Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕಾರಣಿಗಳಲ್ಲಿ ಬದ್ಧತೆ, ನೈತಿಕ ಮೌಲ್ಯ...

ರಾಜಕಾರಣಿಗಳಲ್ಲಿ ಬದ್ಧತೆ, ನೈತಿಕ ಮೌಲ್ಯ ಕಣ್ಮರೆ: ದೊರೆಸ್ವಾಮಿ ಆತಂಕ

ವಾರ್ತಾಭಾರತಿವಾರ್ತಾಭಾರತಿ8 Feb 2016 11:18 PM IST
share
ರಾಜಕಾರಣಿಗಳಲ್ಲಿ ಬದ್ಧತೆ, ನೈತಿಕ ಮೌಲ್ಯ ಕಣ್ಮರೆ: ದೊರೆಸ್ವಾಮಿ ಆತಂಕ

‘ಮಹಾಯಾನ’ ಲೋಕಾರ್ಪಣೆ
ಬೆಂಗಳೂರು, ಫೆ. 8: ಹಿಂದಿನ ರಾಜಕಾರಣಿಗಳಲ್ಲಿದ್ದ ರಾಜಕೀಯ ಬದ್ಧತೆ, ನೈತಿಕ ವೌಲ್ಯ ಇಂದಿನ ರಾಜಕಾರಣಿಗಳಲ್ಲಿ ಕಾಣುತ್ತಿಲ್ಲ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಕಸಾಪದಲ್ಲಿ ಜಾಣಗೆರೆ ಪತ್ರಿಕೆ ಪ್ರಕಾಶನ ಮತ್ತು ಅನಿಕೇತನ ಕನ್ನಡ ಬಳಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ರಚಿಸಿರುವ ‘ಮಹಾಯಾನ’ ಬೃಹತ್ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸ್ವಾತಂತ್ರಾನಂತರದ ದಿನಗಳ ರಾಜಕಾರಣಿಗಳಲ್ಲಿದ್ದ ರಾಜಕೀಯ ಬದ್ಧತೆ, ನೈತಿಕತೆ ಇಂದಿನ ರಾಜಕಾರಣಿ ಗಳಲ್ಲಿ ಕಾಣಸಿಗುವುದಿಲ್ಲ. ಇವತ್ತಿನ ರಾಜಕೀಯ ಭ್ರಷ್ಟಾಚಾರದ ಹೊಲಸಿನಿಂದ ಹದಗಟ್ಟಿದೆ. ಪಕ್ಷಗಳ ನಾಯಕರು ಕಾಲು ಎಳೆಯುವ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಅಧಿವೇಶನಗಳಲ್ಲಿ ಜನರ ಸಮಸ್ಯೆಗಳು ಸಮರ್ಪಕವಾಗಿ ಚರ್ಚೆಯಾಗಲು ರಾಜಕೀಯ ನಾಯಕರು ಅಡ್ಡಗಾಲಾಗಿ ಸಮಯ ವ್ಯರ್ಥಮಾಡುತ್ತಿದ್ದಾರೆ. ಇಂತಹ ಅವಿವೇಕಿಗಳು ನಮ್ಮನ್ನು ಆಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಜನರ ಮಧ್ಯೆ ಇದ್ದು, ಸಮಸ್ಯೆಗಳನ್ನು ಆಲಿಸುವವರಿಗೆ ಇಂದು ಜನ ಬೆಂಬಲ ಸಿಗುತ್ತಿಲ್ಲ. ಖಂಡ ಮತ್ತು ಹೆಂಡ ತಿನ್ನಿಸುವವರಿಗೆ ಮಾತ್ರ ಅಧಿಕಾರ ದೊರೆಯುತ್ತಿದೆ. ಇದು ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ರಾಜಕೀಯ ಗೂಂಡಾ ಸಾಮ್ರಾಜ್ಯವಾಗುವ ಭಯ ನನ್ನಲ್ಲಿ ಆವರಿಸಿದೆ ಎಂದು ಎಚ್.ಎಸ್.ದೊರೆಸ್ವಾಮಿ ಆತಂಕ ವ್ಯಕ್ತಪಡಿಸಿದರು.
 ಜಾಣಗೆರೆ ವೆಂಕಟರಾಮಯ್ಯ ಮಹಾಯಾನದಲ್ಲಿ ಹಿಂದಿನ ರಾಜಕಾರಣದ ಸಿದ್ಧಾಂತಗಳನ್ನು ಮತ್ತು ಆಡಳಿತ ವೈಖರಿಯನ್ನು ಹಿಡಿ ಹಿಡಿಯಾಗಿ ಬಿಂಬಿಸಿದ್ದಾರೆ. ಹಿಂದಿನ ರಾಜಕಾರಣಿಗಳ ಸೇವಾ ಮನೋಭಾವ ಇಂದಿನ ರಾಜಕಾರಣಿಗಳ ಸೇವೆಗೆ ತುಲನೆ ಮಾಡಿದ್ದಾರೆ ಎಂದು ತಿಳಿಸಿದರು.
ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮಿ ಮಾತನಾಡಿ, ನಾವು ಹಿಂದಿನ ಶತಮಾನ ಗಳಲ್ಲಿ ಅಪೂರ್ವವಾದ ಮಾನವನ ವಿಕಾಸವನ್ನು ಗುರುತಿಸು ವಂತಹ ಕಾಲಘಟ್ಟಗಳನ್ನು ಕಂಡಿದ್ದೇವೆ. ಆದರೆ 20ನೆ ಶತಮಾನ ವಿಕಾಶದ ಜೊತೆಗೆ ವಿನಾಶದ ಸಂಕೇತಗಳು ಪ್ರತಿಬಿಂಬಿಸುತ್ತಿವೆ. ದೇಶದಲ್ಲಿ ಗಾಂಧಿವಾದದ ಪ್ರಭಾವ ಕಡಿಮೆಯಾಗುತ್ತಿರುವ ಪರಿಣಾಮ ಮಾನವೀಯ ವೌಲ್ಯಗಳ ಅಂಧಃಪತನ ಕ್ರಮೇಣ ಜಾಸ್ತಿಯಾಗುತ್ತಿವೆ ಎಂದು ವರು ಕಳವಳಪಟ್ಟರು.
ಇಂದು ಶಾಂತಿ-ಪ್ರೀತಿಯನ್ನು ಸಾರಬೇಕಿದ್ದ ಕೇಂದ್ರಗಳು ಸ್ಥಾನಪಲ್ಲಟಗೊಂಡು ದ್ವೇಷ- ಅಸೂಯೆ ಯನ್ನು ಪ್ರಚೋದಿಸುವ ಕಾರ್ಯ ಮಾಡುತ್ತಿವೆ. ಈ ಪರಿಣಾಮ ಸಮಾಜ ಯಾವುದನ್ನು ಸ್ವೀಕರಿಸಬೇಕು, ಯಾವುದನ್ನ ತಿರಸ್ಕರಿಸಬೇಕು ಎಂಬ ಗೊಂದಲದಲ್ಲಿ ಸಿಲುಕಿದೆ. ಈ ಗೊಂದಲ ಯುವ ಸಮುದಾಯವನ್ನೂ ಬಿಟ್ಟಿಲ್ಲ. ನಾವು ಮಾರ್ಗದರ್ಶಕರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಪದೇ ಪದೇ ಮೋಸಹೋಗುತ್ತಿರುವುದೇ ಇದಕ್ಕೆಲ್ಲ ಕಾರಣ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್, ಕಸಾಪದ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಲೇಖಕ ಡಾ. ಭೈರಮಂಗಲ ರಾಮೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X