Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ಕ್ರಮಕ್ಕೆ ಔಷಧ ಉದ್ಯಮಿಗಳ...

ಕೇಂದ್ರದ ಕ್ರಮಕ್ಕೆ ಔಷಧ ಉದ್ಯಮಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 Feb 2016 11:03 PM IST
share

 ಹೊಸದಿಲ್ಲಿ,ಫೆ.7: ಜೀವರಕ್ಷಕ ಔಷಧಿಗಳಿಗೆ ಅಬಕಾರಿ ಸುಂಕ ವಿನಾಯಿತಿಯನ್ನು ರದ್ದುಪಡಿಸಿದ ಕೇಂದ್ರ ಸರಕಾರದ ಕ್ರಮವನ್ನು, ಬಯೋಕಾನ್ ಕಂಪೆನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಸೇರಿದಂತೆ, ಭಾರತದ ಹಲವು ಔಷಧೋದ್ಯಮಿಗಳು ತೀವ್ರವಾಗಿ ಖಂಡಿಸಿದ್ದಾರೆ.ಜೀವರಕ್ಷಕ ಔಷಧಿಗಳಿಗೆ, ಯಾವುದೇ ರೀತಿಯ ಸುಂಕವನ್ನು ವಿಧಿಸುವುದರಿಂದ ಭಾರತದ ಆರೋಗ್ಯಪಾಲನೆ ಅಭಿಯಾನಕ್ಕೆ ಹಿನ್ನಡೆಯುಂಟಾಗಲಿದೆಯೆಂದು ಮಜುಂದಾರ್ ಆತಂಕ ವ್ಯಕ್ತಪಡಿಸಿದ್ದಾರೆ. ‘‘ಒಂದು ದೇಶವಾಗಿ ನಾವು, ಜೀವರಕ್ಷಕ ಔಷಧಗಳಿಗೆ ಯಾವುದೇ ಸುಂಕದಿಂದ ವಿನಾಯಿತಿ ನೀಡಬೇಕು. ಸರಕಾರವು ಆರೋಗ್ಯಪಾಲನಾ ಅಭಿಯಾನದ ಬಗ್ಗೆ ಭಾರೀ ಪ್ರಚಾರ ಮಾಡುತ್ತಿದೆ. ಆದರೆ ಜೀವರಕ್ಷಕ ಔಷಧಿಗಳ ಮೇಲೆ ಸುಂಕವನ್ನು ಹೇರುವುದು ಈ ಅಭಿಯಾನಕ್ಕೆ ಹಿನ್ನಡೆಯುಂಟು ಮಾಡಲಿದೆ’’ ಎಂದವರು ಹೇಳಿದ್ದಾರೆ.

 ಕಿರಣ್ ಮಜುಂದಾರ್ ಅವರ ಆತಂಕಕ್ಕೆ, ಭಾರತೀಯ ಔಷಧಿ ಉತ್ಪಾದಕ ಸಂಘಟನೆಯ ಮಹಾನಿರ್ದೇಶಕ ರಂಜನಾ ಸ್ಮೆತಾಸೆಕ್ ಕೂಡಾ ಧ್ವನಿಗೂಡಿಸಿದ್ದಾರೆ. ಸರಕಾರದ ಈ ನಡೆಯು ಭಾರತೀಯ ರೋಗಿಗಳು ಜೀವರಕ್ಷಕ ಔಷಧ ಅವಲಂಬಿಸುವುದಕ್ಕೆ ತಡೆಯೊಡ್ಡುವುದೆಂದು ಅವರು ಹೇಳಿದ್ದಾರೆ. ಜೀವರಕ್ಷಕ ಔಷಧಗಳಿಗೆ ಅಬಕಾರಿ ಸುಂಕ ಹೇರಿಕೆಯಿಂದ, ವಿಶೇಷವಾಗಿ ವಿದೇಶಿ ಉತ್ಪಾದಕರು ಪೂರೈಕೆ ಮಾಡುವ ಔಷಧಗಳನ್ನು ಅವಲಂಭಿಸಿರುವ ರೋಗಿಗಳ ಮೇಲೆ ಗಂಭೀರ ಪರಿಣಾಮವನ್ನು ಬೀರಲಿದೆಯಂದು ಅಂತಾರಾಷ್ಟ್ರೀಯ ಮಾನವತಾಸಂಸ್ಥೆ ‘ಮೆಡಿಸಿನ್ಸ್ ಸ್ಯಾನ್ಸ್ ಫ್ರಂಟಿಯರ್ಸ್‌’ನ ಕಾರ್ಯಕರ್ತೆ, ಖ್ಯಾತ ನ್ಯಾಯವಾದಿ ಲೀನಾ ಮೆಂಘಾನೆ ಹೇಳಿದ್ದಾರೆ.‘ಮೆಡಿಸಿನ್ಸ್ ಸ್ಯಾನ್ಸ್ ಫ್ರಂಟಿಯರ್ಸ್‌’ ಸಂಸ್ಥೆಯು ಬಡರೋಗಿಗಳಿಗೆ ಯೋಗ್ಯಬೆಲೆಯಲ್ಲಿ ಔಷಧವನ್ನು ಒದಗಿಸುವ ಅಭಿಯಾನವನ್ನು ನಡೆಸುತ್ತಿದೆ.
 ಅಬಕಾರಿ ಸುಂಕ ಹೇರಿಕೆಯಿಂದ ಕೆಲವು ಔಷಧಿಗಳ ದರಗಳು ಶೇ. 22ರಿಂದ ಶೇ.35ಕ್ಕೇರಲಿದೆಯೆಂದು, ಔಷಧ ಉದ್ಯಮ ವಲಯಗಳು ತಿಳಿಸಿವೆ.
 ಇದೀಗ ಅಬಕಾರಿ ಹಾಗೂ ಕಸ್ಟಮ್ಸ್ (ಸಿಬಿಇಸಿ) ಕುರಿತ ಕೇಂದ್ರೀಯ ಮಂಡಳಿಯು, ಜೀವರಕ್ಷಕ ಔಷಧಿಗಳು ಸೇರಿದಂತೆ 74 ಔಷಧಿಗಳಿಗೆ ನೀಡಲಾಗುತ್ತಿರುವ ಅಬಕಾರಿ ಸುಂಕ ವಿನಾಯಿತಿಯನ್ನು ರದದುಪಡಿಸುವ ಬಗ್ಗೆ ಅಧಿಸೂಚನೆಯನ್ನು ಜಾರಿಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X