Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗಿಗಳ ವಿಳಂಬ ಆಗಮನ ತಡೆಯಲು...

ಉದ್ಯೋಗಿಗಳ ವಿಳಂಬ ಆಗಮನ ತಡೆಯಲು ವಾಟ್ಸ್‌ಆ್ಯಪ್ ಬಳಕೆ

ವಾರ್ತಾಭಾರತಿವಾರ್ತಾಭಾರತಿ8 Feb 2016 11:17 PM IST
share

 ಚೆನ್ನೈ,ಫೆ.8: ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕ್ಲಪ್ತ ಸಮಯಕ್ಕೆ ಹಾಜರಾಗುವುದು ತೀರಾ ಅಪರೂಪವಾಗಿದೆ. ಹೀಗಾಗಿ, ಚೆನ್ನೈ ಮಹಾನಗರಪಾಲಿಕೆಯು ನಗರ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರ (ಯುಪಿಎಚ್‌ಸಿ)ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಮಾಡಲು ವಿನೂತನ ಉಪಾಯವೊಂದನ್ನು ಕಂಡುಹಿಡಿದಿದೆ.
 
ಯುಪಿಎಚ್‌ಸಿಯ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಹಾಜರಾಗುವುದನ್ನು ನಿಲ್ಲಿಸಲು, ಚೆನ್ನೈ ಬೃಹನ್ನಗರಪಾಲಿಕೆಯು, ‘ವಾಟ್ಸ್‌ಆ್ಯಪ್’ ಮೆಸೆಜಿಂಗ್ ಅಪ್ಲಿಕೇಶನ್ ಅನ್ನು ಬಳಸಲಾರಂಭಿಸಿದೆ. ಮಹಾನಗರಪಾಲಿಕೆಯ ಎಲ್ಲ ವಲಯ ಅಧಿಕಾರಿಗಳು ಪ್ರತಿದಿನವೂ 15 ವಲಯಗಳಲ್ಲಿ ಕನಿಷ್ಠ ಬೆಳಗ್ಗೆ 8:00 ಗಂಟೆಯಿಂದ 8:30ರೊಳಗೆ ಕನಿಷ್ಠ ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿ, ಹಾಜರಿರುವ ಸಿಬ್ಬಂದಿಯ ಫೋಟೋ ತೆಗೆದು, ಅವರ ಹಾಜರಾತಿ ವಿವರಗಳ ಸಮೇಪ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಕಳುಹಿಸಿಕೊಡಬೇಕಾಗುತ್ತದೆ.
 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಲವಾರು ವೈದ್ಯರು,ನರ್ಸ್‌ಗಳು, ಫಾರ್ಮಾಸಿಸ್ಟ್‌ಗಳು ಹಾಗೂ ಲ್ಯಾಬ್ ತಂತ್ರಜ್ಞರು, ತಡವಾಗಿ ಬರುತ್ತಾರೆಂದು ಹಾಗೂ ಬೇಗ ನಿರ್ಗಮಿಸುತ್ತಾರೆಂದು ರೋಗಿಗಳು ದೂರು ನೀಡಿದ ಬಳಿಕ ಈ ಕ್ರಮಕ್ಕೆ ಮುಂದಾಗಿದೆ. ಚೆನ್ನೈನಲ್ಲಿ 140 ಯುಪಿಎಚ್‌ಸಿಗಳಿದ್ದು, ಅವು ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ನಡುವೆ ಕಾರ್ಯನಿರ್ವಹಿಸುತ್ತವೆ. ಪ್ರತಿಯೊಂದು ಕೇಂದ್ರವೂ ಪ್ರತಿದಿನ ಸರಾಸರಿ 150 ರೋಗಿಗಳಿಗೆ ಚಿಕಿತ್ಸೆ ನೀಡುತ್ತದೆ.
  ಯುಪಿಎಚ್‌ಸಿಗಳಲ್ಲಿ ಮಾತ್ರವಲ್ಲದೆ,ಚೆನ್ನೈ ಮಹಾನಗರಪಾಲಿಕೆಯು, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಕಾಮಗಾರಿ ಚಟುವಟಿಕೆಗಳ ಮೇಲೂ ಕಣ್ಗಾವಲಿರಿಸಲು ವಾಟ್ಸ್‌ಆ್ಯಪ್‌ನ್ನು ಬಳಸಿಕೊಳ್ಳುತ್ತಿದೆ. ಆದಾಗ್ಯೂ, ತನ್ನ 26 ಇಲಾಖೆಗಳ 30 ಸಾವಿರಕ್ಕೂ ಅಧಿಕ ಉದ್ಯೋಗಿಗಳ ಹಾಜರಾತಿ ದಾಖಲಿಸಲು ಬಯೋಮೆಟ್ರಿಕ್‌ವ್ಯವಸ್ಥೆಯನ್ನು ಅಳವಡಿಸುವ ನಗರಪಾಲಿಕೆಯ ಯೋಜನೆಯು ಇನ್ನೂ ಕಡತಗಳಲ್ಲಷ್ಟೇ ಬಾಕಿಯುಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X