಳ ಮಾತ್ರ ಖರ್ಚಾಗಿದೆ. ಸಾರ್ವಜನಿಕರ ದೂರುಗಳನ್ನು ಹೇಳಿದ ಸಮಯದಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗದಿದ್ದರೂ, ದೂರುದಾರರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ಹಿಂದೆ ಸರಿಯುತ್ತಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X