Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಕೇರಳಕ್ಕೆ ಕೋಟ್ಯಾಂತರ ರೂ.ನ...

ಕಾಸರಗೋಡು : ಕೇರಳಕ್ಕೆ ಕೋಟ್ಯಾಂತರ ರೂ.ನ ಗಾಂಜಾ ಸಾಗಾಟ: ಇಡುಕ್ಕಿ ನಿವಾಸಿಯ ವಿಚಾರಣೆಯಲ್ಲಿ ಮಾಹಿತಿ ಬಯಲು

ವಾರ್ತಾಭಾರತಿವಾರ್ತಾಭಾರತಿ7 Feb 2016 4:58 PM IST
share

ಕಾಸರಗೋಡು: ಕಾಸರಗೋಡು ಸೇರಿದಂತೆ ಕೇರಳಾದ್ಯಂತ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವ ಪ್ರಮುಖ ತಂಡವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಸರಗೋಡು ನಾರ್ಕೋಟಿಕ್ ಸೆಲ್ ಡಿವೈಎಸ್‌ಪಿ ಟಿ. ಪಿ. ಪ್ರೇಮರಾಜನ್ ಅವರ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ತನಿಖೆಯಂಗವಾಗಿ ಉತ್ತರಭಾರತದ ರಾಜ್ಯಗಳಾದ ಒಡೀಶಾ, ಚತ್ತೀಸ್‌ಘಡ್, ಉತ್ತರಾಂಚಲವನ್ನು ಡಿವೈಎಸ್‌ಪಿಯವರ ನೇತೃತ್ವದಲ್ಲಿರುವ ಪೊಲೀಸರ ತಂಡ ಸಂದರ್ಶಿಸಿ ಮಾಹಿತಿ ಕಲೆ ಹಾಕಿದೆ. ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿರುವ ತಂಡದ ಸೂತ್ರಧಾರ ಎಮದು ಶಂಕಿಸಲಾದ ಇಡುಕ್ಕಿ ನಿವಾಸಿ ರಾಜುಥೋಮಸ್‌ನನ್ನು ರಾಯ್‌ಘಡ್ ಜೈಲಿಗೆ ತಲುಪಿ ವಿಚಾರಣೆ ನಡೆಸಲಾಯಿತು. ಗಾಂಜಾ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಈತನನ್ನು ನ್ಯಾಯಾಲಯದ ಅನುಮತಿಯೊಂದಿಗೆ ವಿಚಾರಣೆಗೊಳಪಡಿಸಲಾಯಿತು. ಈತನಿಂದ ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಗಾಂಜಾ ಸಾಗಾಟ ನಡೆಸುತ್ತಿರುವ ಶೃಂಖಲೆಯ ಕುರಿತಾ ಪ್ರಧಾನ ಮಾಹಿತಿಗಳು ಲಭಿಸಿವೆ.

ಕೇರಳಕ್ಕೆ ಗಾಂಜಾ ಸಾಗಾಟ ಹೆಚ್ಚಿದ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆಯ ಪ್ರತ್ಯೇಕ ನಿರ್ದೇಶನಾನ್ವಯ ಡಿವೈಎಸ್‌ಪಿಯವರ ನೇತೃತ್ವದಲ್ಲಿರುವ ಪೊಲೀಸ್ ತಂಡ ಉತ್ತರಭಾರತದ ರಾಜ್ಯಗಳಲ್ಲಿ ತನಿಖೆಗಾಗಿ ತೆರಳಿತ್ತು. ಗಾಂಜಾ ಸಾಗಾಟ ಹಾಗೂ ಗಾಂಜಾ ಕೃಷಿಯ ಕುರಿತಾ ಮಾಹಿತಿಗಳು ರಾಯಘಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಲ ಸುಬ್ರಹ್ಮಣ್ಯನ್ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ವ್ಯಕ್ತವಾಗಿದೆ. ಇಡುಕ್ಕಿ ನಿವಾಸಿಯದ ರಾಜು ಥೋಮಸ್ ಮಾತ್ರವಲ್ಲದೆ ಹಲವಾರು ಕೇರಳೀಯರು ಛತ್ತೀಸ್‌ಘಡ್‌ನ ಜೈಲುಗಳಲ್ಲಿ ಗಾಂಜಾ ಪ್ರಕರಣದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವುದಾಗಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿದೆ.

ಇಡುಕ್ಕಿ ಜಿಲ್ಲೆಯ ರಾಜಕ್ಕಾಡ್, ಪಣಿಕ್ಕನ್‌ಗುಡಿ, ಮೃಗಶ್ಯೇರಿ ನಿವಾಸಿಗಳಾದ 30ರಷ್ಟು ಯುವಕರು ಒಡೀಶಾದ ಜೈಲಿನಲ್ಲಿದ್ದಾರೆ. ಇವರ ವಿರುದ್ಧ ಗಾಂಜಾ ಸಾಗಾಟ ಹಾಗೂ ಗಾಂಜಾ ಕೃಷಿ ಪ್ರಕರಣಗಳಿವೆ. ಬುಡಕಟ್ಟು ಜನಾಂಗದವರ ಪ್ರದೇಶಗಳನ್ನು ಕೇಂದ್ರೀಕರಿಸಿ ನಡೆಸುವ ಗಾಂಜಾ ಕೃಷಿಗೆ ಮಾವೋವಾದಿಗಳ ಸಹಾಯ ಇರುವುದಾಗಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿದೆ. ಪ್ರಧಾನ ಆದಾಯ ಮಾರ್ಗ ಎಂಬ ನೆಲೆಯಲ್ಲಿ ಮಾವೋವಾದಿಗಳು ಗಾಂಜಾ ಕೃಷಿಗೆ ಎಲ್ಲ ರೀತಿಯ ಸಹಾಯ ನೀಡುತ್ತಿರುವುದಾಗಿ ಹೇಳಲಾಗುತ್ತಿದೆ. ಗಾಂಜಾ ಬೆಳೆ ತೆಗೆದ ಬಳಿಕ ಮಾವೋವಾದಿಗಳ ಸಹಾಯದೊಂದಿಗೆ ಆಂಧ್ರಪ್ರದೇಶದ ಗಡಿಭಾಗದ ವರೆಗೆ ತಲುಪಿಸಲಾಗುತ್ತಿದೆ. ಅಲ್ಲಿಂದ ವಾಹನಗಳಲ್ಲೇರಿ ಕೇರಳ ಮೊದಲಾದೆಡೆಗೆ ಗಾಂಜಾ ಸಾಗಿಸಲಾಗುತ್ತಿದೆ. ಗಾಂಜಾ ಸಾಗಾಟಕ್ಕೆ ಪ್ರತ್ಯೇಕ ವಾಹನಗಳನ್ನು ಉಪಯೋಗಿಸುತ್ತಿರುವುದಾಗಿ ತನಿಖೆಯಲ್ಲಿ ಸ್ಪಷ್ಟಗೊಂಡಿದೆ. ಉತ್ತರಭಾರತದ ರಾಜ್ಯಗಳ ಗಾಂಜಾ ಕೃಷಿಗೆ ನೇತೃತ್ವ ನೀಡುತ್ತಿರುವುದು ಇಡುಕ್ಕಿ ಜಿಲ್ಲೆಯ ಹಿರಿಯ ಗಾಂಜಾ ಕೃಷಿಕನಾಗಿದ್ದರೂ ಗಾಂಜಾ ಸಾಗಾಟದ ಹಿಂದೆ ಕೇರಳದ ಕುಪ್ರಸಿದ್ಧ ವಾಹನ ಕಳವುಗಾರನಿರುವುದಾಗಿ ತನಿಖೆಯಲ್ಲಿ ಸ್ಪಷ್ಟಗೊಂಡಿದೆ.

ಈ ತಂಡ ಗಾಂಜಾ ಸಾಗಾಟದತ್ತ ವಾಲಿರುವುದರಿಂದ ಇತ್ತೀಚಿಗಿನ ದಿನಗಳಲ್ಲಿ ಕಾಸರಗೋಡು ಹಾಗೂ ಇತರೆಡೆಗಳಲ್ಲಿ ಕೆಲ ತಿಂಗಳುಗಳಿಂದ ವಾಹನ ಕಳವು ಪ್ರಕರಣಗಳು ಕಡಿಮೆಯಾಗಿರುವುದಾಗಿ ಪೊಲೀಸ್ ತನಿಖೆ ಸ್ಪಷ್ಟಪಡಿಸಿದೆ. ಗಡಿಪ್ರದೇಶಕ್ಕೆ ತಲುಪುವ ಗಾಂಜಾ ಒಟ್ಟಾಗಿ ಒಬ್ಬ ಏಜೆಂಟ್ ಮೂಲಕ ಕಾಸರಗೋಡಿಗೆ ತಲುಪುತ್ತಿರುವುದಾಗಿ ತನಿಖಾ ತಂಡ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X