Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ-ಪುರುಷಕೋಡಿ ಹದಗೆಟ್ಟ ರಸ್ತೆ...

ಕೊಣಾಜೆ-ಪುರುಷಕೋಡಿ ಹದಗೆಟ್ಟ ರಸ್ತೆ ಖಂಡಿಸಿ ನಾಗರಿಕರಿಂದ ಪ್ರತಿಭಟನೆ: ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ8 Feb 2016 7:33 PM IST
share
ಕೊಣಾಜೆ-ಪುರುಷಕೋಡಿ ಹದಗೆಟ್ಟ ರಸ್ತೆ ಖಂಡಿಸಿ  ನಾಗರಿಕರಿಂದ ಪ್ರತಿಭಟನೆ: ಮಾತಿನ ಚಕಮಕಿ

ಕೊಣಾಜೆ: ಕಳೆದ ಹಲವಾರು ವರ್ಷಗಳಿಂದ ಹದಗೆಟ್ಟು ಹೋಗಿರುವ ಕೊಣಾಜೆ-ಪುರುಷಕೋಡಿ ರಸ್ತೆಯ ಸರಿಪಡಿಸಬೇಕೆಂದು ಆಗ್ರಹಿಸಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷವನ್ನು ಖಂಡಿಸಿ ನಾಗರಿಕರು ಸೋಮವಾರ ಪುರುಷಕೋಡಿ ಬಳಿ ಪ್ರತಿಭಟನೆ ನಡೆಸಿದರು. ಆದರೆ ಪ್ರತಿಭಟನೆಗೆ ಮುನ್ನ ಚುನಾವಣಾ ಬಹಿಷ್ಕಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರಲ್ಲಿ ಭಿನ್ನಮತ ಸ್ಪೋಟಗೊಂಡು ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. ವಾಗ್ವಾದದ ಬಳಿಕ ಪ್ರತಿಭಟನಾಕಾರರಲ್ಲಿ ಒಂದು ಗುಂಪು ಚುನಾವಣಾ ಬಹಿಷ್ಕಾರ ತೀರ್ಮಾಣಕ್ಕೆ ಒಪ್ಪದೆ ಪ್ರತಿಭಟನೆಯನ್ನು ನಡೆಸಿದರೆ ಇನ್ನೊಂದು ಗುಂಪು ಚುನಾವಣೆಯನ್ನು ಬಹಿಷ್ಕರಿಸುವ ತೀರ್ಮಾಣವನ್ನು ಕೈಗೊಂಡು ರಸ್ತೆಯಲ್ಲಿ ಪ್ರತಿಭಟನೆಯನ್ನು ನಡೆಸಿ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹಲವಾರು ವರ್ಷಗಳಿಂದ ಹದಗಟ್ಟು ಹೋಗಿರುವ ರಸ್ತೆ ಹಾಗೂ ಇದರ ಬಗ್ಗೆ ಜನಪ್ರತಿನಿಧಿಗಳ ನಿರ್ಲಕ್ಷದ ವಿರುದ್ದ ಕೊಣಾಜೆ ಪುರುಷ ಕೋಡಿಯ ನಾಗರಿಕರು ಚುನಾವಣೆ ಬಹಿಷ್ಕರಿಸಿ ಪ್ರತಿಭಟನೆ ನಡೆಸುವ ತೀರ್ಮಾನವನ್ನು ಕಳೆದ ವಾರ ತೆಗೆದುಕೊಂಡಿದ್ದರು. ಇದರಂತೆ ಸೋಮವಾರದಂದು ಬೆಳಿಗ್ಗೆ ಕೊಣಾಜೆ ಪುರುಷಕೋಡಿ ರಸ್ತೆಯ ರುದ್ರಭೂಮಿ ಬಳಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ನಾಗರಿಕರು ಸೇರಿದ್ದರು. ಆದರೆ ಇಲ್ಲಿ ಸೇರಿದ್ದವರಲ್ಲಿ ಒಂದು ಗುಂಪು ನಾವು ಪ್ರತಿಭಟನೆಗೆ ಸಿದ್ದರಿದ್ದೇವೆ ಆದರೆ ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ ಎಂದು ಹೇಳಿದಾಗ ಇನ್ನೊಂದು ಗುಂಪಿನ ನಾಗರಿಕರ ನಡುವೆ ಮಾತಿನ ಚಕಮಕಿ ನಡೆದು ವಾಗ್ವಾದ ನಡೆಯಿತು. ಪ್ರತ್ಯೇಕ ಪ್ರತಿಭಟನೆ

ಚುನಾವಣಾ ಬಹಿಷ್ಕಾರಕ್ಕೆ ಸಂಬಂಧಿಸಿದಂತೆ ಅಲ್ಲಿ ಸೇರಿದ ನಾಗರಿಕರಲ್ಲಿ ಭಿನ್ನಮತ ಇದ್ದುದರಿಂದ ಸೇರಿದ್ದವರಲ್ಲಿ ಒಂದು ಗುಂಪು ನಾವು ರಸ್ತೆಯ ಅವ್ಯವಸ್ಥೆಯನ್ನು ಖಂಡಿಸಿ ಚುನಾವಣೆಯನ್ನು ಬಹಿಷ್ಕರಿಸಿಯೇ ಸಿದ್ದ ಎಂದು ಹೇಳಿ ಜನಪ್ರತಿನಿಧಿಗಳ ವಿರುದ್ದ ಘೋಷನೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರಸ್ತೆ ಅಭಿವೃದ್ದಿ ಆದ ನಂತರವೇ ನಾವು ಮುಂದಿನ ಚುನಾವಣೆಯಲ್ಲಿ ಭಾಗವಹಿಸಿ ರಸ್ತೆ ಅಭಿವದ್ದಿಯನ್ನು ಮಾಡಿದ ಪಕ್ಷವನ್ನು ನಾವು ಬೆಂಬಲಿಸುತ್ತೇವೆ ಎಂದರು. ಒಂದು ಗುಂಪಿನ ಪ್ರತಿಭಟನೆಯ ಬಳಿಕ ಇನ್ನೊಂದು ಗುಂಪಿನ ನಾಗರಿಕರು ಪ್ರತಿಭಟನೆಯನ್ನು ನಡೆಸಿ ಮತದಾನ ನಮ್ಮ ಹಕ್ಕು. ಅದನು ಕಸಿಯುವ ಹಕ್ಕು ಯಾರಿಗೂ ಇಲ್ಲ. ಆದರೆ ನಾವು ರಸ್ತೆಯ ಅಭಿವದ್ದಿಗಾಗಿ ನಡೆಯುವ ಪ್ರತಿಭಟನೆಗೆ ನಮ್ಮ ಸಹಕಾರ ಇದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥ ವರದರಾಜ್, ಜಯರಾಮ ಶೆಟ್ಟಿ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಇಲ್ಲಿಯ ರಸ್ತೆಗೆ ಡಾಂಬಾರು ಹಾಕಲಾಗಿತ್ತು. ಆದರೆ ಬಳಿಕ ಬಂದ ಕಾಂಗ್ರೆಸ್ ಶಾಸಕರು ಇಲ್ಲಿಯ ರಸ್ತೆಯ ಗಮನವೇ ಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.

ರಸ್ತೆ ಅಭಿವೃದ್ಧಿಗಾಗಿ ಚುನಾವಣಾ ಬಹಿಷ್ಕಾರದ ತೀರ್ಮಾನದೊಂದಿಗೆ ನಡೆದ ನಾಗರಿಕರ ಪ್ರತಿಭಟನೆ 

ರಸ್ತೆ ಅಭಿವೃದ್ಧಿಗಾಗಿಇನ್ನುಂದು ಗುಂಪಿನ ನಾಗರಿಕರಿಂದ ನಡೆದ ಪ್ರತಿಭಟನೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X